ಅಪಘಾತದಲ್ಲಿ ಗಾಯಗೊಂಡ ತುಳುನಾಡ ಮಾಣಿಕ್ಯ ಅರವಿಂದ್ ಬೋಳಾರ್ – ಖಾಸಗಿ ಆಸ್ಪತ್ರೆಗೆ ದಾಖಲು
- ಮನರಂಜನೆ
- January 30, 2023
- No Comment
- 283
ನ್ಯೂಸ್ ಆ್ಯರೋ : ತುಳು ಚಿತ್ರರಂಗದ ಖ್ಯಾತ ನಟ, ಯಕ್ಷಗಾನ ಕಲಾವಿದ ಅರವಿಂದ ಬೋಳಾರ್ ಅವರು ಅಪಘಾತದಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳೂರಿನ ಪಂಪ್ ವೆಲ್ ಬಳಿ ಸ್ಕೂಟಿ ಚಲಾಯಿಸುತ್ತಿದ್ದ ವೇಳೆ ಸ್ಕೂಟಿ ಸ್ಕಿಡ್ ಆಗಿದ್ದು, ಅರವಿಂದ ಬೋಳಾರ್ ಅವರಿಗೆ ಗಾಯಗಳಾಗಿವೆ.
ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆ ಯೆನಪೋಯಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅರವಿಂದ ಬೋಳಾರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅಭಿಮಾನಿಗಳು ಭಯಪಡುವಂಥದ್ದೇನೂ ಗಂಭೀರ ಅಪಘಾತ ಅಲ್ಲವೆಂದು ಮೂಲಗಳು ಮಾಹಿತಿ ನೀಡಿವೆ.. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..