ಸರ್ಕಾರದ ಆದೇಶ ಗಾಳಿಗೆ ತೂರಿದ್ರಾ ಗೋಲ್ಡನ್ ಸ್ಟಾರ್ ಗಣೇಶ್? – ಬಂಡೀಪುರ ಬಳಿಯ ಕಟ್ಟಡ ಕಾಮಗಾರಿಗೆ ಬೀಳುತ್ತಾ ಬ್ರೇಕ್?
- ಮನರಂಜನೆ
- August 12, 2023
- No Comment
- 112
ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ನಟ, ಗೋಲ್ಡನ್ ಸ್ಟಾರ್ ಗಣೇಶ್ ಖರೀದಿಸಿರುವ ಜಮೀನಿನಲ್ಲಿ ಕಾಮಗಾರಿ ಭರದಿಂದ ಸಾಗುತ್ತಿದ್ದು, ಇದೀಗ ಈ ಕಟ್ಟಡ ನಿರ್ಮಾಣಕ್ಕೆ ಸಂಕಷ್ಟ ಎದುರಾಗಿದೆ ಎಂದು ಹೇಳಲಾಗ್ತಿದೆ. ನಟ ಗಣೇಶ್ ಖರೀದಿಸಿರುವ ಜಮೀನಿನಲ್ಲಿ ಕಾಮಗಾರಿ ಭರದಿಂದ ಸಾಗಿದ್ದು, ವಾಸದ ಮನೆ ಬದಲು ಶಾಶ್ವತವಾದ ಬೃಹತ್ ಕಟ್ಟಡ ಕಟ್ಟುತ್ತಿರುವ ಆರೋಪ ಕೇಳಿ ಬಂದಿದೆ.
ಗುಂಡ್ಲುಪೇಟೆ ತಾಲೂಕಿನ ಜಕ್ಕಹಳ್ಳಿ ಗ್ರಾಮದ ಸರ್ವೆ ನಂಬರ್ 105 ರಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್ ಜಮೀನು ಖರೀದಿಸಿದ್ದಾರೆ. ಸೂಕ್ಷ್ಮ ಪರಿಸರ ವಲಯದಲ್ಲಿ ಶಾಶ್ವತ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಬಂಡೀಪುರ ಸೂಕ್ಷ್ಮ ಪರಿಸರ ವಲಯದಲ್ಲಿ 1 ಎಕರೆ 24 ಗುಂಟೆ ಭೂಮಿ ಹೊಂದಿರುವ ನಟ ಗಣೇಶ್, ಪರಿಸರ ನಿಯಮ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಸದ್ಯದ ಮಾಹಿತಿಯಂತೆ ತಾತ್ಕಾಲಿಕ ಮನೆ ನಿರ್ಮಾಣಕ್ಕೆ ಮಾತ್ರ ಅನುಮತಿ ಪಡೆದಿದ್ದರು. ಆದರೆ ಏಕಾಏಕಿ ಜೆಸಿಬಿ ಯಿಂದ ಕೆಲಸ ನಡೆಯುತ್ತಿದ್ದು, ಬೃಹತ್ ಕಟ್ಟಡಕ್ಕೆ ನಿರ್ಮಾಣಕ್ಕೆ ಸಿದ್ದತೆ ಮಾಡುತ್ತಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಕಾಮಗಾರಿ ಗಮನಿಸಿದರೆ ಬೃಹತ್ ಕಟ್ಟಡಕ್ಕೆ ಪಾಯ ಹಾಕುವಂತೆ ಕಾಣಿಸುತ್ತಿದೆ ಎಂದು ಆರೋಪಿಸಲಾಗಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರ ಈ ನಡೆಗೆ ಪರಿಸರವಾದಿಗಳಿಂದ ವ್ಯಾಪಕ ಟೀಕೆ ಕೇಳಿಬರುತ್ತಿದೆ.