ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿವಾಸಕ್ಕೆ ಅರಣ್ಯಾಧಿಕಾರಿಗಳ ದಾಳಿ – ಹುಲಿ ಉಗುರಿಗಾಗಿ ಹುಡುಕಾಟ, ದರ್ಶನ್ ಬಂಧನ ಸಾಧ್ಯತೆ..!!

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿವಾಸಕ್ಕೆ ಅರಣ್ಯಾಧಿಕಾರಿಗಳ ದಾಳಿ – ಹುಲಿ ಉಗುರಿಗಾಗಿ ಹುಡುಕಾಟ, ದರ್ಶನ್ ಬಂಧನ ಸಾಧ್ಯತೆ..!!

ನ್ಯೂಸ್ ಆ್ಯರೋ : ವರ್ತೂರು ಸಂತೋಷ್ ಬಂಧನದ ಬಳಿಕ ಭಾರೀ ಚರ್ಚೆಯಾಗಿದ್ದ ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ನಿವಾಸಕ್ಕೆ ಅರಣ್ಯಾಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾದ ಮಾಹಿತಿ‌ ಹೊರಬಿದ್ದಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ದರ್ಶನ್​ (Darshan) ಅವರ ನಿವಾಸದಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ದರ್ಶನ್​ ಬಳಿ ಇರುವುದು ನಿಜವಾದ ಹುಲಿ ಉಗುರು (Tiger Claw Pendant) ಹೌದೋ ಅಥವಾ ಅಲ್ಲವೋ ಎಂಬುದು ಗೊತ್ತಾಗಬೇಕಿದೆ. ಒಂದು ವೇಳೆ ಹುಲಿ ಉಗುರು ಇರುವುದು ಖಚಿತವಾದರೆ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಯಾರೆಲ್ಲಾ ಬಳಿ ಹುಲಿ ಉಗುರು ಇದೆಯೋ ಅವರಿಗೆ ನೋಟಿಸ್ ನೀಡಿದ್ದೇವೆ ಎಂದು ಬೆಂಗಳೂರಿನಲ್ಲಿ ವನ್ಯ ಜೀವಿ ಅರಣ್ಯಾಧಿಕಾರಿ ರವೀಂದ್ರ ಹೇಳಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿ ವನ್ಯ ಜೀವಿ ಸಂರಕ್ಷಣಾ ಅಧಿಕಾರಿಗಳಿಗೆ ನಾಗೇಶ್ ಫೋಟೋ ದಾಖಲೆ ಸಮೇತ ದೂರು ಕೊಟ್ಟಿದ್ದು, ನಟ ದರ್ಶನ್ ಕೊರಳಿನಲ್ಲಿ ಹುಲಿ ಉಗುರು ಧರಿಸಿದ್ದಾರೆ ಎಂದು ಫೋಟೋ ಸಮೇತ ದಾಖಲೆಗಳನ್ನೂ ನೀಡಿದ್ದಾರೆ. ಈಗಾಲಾದ್ರೂ ನಟ ದರ್ಶನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಟ ದರ್ಶನ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಗೇಶ್ ಅವರು ಬೆಂಗಳೂರಿನ ಅರಣ್ಯ ಭವನದಲ್ಲಿ ಪ್ರತಿಭಟನೆಯನ್ನೂ ಸಹ ಮಾಡಿದ್ದಾರೆ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *