BIGG BOSS KANNADA : ಡ್ರೋನ್ ಪ್ರತಾಪ್ ಆತ್ಮಹತ್ಯೆ ಯತ್ನ ವದಂತಿ – ಸ್ಪಷ್ಟನೆ ನೀಡಿದ ಕಲರ್ಸ್ ಕನ್ನಡ PRO ಮನೋಜ್ ಹೇಳಿದ್ದೇನು?

BIGG BOSS KANNADA : ಡ್ರೋನ್ ಪ್ರತಾಪ್ ಆತ್ಮಹತ್ಯೆ ಯತ್ನ ವದಂತಿ – ಸ್ಪಷ್ಟನೆ ನೀಡಿದ ಕಲರ್ಸ್ ಕನ್ನಡ PRO ಮನೋಜ್ ಹೇಳಿದ್ದೇನು?

ನ್ಯೂಸ್ ಆ್ಯರೋ : ಸದ್ಯ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ಕಾರ್ಯಕ್ರಮದ ಸ್ಪರ್ಧಿ ಡ್ರೋನ್ ಪ್ರತಾಪ್‌ ಆತ್ಮಹತ್ಯೆಗೆ ಯತ್ನಿಸಿರುವ ವದಂತಿಗಳ ನಡುವೆ ಕಲರ್ಸ್ ಕನ್ನಡದ PRO ಮನೋಜ್ ಸ್ಪಷ್ಟನೆ ನೀಡಿದ್ದಾರೆ‌.

ಕಳೆದೆರಡು ದಿನಗಳ ಹಿಂದೆ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜ್ಯೋತಿಷಿ ವಿದ್ಯಾಶಂಕರ್ ಅವರು ಡ್ರೋನ್ ಪ್ರತಾಪ್ ಅವರಿಗೆ ಮನೆಯವರ ಜೊತೆಯಿಂದ ದೂರವಿರುವಂತೆ ಕಿವಿ ಮಾತು ಹೇಳಿದ್ದರು.

ಇದರಿಂದ ಮಾನಸಿಕ ಖಿನ್ನತೆಗೆ ಜಾರಿದ ಡ್ರೋನ್ ಪ್ರತಾಪ್ ಎರಡು ದಿನಗಳಿಂದ ಊಟ-ಉಪಹಾರ ಸೇವಿಸಿರಲಿಲ್ಲ‌. ಹಾಗಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಅವರು ಚೇತರಿಸಿಕೊಂಡಿದ್ದು, ಇಂದು ಮತ್ತೆ ಬಿಗ್ ಬಾಸ್ ಮನೆಗೆ ಮರಳಲಿದ್ದಾರೆ ಎಂದು ಕಲರ್ಸ್ ಕನ್ನಡ PRO ಮನೋಜ್ ಸ್ಪಷ್ಟನೆ ನೀಡಿದ್ದಾರೆ.

ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಪ್ರತಾಪ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಅಂತ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಕೆಲವು ಮಂದಿ ಪ್ರತಾಪ್ ಅವರು ವಿಟಮಿನ್ ಮಾತ್ರೆಗಳನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೂಡ ಹೇಳುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ನಮ್ಮ ಮಗನಿಗೆ ಫುಡ್ ಪಾಯ್ಸನ್ ಆಗಿದೆ ಎಂದು ಡ್ರೋನ್ ಪ್ರತಾಪ್ ತಂದೆ ಕೂಡ ಸ್ಪಷ್ಟನೆ ನೀಡಿದ್ದಾರೆ.

ಈ ಹಿಂದೆ ‘ಡ್ರೋನ್’ ಮೂಲಕ ರಾಜ್ಯದಲ್ಲಿ ಭಾರಿ ಸುದ್ದಿಯಾದ ಡ್ರೋನ್ ಪ್ರತಾಪ್ ಸದ್ಯ ಬಿಗ್ ಬಾಸ್ ಸ್ಪರ್ಧಿಯಾಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಬಹಳ ಮುಗ್ದನಂತೆ ಆಟವಾಡುತ್ತಿರುವ ಡ್ರೋನ್ ಪ್ರತಾಪ್ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದು ಉತ್ತಮ ಆಟ ಪ್ರದರ್ಶಿಸುತ್ತಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *