ಭಾರತದ ಮೂರು ಚಿತ್ರಗಳು ಆಸ್ಕರ್‌ಗೆ ನಾಮಿನೇಟ್‌: ದೇಶದಲ್ಲಿ ಎಷ್ಟೊತ್ತಿಗೆ, ಯಾವುದರಲ್ಲಿ ಆಸ್ಕರ್ ಆವಾರ್ಡ್‌ ಸಮಾರಂಭ ನೋಡಬಹದು ಗೊತ್ತಾ…

ಭಾರತದ ಮೂರು ಚಿತ್ರಗಳು ಆಸ್ಕರ್‌ಗೆ ನಾಮಿನೇಟ್‌: ದೇಶದಲ್ಲಿ ಎಷ್ಟೊತ್ತಿಗೆ, ಯಾವುದರಲ್ಲಿ ಆಸ್ಕರ್ ಆವಾರ್ಡ್‌ ಸಮಾರಂಭ ನೋಡಬಹದು ಗೊತ್ತಾ…

ನ್ಯೂಸ್‌ ಆ್ಯರೋ : ಭಾರತದ ಮೂರು ಚಿತ್ರಗಳು ಆಸ್ಕರ್‌ಗೆ ನಾಮಿನೇಟ್‌ ಆಗುವ ಮೂಲಕ ಈ ಬಾರಿ ಆಸ್ಕರ್ ಪ್ರಶಸ್ತಿ ಸಮಾರಂಭ ಭಾರತೀಯರಿಗೆ ವಿಶೇಷವೇನಿಸಿದೆ. 95ನೇ ಆಸ್ಕರ್‌ ಅವಾರ್ಡ್‌ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಅಮೆರಿಕಾದ ಲಾಸ್‌ಏಂಜಲಸ್‌ನಲ್ಲಿ ಈ ಕಲರ್‌ಫುಲ್‌ ಸಮಾರಂಭಕ್ಕೆ ಬೃಹತ್‌ ವೇದಿಕೆ ಸಿದ್ಧವಾಗಿದೆ.

ಈ ಬಾರಿಯ ಆಸ್ಕರ್ ಭಾರತೀಯರಿಗೆ ತುಂಬಾ ವಿಶೇಷ: ಭಾರತದಿಂದ ಅತ್ಯುತ್ತಮ ಸಾಕ್ಷ್ಯಚಿತ್ರ ವಿಭಾಗ ಮತ್ತು ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರ ವಿಭಾಗದಲ್ಲಿ ಎರಡು ಚಿತ್ರಗಳು ಆಯ್ಕೆಯಾಗಿವೆ. ಆರ್‌ ಆರ್‌ ಆರ್‌ನ ಜನಪ್ರಿಯ ಹಾಡು ‘ನಾಟು ನಾಟು’ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ. ಆಲ್ ದಟ್ ಬ್ರೀತ್ ಅತ್ಯುತ್ತಮ ಸಾಕ್ಷ್ಯಚಿತ್ರಕ್ಕಾಗಿ ಭಾರತದಿಂದ ಸೇರ್ಪಡೆಗೊಂಡರೆ, ದಿ ಎಲಿಫೆಂಟ್ ವಿಸ್ಪರ್ಸ್ ಚಿತ್ರವನ್ನು ಅತ್ಯುತ್ತಮ ಕಿರುಚಿತ್ರವಾಗಿ ಸೇರಿಸಲಾಗಿದೆ. ಈ ಹಿನ್ನೆಲೆ ಭಾರತೀಯರು ಈ ಬಾರಿ ಮೂರು ಪ್ರಶಸ್ತಿಯೂ ನಮ್ಮ ದೇಶಕ್ಕೆ ಲಭಿಸಲಿ ಎಂದು ಹಾರೈಸುತ್ತಿದ್ದಾರೆ.

ಭಾರತದಲ್ಲಿ ನಾಳೆ ನೇರ ಪ್ರಸಾರ:

ಇನ್ನೂ ಭಾರತದ ಸಿನಿಮಾಗಳು ಗುರುತಿಸಿಕೊಂಡಿರುವುದರಿಂದ ಈ ಸಮಾರಂಭವನ್ನು ಹೇಗೆ ವೀಕ್ಷಣೆ ಮಾಡುವುದು ಎಂಬುದು ಕೆಲವರಿಗೆ ಗೊಂದಲವಿರುತ್ತದೆ. ಇಂದು ಸಂಜೆ (ಮಾರ್ಚ್ 12) ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ರಾತ್ರಿ 8 ಗಂಟೆಗೆ ಈ ಅವಾರ್ಡ್‌ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಭಾರತೀಯ ಕಾಲಮಾನದ ಪ್ರಕಾರ, ಈ ಕಾರ್ಯಕ್ರಮದ ನೇರ ಪ್ರಸಾರವನ್ನು ಮಾರ್ಚ್13 ರಂದು ಬೆಳಗ್ಗೆ 5:30 ಕ್ಕೆ ವೀಕ್ಷಿಸಬಹುದು. ಪ್ರಶಸ್ತಿ ಸಮಾರಂಭದ ಸ್ಟ್ರೀಮಿಂಗ್ ಅನ್ನು YouTube, Hulu Live TV, DirecTV, FUBO TV, AT&T TVಯಲ್ಲಿ ವೀಕ್ಷಣೆ ಮಾಡಬಹುದು. ಎಬಿಸಿ ನೆಟ್‌ವರ್ಕ್ ಪ್ರಸಾರದ ಹಕ್ಕು ಪಡೆದುಕೊಂಡಿದೆ. ಭಾರತದಲ್ಲಿ ಈ ಕಾರ್ಯಕ್ರಮವನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು.

ನಿರೂಪಕಿಯಾಗಿ ದೀಪಿಕಾ ಪಡುಕೋಣೆ:

ಈ ಬಾರಿ ಭಾರತದಿಂದ ದೀಪಿಕಾ ಪಡುಕೋಣೆ ಪ್ರಶಸ್ತಿ ಕಾರ್ಯಕ್ರಮದಲ್ಲಿ ನಿರೂಪಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಸಲದ ಆಸ್ಕರ್‌ ಅವಾರ್ಡ್‌ ಕಾರ್ಯಕ್ರಮದಲ್ಲಿ ದೀಪಿಕಾ ಭಾರತವನ್ನು ಪ್ರತಿನಿಧಿಸುತ್ತಿಲ್ಲವಾದರೂ, ವಿಶ್ವದ ಅತಿದೊಡ್ಡ ಪ್ರಶಸ್ತಿ ಕಾರ್ಯಕ್ರಮದಲ್ಲಿ ಹಾಜರಿ ಹಾಕಲಿದ್ದಾರೆ. ದೀಪಿಕಾ ಅವರೊಂದಿಗೆ ಎಮಿಲಿ ಬ್ಲಂಟ್, ಡ್ವೇನ್ ಜಾನ್ಸನ್, ಸ್ಯಾಮ್ಯುಯೆಲ್ ಎಲ್ ಜಾಕ್ಸನ್, ರಿಜ್ ಅಹ್ಮದ್, ಝೋ ಸಲ್ಡಾನಾ, ಮೈಕೆಲ್ ಬಿ. ಜೋರ್ಡಾನ್ ಸೇರಿ ಅನೇಕ ನಟರು ಕಾಣಿಸಿಕೊಳ್ಳಲಿದ್ದಾರೆ.

Related post

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ ಸುತ್ತ ಭದ್ರತೆ ಹೆಚ್ಚಿಸಿದ ಮುಂಬೈ ಪೊಲೀಸರು

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ…

ನ್ಯೂಸ್‌ ಆ್ಯರೋ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಇದೀಗ ಜೀವ ಬೆದರಿಕೆಯೊಡ್ಡಿ ಇ ಮೇಲ್‌ ಬಂದ ಹಿನ್ನೆಲೆಯಲ್ಲಿ ಮನೆಯ ಸುತ್ತಲೂ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಕಳೆದ ವರ್ಷ…
ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ ಉದ್ಘಾಟಿಸಿ ಪೋಷಕರಿಗೆ ಕಿವಿಮಾತು ಹೇಳಿದ್ದೇನು?

ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ…

ನ್ಯೂಸ್‌ ಆ್ಯರೋ : ಸರ್ಕಾರಿ ಶಾಲೆ ಉಳಿವಿಗಾಗಿ ಮಕ್ಕಳು, ಗ್ರಾಮಸ್ಥರು ಹೋರಾಡುವ ಕಥೆಯನ್ನು ಸಿನಿಮಾ ಮಾಡಿ ಎಲ್ಲರ ಮನಸ್ಸನ್ನು ಗೆದ್ದಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ನಾನು…
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ ಸಾಧ್ಯತೆ, ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ…

ನ್ಯೂಸ್‌ ಆ್ಯರೋ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗವು ಇದೇ ತಿಂಗಳ ಕೊನೆಯ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಮೇ…

Leave a Reply

Your email address will not be published. Required fields are marked *