ಸುದೀಪ್ ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು ಎಂದ ಡಿ ಬಾಸ್ – ಮುನಿಸು ಮರೆತು ಮತ್ತೇ ಒಂದಾಗ್ತಾರಾ ದಚ್ಚು–ಕಿಚ್ಚ..!?
- ಮನರಂಜನೆ
- December 22, 2022
- No Comment
- 186
ನ್ಯೂಸ್ ಆ್ಯರೋ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಹೊಸಪೇಟೆಯಲ್ಲಿ ನಡೆದ ಘಟನೆ ಬಗ್ಗೆ ಕಿಚ್ಚ ಸುದೀಪ್ ಸುದೀರ್ಘ ಟ್ವೀಟ್ ಮಾಡಿ ಘಟನೆಯನ್ನು ಖಂಡಿಸಿದ್ದರು. ಇದೀಗ ಕಿಚ್ಚ ಟ್ವೀಟ್ಗೆ ದರ್ಶನ್ ಪ್ರತಿಕ್ರಿಯಿಸಿದ್ದು, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸುದೀಪ್ ಗೆ ಟ್ಯಾಗ್ ಮಾಡಿ, ಕಿಚ್ಚ ಸುದೀಪ್ ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು ಎಂದು ಪ್ರತಿಕ್ರಿಯಿಸಿದ್ದಾರೆ.
ಈಚೆಗೆ ಬಳ್ಳಾರಿಯ ಹೊಸಪೇಟೆಯಲ್ಲಿ ಕ್ರಾಂತಿ ಸಿನಿಮಾದ ಹಾಡಿನ ಬಿಡುಗಡೆ ಸಮಾರಂಭದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ ನಡೆಯಿತು. ಕನ್ನಡ ಚಿತ್ರರಂಗದ ನಟ, ನಟಿಯರು ಸಾಮಾಜಿಕ ಜಾಲತಾಣದಲ್ಲಿ ಈ ಘಟನೆಯನ್ನು ಖಂಡಿಸಿ, ದರ್ಶನ್ ಪರ ನಿಂತಿದ್ದರು.
ಒಂದು ಕಾಲದ ಸ್ನೇಹಿತರು, ಕಳೆದ ಕೆಲ ವರ್ಷಗಳಿಂದ ದೂರವಾಗಿದ್ದ ಸುದೀಪ್ ಅವರು ಕೂಡ ಸುದೀರ್ಘ ಪತ್ರವನ್ನು ಬರೆದು ದರ್ಶನ್ ಪರ ನಿಂತಿದ್ದರು.
ಟ್ವೀಟ್ನಲ್ಲಿ ದರ್ಶನ್ ಚಿತ್ರೋದ್ಯಮಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಮ್ಮ ನಡುವೆ ಭಿನ್ನಾಭಿಪ್ರಾಯವಿದೆ ಎಂದಾಕ್ಷಣ ನನ್ನ ಮನಸ್ಸಿಗೆ ತಟ್ಟಿದ ವಾಸ್ತವ ವಿಷಯಗಳ ಬಗ್ಗೆ ಮಾತನಾಡುವುದನ್ನು ನಾನೆಂದಿಗೂ ನಿಲ್ಲಿಸುವುದಿಲ್ಲ. ಚಪ್ಪಲಿ ಎಸೆಯುವಂತಹ ಕೃತ್ಯಗಳಿಗೆ ಖಂಡಿತಾ ದರ್ಶನ್ ಅರ್ಹರಲ್ಲ, ಈ ಘಟನೆ ನನ್ನ ಮನಸ್ಸನ್ನು ಘಾಸಿಗೊಳಿಸಿದೆ. ಹೀಗೆ ಕಿಚ್ಚ ಸುದೀಪ್ ಸುದೀರ್ಘ ಪತ್ರವನ್ನು ಬರೆದಿದ್ದರು.
ತುಂಬಿದ ಜನರ ಮಧ್ಯೆ ಒಬ್ಬರ ಕ್ಷುಲ್ಲಕ ನಡವಳಿಕೆ ಇಡೀ ವ್ಯವಸ್ಥೆಯನ್ನು ಹಾಳು ಮಾಡಬಾರದು, ಪ್ರೀತಿ, ಗೌರವ ಮತ್ತು ಘಟನೆಯನ್ನು ಎತ್ತಿ ತೋರಿಸುವ ಪುನೀತ್ ಅಭಿಮಾನಿಗಳು ಅದನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿರಬಹುದು.