ಪ್ರತಿಷ್ಠಿತ 95ನೇ ಆಸ್ಕರ್‌ ಪ್ರಶಸ್ತಿ ಪ್ರದಾನಕ್ಕೆ ದಿನಗಣನೆ -ದೀಪಿಕಾ ಪಡುಕೋಣೆಗೆ ನಿರೂಪಣೆ ಜವಾಬ್ದಾರಿ, ಒಟಿಟಿಯಲ್ಲಿ ನೇರಪ್ರಸಾರಕ್ಕೆ ವ್ಯವಸ್ಥೆ

ಪ್ರತಿಷ್ಠಿತ 95ನೇ ಆಸ್ಕರ್‌ ಪ್ರಶಸ್ತಿ ಪ್ರದಾನಕ್ಕೆ ದಿನಗಣನೆ -ದೀಪಿಕಾ ಪಡುಕೋಣೆಗೆ ನಿರೂಪಣೆ ಜವಾಬ್ದಾರಿ, ಒಟಿಟಿಯಲ್ಲಿ ನೇರಪ್ರಸಾರಕ್ಕೆ ವ್ಯವಸ್ಥೆ

ನ್ಯೂಸ್‌ ಆ್ಯರೋ : ವಿಶ್ವದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ 95ನೇ ಆಸ್ಕರ್‌ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಇನ್ನು ಕೇವಲ 4 ದಿನಗಳು ಮಾತ್ರ ಬಾಕಿ ಇದೆ. 2023ರ ಮಾರ್ಚ್ 12ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ.

ಯಾವ ಚಲನಚಿತ್ರಗಳು, ನಟರು ಮತ್ತು ತಂತ್ರಜ್ಞರು ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗಳನ್ನು ಗೆಲ್ಲುತ್ತಾರೆ ಎಂಬುದನ್ನು ನೋಡಲು ಜಗತ್ತಿನಾದ್ಯಂತ ಚಿತ್ರ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ.


ಬಹುನಿರೀಕ್ಷಿತ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಪ್ರಕಾರ ಈ ಈವೆಂಟ್ ಸಂಜೆ 5.30 ರಂದು ಆರಂಭವಾಗಲಿದೆ ಎಂದು ಪ್ರಮುಖ ಒಟಿಟಿ ಪ್ಲಾಟ್‌ಫಾರ್ಮ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಘೋಷಿಸಿದೆ. ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ಚಲನಚಿತ್ರ ಪ್ರೇಮಿಗಳು ಆಸ್ಕರ್ ಸಮಾರಂಭದ ನೇರ ಪ್ರಸಾರವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ಆಸ್ಕರ್ ಪ್ರಶಸ್ತಿಯ ಕಂಚಿನ ಪ್ರತಿಮೆಯನ್ನು ಹೊಂದಿದ್ದು, ಅದಕ್ಕೆ 24 ಕ್ಯಾರೆಟ್‌ನ ಬಂಗಾರದ ಹೊದಿಕೆಯನ್ನು ಹೊದಿಸಲಾಗಿದೆ. ಹಲವು ವರ್ಷಗಳಿಂದ ಈ ಪ್ರಶಸ್ತಿ ತನ್ನ ಪ್ರಾಮುಖ್ಯತೆಯನ್ನು ಕಳೆದುಕೊಂಡಿಲ್ಲ. ಇದುವರೆಗೂ ಸುಮಾರು 3000ಕ್ಕೂ ಅಧಿಕ ಪ್ರತಿಭೆಗಳು ಹಾಗೂ ನಿರ್ಮಾಣ ಸಂಸ್ಥೆಗಳಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

2023ರಲ್ಲೂ ಆಸ್ಕರ್ ಪ್ರಶಸ್ತಿಗೆ ಪೈಪೋಟಿ ಜೋರಾಗಿದೆ. ಎಸ್‌ಎಸ್ ರಾಜಮೌಳಿ ಅವರ ಆರ್‌ಆರ್‌ಆರ್‌ನ ‘ನಾಟು ನಾಟು’ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಅಂತಿಮ ನಾಮನಿರ್ದೇಶನದಲ್ಲಿದ್ದು, ಪ್ರಶಸ್ತಿಯ ಹೊಸ್ತಿಲಿನಲ್ಲಿದೆ.

ನಿರೂಪಕಿಯಾಗಿ ದೀಪಿಕಾ: 2022ನೇ ಸಾಲಿನ ಕೇನ್ಸ್‌ನಲ್ಲಿ ತೀರ್ಪುಗಾರರಾಗಿ ದೀಪಿಕಾ, ಆಸ್ಕರ್‌ನಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ. ಈ ಮಾಹಿತಿಯನ್ನು ದೀಪಿಕಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಈ ಸಮಾರಂಭದಲ್ಲಿ ಹತ್ತು ಜನ ನಿರೂಪಕರು ಕೆಲಸ ಮಾಡಲಿದ್ದಾರೆ. ಅದರಲ್ಲಿ ದೀಪಿಕಾ ಪಡುಕೋಣೆ ಕೂಡ ಒಬ್ಬರು. ದೀಪಿಕಾ ಜೊತೆ ಮೆಲಿಸ್ಸಾ ಮೆಕಾರ್ಥಿ, ಜಾನೆಲ್ಲೆ ಮೋನೆ, ಜೆನ್ನಿಫರ್ ಕೊನ್ನೆಲ್ಲಿ, ಸ್ಯಾಮ್ಯುಯೆಲ್ ಎಲ್ ಜಾಕ್ಸನ್, ಜೋ ಸಲ್ಡಾನಾ ಸೇರಿದಂತೆ ಇತರರು ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *