ರಶ್ಮಿಕಾ ಮಂದಣ್ಣ ಧಿಮಾಕಿನ ಮಾತಿಗೆ ನಿರ್ದೇಶಕ ರಿಷಬ್ ಶೆಟ್ಟಿ ಖಡಕ್ ರಿಪ್ಲೈ – ರಶ್ಮಿಕಾ ಕುರಿತು ರಿಷಬ್ ಹೇಳಿದ್ದೇನು??

ನ್ಯೂಸ್ ಆ್ಯರೋ : ಕಳೆದ ಸುಮಾರು ಒಂದು ತಿಂಗಳ ಹಿಂದೆ ಸಂದರ್ಶನವೊಂದರಲ್ಲಿ ತನ್ನ ಯಶಸ್ಸಿಗೆ ಕಾರಣರಾಗಿರುವ ಪ್ರೊಡಕ್ಷನ್ ಹಾಗೂ ನಿರ್ದೇಶಕರ ಹೆಸರನ್ನು ಹೇಳದೆ ಧಿಮಾಕಿನಿಂದ ವರ್ತಿಸಿಕೊಂಡ ರಶ್ಮಿಕಾ ನಡವಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಆದರೆ ವಿವಾದಗಳಿಂದ ದೂರ ಉಳಿದಿರುವ ರಿಷಬ್ ಶೆಟ್ಟಿಯವರೇ ರಶ್ಮಿಕಾಗೆ ಖಡಕ್ಕಾಗಿ ಪ್ರತಿಕ್ರಿಯಿಸಿದ್ದು, ಸದ್ಯ ಇದೀಗ ವೈರಲ್ ಆಗಿದೆ.

ರಶ್ಮಿಕಾ ಯೂಟ್ಯೂಬ್ ಚಾನೆಲ್‌ವೊಂದಕ್ಕೆ ಸಂದರ್ಶನ ನೀಡುವಾಗ ತಮ್ಮ ಸಿನಿ ಜರ್ನಿ ಬಗ್ಗೆ ಹೇಳುವಾಗ ಕಿರಿಕ್ ಪಾರ್ಟಿ ಸಿನಿಮಾದ ಹೆಸರನ್ನು ಹೇಳಲು ಹಿಂದೇಟು ಹಾಕಿದ್ದಾರೆ. ಅಲ್ಲದೇ ತನಗೆ ಅವಕಾಶ ನೀಡಿದ ನಿರ್ಮಾಣ ಸಂಸ್ಥೆಯ ಹೆಸರನ್ನು ಹೇಳದೇ ಧಿಮಾಕಿನಿಂದ ಕೈಗಳಿಂದ ಕೋಟ್ ರೀತಿಯಲ್ಲಿ ಸನ್ನೆ ಮಾಡಿ ತೋರಿಸಿದ್ದಾರೆ. ಇದು ರಿಷಬ್ ಶೆಟ್ಟಿ ಸೇರಿದಂತೆ ಅವರ ಅಭಿಮಾನಿಗಳ ಅಕ್ರೋಶಕ್ಕೆ ಕಾರಣವಾಗಿದೆ.

ಒಳ್ಳೆಯ ಸಮಯಕ್ಕೆ ಕಾಯುತ್ತಿದ್ದ ರಿಷಬ್ ಸಂದರ್ಶನವೊಂದರಲ್ಲಿ ಸಮಂತಾ, ಸಾಯಿಪಲ್ಲವಿ, ಕೀರ್ತಿ ಸುರೇಶ್, ರಶ್ಮಿಕಾ ಇವರಲ್ಲಿ ಯಾರ ನಟನೆ ಇಷ್ಟ..? ಯಾರೊಂದಿಗೆ ನಟಿಸ್ತೀರಾ ಎಂಬ ಪ್ರಶ್ನೆ ಕೇಳಲಾಗಿತ್ತು.

ಇದಕ್ಕೆ ಅವರು ರಶ್ಮಿಕಾ ಹೆಸರನ್ನು ಎಲ್ಲಿಯೂ ಪ್ರಸ್ತಾಪಿಸದೇ ಸ್ಕ್ರಿಪ್ಟ್ ಮುಗಿದ ಮೇಲೆ ಕಲಾವಿದರ ಬಗ್ಗೆ ಯೋಚಿಸುತ್ತೇನೆ. ಹೊಸ ಕಲಾವಿದರ ಜೊತೆ ನಟಿಸಲು ಇಷ್ಟಪಡುತ್ತೇನೆ. ನೀವು ಹೇಳಿದ ಹೆಸರುಗಳಲ್ಲಿ (ಕೋಟ್ ರೀತಿಯಲ್ಲಿ ಸನ್ನೆ ಮಾಡಿ) ನಟಿಯರು ನನಗೆ ಇಷ್ಟವಿಲ್ಲ. ಸಮಂತಾ, ಸಾಯಿಪಲ್ಲವಿ ಅಭಿನಯ ಇಷ್ಟವಾಗುತ್ತೆ ಎಂದಿದ್ದಾರೆ. ಹೀಗೆ ರಶ್ಮಿಕಾ ಅವರ ಧಿಮಾಕಿಗೆ ಅವರ ರೀತಿಯಲ್ಲೇ ರಿಷಬ್ ಶೆಟ್ಟಿ ತಿರುಗೇಟು ನೀಡಿದ್ದಾರೆ.‌‌

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *