ದೊಡ್ಮನೆ ಕುಟುಂಬದ ಮತ್ತೊಂದು ಕುಡಿ ಸಿನಿಮಾರಂಗಕ್ಕೆ ಎಂಟ್ರಿ – ಅಣ್ಣಾವ್ರ ಸಿನಿಮಾದ ಹಾಡೇ ಚಿತ್ರಕ್ಕೆ ಶೀರ್ಷಿಕೆ
- ಮನರಂಜನೆ
- August 20, 2023
- No Comment
- 122
ನ್ಯೂಸ್ ಆ್ಯರೋ : ಇದೀಗ ದೊಡ್ಮನೆ ಕುಟುಂಬದ ಮತ್ತೊಂದು ಕುಡಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದು, ಸಿನಿಮಾಗೆ ರಾಜ್ಕುಮಾರ್ ಅವರ ಚಿತ್ರದ ಹಾಡನ್ನೇ ಶೀರ್ಷಿಕೆಯನ್ನಾಗಿ ಇಡಲಾಗಿದೆ.
‘ಚಿನ್ನದ ಮಲ್ಲಿಗೆ ಹೂವೇ’ ಸಿನಿಮಾದ ನಾಯಕ ನಟನಾಗಿ ರಾಜ್ಕುಮಾರ್ ಮೊಮ್ಮಗ ಷಣ್ಮುಖ ಗೋವಿಂದರಾಜ್ ಅಭಿನಯಿಸುವ ಮೂಲಕ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಡಾ.ರಾಜ್ಕುಮಾರ್ ಹಾಗೂ ಪಾರ್ವತಮ್ಮ ರಾಜ್ಕುಮಾರ್ ದಂಪತಿಯ ಹಿರಿಯ ಪುತ್ರಿ ಲಕ್ಷ್ಮಿ ಹಾಗೂ ಗೋವಿಂದರಾಜ್ ದಂಪತಿಯ ಪುತ್ರ ಷಣ್ಮುಖ ಗೋವಿಂದರಾಜ್ ಅವರು ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ನವಿಲುಗರಿ ನವೀನ್ ಪಿ.ಬಿ ಅವರು ಆ್ಯಕ್ಷನ್ ಕಟ್ ಹೇಳಿದ್ದು, ಸಿನಿಮಾಗೆ ರಾಜ್ ಕುಮಾರ್ ಸಿನಿಮಾದ ಹಾಡನ್ನೇ ಶೀರ್ಷಿಕೆಯನ್ನಾಗಿ ಇಟ್ಟಿದ್ದು ವಿಶೇಷ. ಇದೀಗ ಚಿನ್ನದ ಮಲ್ಲಿಗೆ ಹೂವೇ ಸಿನಿಮಾದ ಮೂಲಕ ಷಣ್ಮುಖ ಅವರು ಪೂರ್ಣ ಪ್ರಮಾಣದ ಹೀರೋ ಆಗಿ ಮಿಂಚಲು ರೆಡಿಯಾಗಿದ್ದಾರೆ.
ಈ ಚಿತ್ರಕ್ಕೆ ‘ಸಾರಾ ವಜ್ರ’ ಚಿತ್ರವನ್ನು ನಿರ್ದೇಶನ ಮಾಡಿದ್ದ ಆರ್ನಾ ಸಾಧ್ಯ ಅವರು ಬಂಡವಾಳ ಹೂಡಿದ್ದಾರೆ. ಸಂಭ್ರಮ ಮೀಡಿಯಾ ಹೌಸ್ ಎಂಬ ಸಂಸ್ಥೆಯ ಮೂಲಕ ಚಿನ್ನದ ಮಲ್ಲಿಗೆ ಹೂವೇ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.