ದೊಡ್ಮನೆ ಕುಟುಂಬದ ಮತ್ತೊಂದು ಕುಡಿ ಸಿನಿಮಾರಂಗಕ್ಕೆ ಎಂಟ್ರಿ – ಅಣ್ಣಾವ್ರ ಸಿನಿಮಾದ ಹಾಡೇ ಚಿತ್ರಕ್ಕೆ ಶೀರ್ಷಿಕೆ

ದೊಡ್ಮನೆ ಕುಟುಂಬದ ಮತ್ತೊಂದು ಕುಡಿ ಸಿನಿಮಾರಂಗಕ್ಕೆ ಎಂಟ್ರಿ – ಅಣ್ಣಾವ್ರ ಸಿನಿಮಾದ ಹಾಡೇ ಚಿತ್ರಕ್ಕೆ ಶೀರ್ಷಿಕೆ

ನ್ಯೂಸ್‌ ಆ್ಯರೋ : ಇದೀಗ ದೊಡ್ಮನೆ ಕುಟುಂಬದ ಮತ್ತೊಂದು ಕುಡಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದು, ಸಿನಿಮಾಗೆ ರಾಜ್‌ಕುಮಾರ್ ಅವರ ಚಿತ್ರದ ಹಾಡನ್ನೇ ಶೀರ್ಷಿಕೆಯನ್ನಾಗಿ ಇಡಲಾಗಿದೆ.

‘ಚಿನ್ನದ ಮಲ್ಲಿಗೆ ಹೂವೇ’ ಸಿನಿಮಾದ ನಾಯಕ ನಟನಾಗಿ ರಾಜ್‌ಕುಮಾರ್ ಮೊಮ್ಮಗ ಷಣ್ಮುಖ ಗೋವಿಂದರಾಜ್ ಅಭಿನಯಿಸುವ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಡಾ.ರಾಜ್‌ಕುಮಾರ್ ಹಾಗೂ ಪಾರ್ವತಮ್ಮ ರಾಜ್‌ಕುಮಾರ್ ದಂಪತಿಯ ಹಿರಿಯ ಪುತ್ರಿ ಲಕ್ಷ್ಮಿ ಹಾಗೂ ಗೋವಿಂದರಾಜ್ ದಂಪತಿಯ ಪುತ್ರ ಷಣ್ಮುಖ ಗೋವಿಂದರಾಜ್ ಅವರು ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ನವಿಲುಗರಿ ನವೀನ್ ಪಿ.ಬಿ ಅವರು ಆ್ಯಕ್ಷನ್ ಕಟ್ ಹೇಳಿದ್ದು, ಸಿನಿಮಾಗೆ ರಾಜ್‌ ಕುಮಾರ್ ಸಿನಿಮಾದ ಹಾಡನ್ನೇ ಶೀರ್ಷಿಕೆಯನ್ನಾಗಿ ಇಟ್ಟಿದ್ದು ವಿಶೇಷ. ಇದೀಗ ಚಿನ್ನದ ಮಲ್ಲಿಗೆ ಹೂವೇ ಸಿನಿಮಾದ ಮೂಲಕ ಷಣ್ಮುಖ ಅವರು ಪೂರ್ಣ ಪ್ರಮಾಣದ ಹೀರೋ ಆಗಿ ಮಿಂಚಲು ರೆಡಿಯಾಗಿದ್ದಾರೆ.

ಈ ಚಿತ್ರಕ್ಕೆ ‘ಸಾರಾ ವಜ್ರ’ ಚಿತ್ರವನ್ನು ನಿರ್ದೇಶನ ಮಾಡಿದ್ದ ಆರ್ನಾ ಸಾಧ್ಯ ಅವರು ಬಂಡವಾಳ ಹೂಡಿದ್ದಾರೆ. ಸಂಭ್ರಮ ಮೀಡಿಯಾ ಹೌಸ್ ಎಂಬ ಸಂಸ್ಥೆಯ ಮೂಲಕ ಚಿನ್ನದ ಮಲ್ಲಿಗೆ ಹೂವೇ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *