ಶೂಟಿಂಗ್ ಸ್ಪಾಟ್ ನಲ್ಲಿ ಶುಭಾ ಪೂಂಜಾ ಕೈಹಿಡಿದೆಳೆದು ಯುವಕರ ಪುಂಡಾಟ – ಶೂಟಿಂಗ್ ಸೆಟ್ ಗೂ ಹಾನಿ, ಚಿತ್ರೀಕರಣವನ್ನೇ ಸ್ಥಗಿತಗೊಳಿಸಿದ ಚಿತ್ರತಂಡ

ಶೂಟಿಂಗ್ ಸ್ಪಾಟ್ ನಲ್ಲಿ ಶುಭಾ ಪೂಂಜಾ ಕೈಹಿಡಿದೆಳೆದು ಯುವಕರ ಪುಂಡಾಟ – ಶೂಟಿಂಗ್ ಸೆಟ್ ಗೂ ಹಾನಿ, ಚಿತ್ರೀಕರಣವನ್ನೇ ಸ್ಥಗಿತಗೊಳಿಸಿದ ಚಿತ್ರತಂಡ

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ನಟಿ, ಮಾಜಿ ಬಿಗ್ ಬಾಸ್ ಸ್ಪರ್ಧಿ ಶುಭಾ ಪೂಂಜಾರೊಂದಿಗೆ ಕಿಡಿಗೇಡಿಗಳು ಅಸಭ್ಯ ವರ್ತನೆ ನಡೆಸಿರುವ ಘಟನೆ ನಡೆದಿದೆ.

ಹಾಡಿನ ಚಿತ್ರೀಕರಣದ ವೇಳೆ ಕಿಡಿಗೇಡಿಗಳಿಂದ ಈ ಕೃತ್ಯ ನಡೆದಿದ್ದು ಶೂಟಿಂಗ್‌ ಸೆಟ್‌ ಧ್ವಂಸಗೊಳಿಸಿದ್ದಾರೆ. ಕಳಸ ಸಮೀಪದ ಮೈಂದಾಡಿಗುಡ್ಡ ಪ್ರದೇಶದಲ್ಲಿ ಕೊರಗಜ್ಜ ಚಿತ್ರದ ಹಾಡಿನ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ.

ಘಟನೆಯ ಕುರಿತು ಹೇಳಿಕೆ ನೀಡಿದ ನಿರ್ದೇಶಕ ಸುಧೀರ್ ಅತ್ತಾವರ, ಮೈದಾಡಿ ಗುಡ್ಡದಲ್ಲಿ ಚಿತ್ರೀಕರಣ ನಡೆಯುವ ವೇಳೆ ಯುವಕರು ನಡೆದ ರೀತಿ ಮನಸ್ಸಿಗೆ ಅತ್ಯಂತ ನೋವು ಉಂಟು ಮಾಡಿದೆ. ಯಾವುದೋ ಉದ್ದೇಶದಿಂದ ಯುವಕರು ಅಸಭ್ಯ ವರ್ತನೆ ಮಾಡಿದ್ರು, ಇದರಿಂದ ಚಿತ್ರಿಕರಣವನ್ನೇ ನಿಲ್ಲಿಸಬೇಕಾದಂತ ಪರಿಸ್ಥಿತಿ ನಿರ್ಮಾಣವಾಯಿತು. ಹಾಡಿನ ಚಿತ್ರೀಕರಣಕ್ಕಾಗಿ 50 ಜನ ಕಲಾವಿದರು, ಖ್ಯಾತ ಕೊರಿಯೋಗ್ರಾಫರ್ ಗಣೇಶ ಆಚಾರ್ಯ ಕೂಡ ಇದ್ದರು ಎಂದು ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯಾಗಿದ್ದು, ಸದ್ಯ ಘಟನೆ ಕುರಿತು ಯಾವುದೇ ದೂರು ದಾಖಲಿಸಿಲ್ಲ ಎಂದು ಅವರು ಹೇಳಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *