ನಿರ್ದೇಶಕ ಯೋಗರಾಜ್ ಭಟ್ ಪ್ರಕಾರ ಈ ಬಾರಿ ಅಧಿಕಾರಕ್ಕೆ ಬರುವ ಪಕ್ಷ ಯಾವುದು? – ವಿಕಟಕವಿ ಹೇಳಿದ್ದೇನು?

ನಿರ್ದೇಶಕ ಯೋಗರಾಜ್ ಭಟ್ ಪ್ರಕಾರ ಈ ಬಾರಿ ಅಧಿಕಾರಕ್ಕೆ ಬರುವ ಪಕ್ಷ ಯಾವುದು? – ವಿಕಟಕವಿ ಹೇಳಿದ್ದೇನು?

ನ್ಯೂಸ್ ಆ್ಯರೋ‌ : ಅಂತೂ ರಾಜ್ಯದಲ್ಲಿ ಮತದಾನ ಯಶಸ್ವಿಯಾಗಿ ಮುಗಿದಿದೆ. ಇನ್ನೇನಿದ್ದರೂ ಮೇ 13ರಂದು ಪ್ರಕಟವಾಗುವ ಫಲಿತಾಂಶಕ್ಕಾಗಿ ಕುತೂಹಲದಿಂದ ಕಾಯುವ ಕೆಲಸ. ಈ ಮಧ್ಯೆ ಸಮೀಕ್ಷೆ ಮುಂದೆ ಯಾರು ಅಧಿಕಾರಕ್ಕೆ ಬರಬಹುದು ಎಂದು ಊಹಿಸುತ್ತಿದ್ದರೆ, ಗಣ್ಯರು ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಕೇಳಲಾದ ಪ್ರಶ್ನೆಗೆ ನಿರ್ದೇಶಕ ಯೋಗರಾಜ್ ಭಟ್ ಜಾಣತನದಿಂದ ಉತ್ತರಿಸಿದ್ದಾರೆ.

ಮತದಾನ ಮುಗಿಯುತ್ತಿದ್ದಂತೆಯೇ ಯೋಗರಾಜ್ ಭಟ್ ವೀಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವೀಡಿಯೋದಲ್ಲಿ ಮಹಿಳೆ ಮತ್ತು ಆಕೆಯ ಪುತ್ರಿ ಯೋಗರಾಜ್ ಭಟ್ಟರಿಗೆ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ. ಆ ಪ್ರಶ್ನೆಗಳಿಗೆ ಭಟ್ಟರು ನೀಡಿದ ಉತ್ತರ ಇಲ್ಲಿದೆ.

ಸರ್ ವೋಟ್ ಹಾಕಿದ್ರಾ? ನಿಮ್ಮದು ಯಾವ ಪಕ್ಷ ? ನೀವು ಯಾರ ಪರ? ಸಿನಿಮಾದ ಕೆಲವರು ಪ್ರಚಾರಕ್ಕೆ ಹೋದರೂ ನೀವು ಯಾಕೆ ಹೋಗಲಿಲ್ಲ? ಹೀಗೆ ಹಲವು ಪ್ರಶ್ನೆಗಳನ್ನು ಭಟ್ಟರಿಗೆ ಕೇಳಿದ್ದಾರೆ. ಕೊನೆಗೆ ಯಾವ ಪಾರ್ಟಿ ಬರಬಹುದು ಅಂತ ನಿಮಗೆ ಅನಿಸತ್ತೆ? ಎಂದು ಕೇಳಲಾದ ಪ್ರಶ್ನೆಗೆ ಭಟ್ಟರು ಜಾಣ್ಮೆಯಿಂದಲೇ ಉತ್ತರಿಸಿದ್ದಾರೆ.

‘ಜಮಾನಾ ಫಾಸ್ಟ್ ಆಗಿದೆ. ಮುಂಚೆ 5 ದಿನದ ಟೆಸ್ಟ್ ಕ್ರಿಕೆಟ್ ಇತ್ತು. ಆಮೇಲೆ ಒಂದು ದಿನ ಆಡೋದು ಕಷ್ಟ ಆಯ್ತು. ಈಗ 20 ಓವರ್ ಗೆ ಬಂದಿದೆ. ಮುಂದೆ ಕೇವಲ ಹೈಲೈಟ್ಸ್ ನೋಡೋದು ಬರಬಹುದು. 3 ಗಂಟೆ ಸಿನಿಮಾದಿಂದ 20 ಸೆಕೆಂಡ್ ರೀಲ್ಸ್ ಗೆ ಬಂದಿದೆ. ಇನ್ನು ಐದು ವರ್ಷಕ್ಕೊಂದು ಎಲೆಕ್ಷನ್. ನಾಲ್ಕೈದು ಜನ ಕುರ್ಚಿ ಮೇಲೆ ಕೂತು ಏಳ್ತಾರೆ. ವರ್ಷಕ್ಕೆ ಒಬ್ಬರು ಕೂರ್ತಾರೆ ಅಂದರೆ ವರ್ಷಕ್ಕೆ ಒಂದು ಎಲೆಕ್ಷನ್ ಲೆಕ್ಕವೇ ಆಯ್ತು. ಕಾಲನೇ ಫಾಸ್ಟ್ ಆಗಿದೆ. ಹೀಗಾಗಿ ಕಾಲನ ಪ್ರಶ್ನೆ ಮಾಡಬಾರದು’ ಎಂದು ಉತ್ತರಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *