2ನೇ ಬಾರಿಗೆ ತಂದೆಯಾದ ‘ಗೂಗ್ಲಿ’ ನಿರ್ದೇಶಕ ಪವನ್‌ ಒಡೆಯರ್‌ – ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ ಅಪೇಕ್ಷಾ

2ನೇ ಬಾರಿಗೆ ತಂದೆಯಾದ ‘ಗೂಗ್ಲಿ’ ನಿರ್ದೇಶಕ ಪವನ್‌ ಒಡೆಯರ್‌ – ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ ಅಪೇಕ್ಷಾ

ನ್ಯೂಸ್ ಆ್ಯರೋ‌ : ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಪವನ್‌ ಒಡೆಯರ್‌ ಅವರ ಪತ್ನಿ ಅಪೇಕ್ಷಾ ಪುರೋಹಿತ್‌ ಎರಡನೇ ಮಗುವಿಗೆ ಜನ್ಮ ನೀಡಿದ್ದು, ಸೋಶಿಯಲ್‌ ಮೀಡಿಯಾ ಮೂಲಕ ಪವನ್‌ ಈ ಸುದ್ದಿಯನ್ನು ಬಹಿರಂಗಪಡಿಸಿದ್ದಾರೆ. ತಂದೆಯಾದ ‘ಗೂಗ್ಲಿ’ ನಿರ್ದೇಶಕನಿಗೆ ಅಭಿಮಾನಗಳು, ಸ್ನೇಹಿತರು, ಸೆಲೆಬ್ರಿಟಿಗಳು ಅಭಿನಂದನೆ ಸಲ್ಲಿಸುತ್ತಿದ್ದು, ನಿರ್ದೇಶಕ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿ ಅಭಿಮಾನಿಗಳಿಗೆ ಖಷಿ ಸುದ್ದಿ ನೀಡಿದ್ದಾರೆ.

ಪವನ್ ಒಡೆಯರ್ ಈ ಖುಷಿಯ ವಿಷಯವನ್ನು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದು, ಒಂದು ಫೋಟೋವನ್ನು ಆಪ್ಲೋಡ್ ಮಾಡಿದ್ದಾರೆ. ಆ ಫೋಟೋದಲ್ಲಿ ಅಪೇಕ್ಷಾ ಬೆಡ್ ಮೇಲೆ ಮಲಗಿದ್ದಾರೆ. ಪಕ್ಕದಲ್ಲಿ ಪವನ್ ಒಡೆಯರ್ ಇದ್ದಾರೆ. ‘ಹೆಣ್ಣು ಮಗು ಜನಿಸಿದೆ’ ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ಈ ದಂಪತಿ ತಮ್ಮ ಪುಟ್ಟ ಲೋಕಕ್ಕೆ ರಾಜಕುಮಾರಿಯನ್ನು ಸ್ವಾಗತಿಸಿದ್ದು, ಈ ಫೋಟೋಗೆ ಎಲ್ಲರೂ ಶುಭಾಶಯ ತಿಳಿಸಿ ಕಮೆಂಟ್ ಮಾಡಿದ್ದಾರೆ. ‘ಶುಭಾಶಯಗಳು ಅಪೇಕ್ಷಾ ಮತ್ತು ಪವನ್’ ಎಂದು ನಿಧಿ ಸುಬ್ಬಯ್ಯ ಬರೆದುಕೊಂಡಿದ್ದು, ಕೆಲವರು ತಾಯಿ ಹಾಗೂ ಮಗುವಿನ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಸದ್ಯ ಈ ಪೋಸ್ಟ್ ಸಾವಿರಾರು ಲೈಕ್ಸ್ ಪಡೆದಿದೆ.

ಇನ್ನು ಮನೆಗೆ ಪುಟ್ಟ ದೇವತೆಯ ಆಗಮನವಾಗಿದ್ದು, ಹೊಸ ಸದಸ್ಯೆಯ ಆಗಮನದಿಂದ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಮಗು ಹಾಗೂ ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

‘ಗೂಗ್ಲಿ’, ‘ನಟಸಾರ್ವಭೌಮ’ದಂತಹ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿ ಪವನ್ ಒಡೆಯರ್ ಫೇಮಸ್ ಆಗಿದ್ದು, ನಟಿ, ನಿರ್ಮಾಪಕಿ ಆಗಿ ಅಪೇಕ್ಷಾ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಫ್ಯಾಷನ್ ಡಿಸೈನರ್ ಆಗಿಯೂ ಗಮನ ಸೆಳೆದಿದ್ದಾರೆ. ‘ಡೊಳ್ಳು’ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದರು. ಈ ಸಿನಿಮಾ ಸಾಕಷ್ಟು ಪ್ರಶಸ್ತಿ ಗೆದ್ದಿದೆ.

2017ರಲ್ಲಿ ಅಪೇಕ್ಷಾ ಮತ್ತು ಪವನ್ ಒಡೆಯರ್‌ ನಿಶ್ಚಿತಾರ್ಥ ನೆರವೇರಿತ್ತು. 2018ರ ಆಗಸ್ಟ್‌ನಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು. ಅಪೇಕ್ಷಾ ಕೂಡ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಕಿರುತೆರೆಯ ‘ತ್ರಿವೇಣಿ ಸಂಗಮ’ ಧಾರಾವಾಹಿಯಲ್ಲಿ ಅವರು ನಟಿಸಿದ್ದಾರೆ. ಟಿ.ಎನ್‌. ಸೀತಾರಾಮ್‌ ನಿರ್ದೇಶನದ ‘ಕಾಫಿ ತೋಟ’ ಮುಂತಾದ ಸಿನಿಮಾಗಳಲ್ಲೂ ಅವರು ಅಭಿನಯಿಸಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *