ವಿವಿಧ ಗಣ್ಯರಿಗೆ ಮದುವೆ ಆಮಂತ್ರಣ ಪತ್ರಿಕೆ ಹಂಚಿದ ಹರ್ಷಿಕಾ-ಭುವನ್ ಜೋಡಿ – ಯಾರೆಲ್ಲಾ ಗಣ್ಯರು ಮದುವೆಗೆ ಬರಲಿದ್ದಾರೆ ಗೊತ್ತಾ?

ವಿವಿಧ ಗಣ್ಯರಿಗೆ ಮದುವೆ ಆಮಂತ್ರಣ ಪತ್ರಿಕೆ ಹಂಚಿದ ಹರ್ಷಿಕಾ-ಭುವನ್ ಜೋಡಿ – ಯಾರೆಲ್ಲಾ ಗಣ್ಯರು ಮದುವೆಗೆ ಬರಲಿದ್ದಾರೆ ಗೊತ್ತಾ?

ನ್ಯೂಸ್ ಆ್ಯರೋ‌ : ಸ್ಯಾಂಡಲ್ ವುಡ್ ನ ಮತ್ತೊಂದು ಜೋಡಿ ಹಸೆಮಣೆಗೇರಲು ಸಿದ್ಧವಾಗಿದೆ. ಹೌದು, ಕೊಡಗು ಮೂಲದ ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಜೋಡಿ ಆಗಸ್ಟ್ 24ರಂದು ವಿರಾಜಪೇಟೆಯಲ್ಲಿ ಹಸೆಮಣೆಗೇರಲಿದೆ. ಈ ಹಿನ್ನಲೆಯಲ್ಲಿ ಇವರು ವಿವಿಧ ಕಲಾವಿದರು, ಗಣ್ಯರನ್ನು ಭೇಟಿಯಾಗಿ ಮದುವೆಯ ಆಮಂತ್ರಣ ಪತ್ರಿಕೆಯನ್ನು ಹಂಚಿದ್ದಾರೆ.

ಯಾರಿಗೆಲ್ಲ ಆಮಂತ್ರಣ ಪತ್ರಿಕೆ?

ಡಾ. ರಾಜ್ ಕುಮಾರ್ ಕುಟುಂಬದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮತ್ತು ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಭೇಟಿಯಾಗಿ ಮದುವೆಗೆ ಹರ್ಷಿಕಾ-ಭುವನ್ ಆಹ್ವಾನಿಸಿದರು.

ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಅವರನ್ನು ಈ ಜೋಡಿ ಭೇಟಿಯಾದ ಫೋಟೋ ವೈರಲ್ ಆಗಿದೆ. ರಮೇಶ್ ಅರವಿಂದ್ ಗೂ ಹರ್ಷಿಕಾ ಆಮಂತ್ರಣ ಪತ್ರ ನೀಡಿದರು. ಮಾತ್ರವಲ್ಲ ಗಣೇಶ್ ದಂಪತಿ, ಹಿರಿಯ ಕಲಾವಿದರಾದ ದೊಡ್ಡಣ್ಣ, ಸುಧಾರಾಣಿ ಮತ್ತಿತರರನ್ನು ಅವರನ್ನೂ ಹರ್ಷಿಕಾ-ಭುವನ್ ಆಹ್ವಾನಿಸಿದರು.

ಚಿತ್ರರಂಗ ಮಾತ್ರವಲ್ಲ ರಾಜಕೀಯದ ಪ್ರಮುಖರಿಗೂ ಈ ಜೋಡಿ ಆಮಂತ್ರಣ ಪತ್ರಿಕೆ ನೀಡಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿ ಹಲವು ಪ್ರಮುಖರನ್ನು ಆಹ್ವಾನಿಸಲಾಗಿದೆ.

Related post

ಅಕ್ರಮ ಭ್ರೂಣ ಹತ್ಯೆ ಹಗರಣ; ವೈದ್ಯರ ವಿರುದ್ಧದ ಪ್ರಕರಣ ರದ್ದು ಸಾಧ್ಯವಿಲ್ಲ…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ವ್ಯಾಪಿಸಿರುವ ಅಕ್ರಮ ಭ್ರೂಣ ಹತ್ಯೆ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. “ಪ್ರಕರಣ…
ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…
ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

Leave a Reply

Your email address will not be published. Required fields are marked *