ಚಂದ್ರಯಾನ 3 ವಿರುದ್ಧ ಅವಹೇಳನಕಾರಿ, ವಿವಾದಾತ್ಮಕ ಪೋಸ್ಟ್ – ನಟ ಪ್ರಕಾಶ್ ರಾಜ್ ವಿರುದ್ಧ ದಾಖಲಾಯ್ತು ದೂರು
- ಮನರಂಜನೆ
- August 22, 2023
- No Comment
- 110
ನ್ಯೂಸ್ ಆ್ಯರೋ : ವಿವಾದಗಳಿಂದಲೇ ಸದಾ ಸುದ್ದಿಯಲ್ಲಿರುವ ನಟ ಪ್ರಕಾಶ್ ರಾಜ್ ಇದೀಗ ಚಂದ್ರಯಾನ-3 ಬಗ್ಗೆ ವ್ಯಂಗ್ಯವಾಡಲು ಹೋಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದೆಡೆ ನೆಟ್ಟಿಗರು ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ ಇನ್ನೊಂದೆಡೆ ಅವರ ವಿರುದ್ದ ದೂರು ದಾಖಲಾಗಿದೆ.
ಬನಹಟ್ಟಿಯಲ್ಲಿ ದಾಖಲಾಯ್ತು ದೂರು
ಬಾಗಲಕೋಟೆಯ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕಾಶ್ ರಾಜ್ ವಿರುದ್ದ ದೂರು ನೀಡಲಾಗಿದೆ. ಹಿಂದೂ ಸಂಘಟನೆ ಮುಖಂಡ ನಂದು ಗಾಯಕವಾಡ ಮತ್ತಿತರರು ದೂರು ನೀಡಿದ್ದಾರೆ.
ಪ್ರಕಾಶ್ ರಾಜ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಕೂಡಲೇ ಅವರನ್ನು ಬಂಧಿಸಬೇಕು. ಇಸ್ರೋ ಕಳುಹಿಸಿರುವ ಚಂದ್ರಯಾನ ನೌಕೆಯಿಂದ ಭಾರತದ ಶಕ್ತಿ ಇಮ್ಮಡಿ ಆಗಲಿದೆ. ಈ ಬಗ್ಗೆ ನಮ್ಮ ವಿಜ್ಞಾನಿಗಳನ್ನು ಎಲ್ಲರೂ ಹೊಗಳುತ್ತಿದ್ದರೆ ಪ್ರಕಾಶ್ ರಾಜ್ ಮಾತ್ರ ವ್ಯಂಗ್ಯವಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿದ್ದೇವೆ ಎಂದು ನಂದು ತಿಳಿಸಿದ್ದಾರೆ.
ಪ್ರಕಾಶ್ ರಾಜ್ ಪೋಸ್ಟ್ ಮಾಡಿದ್ದೇನು?
ಎಕ್ಸ್(ಟ್ವಿಟರ್)ನಲ್ಲಿ ಪ್ರಕಾಶ್ ರಾಜ್ ಮಾಡಿದ್ದ ಪೋಸ್ಟ್ ಇಷ್ಟೆಲ್ಲ ವಿವಾದಕ್ಕೆ ಕಾರಣವಾಗಿದೆ. ಅದರಲ್ಲಿ, ಚಂದ್ರನ ಮೇಲೆ ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್ ಚಹಾ ಸುರಿಯುತ್ತಿರುವ ವ್ಯಂಗ್ಯ ಚಿತ್ರವನ್ನು ಪೋಸ್ಟ್ ಮಾಡಿದ್ದರು. ಪ್ರಕಾಶ್ ರಾಜ್ ಅವರಿಂದ ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಅನೇಕರು ಹೇಳಿದ್ದಾರೆ.