
ಹಿಟ್ ಆಂಡ್ ರನ್ ಕೇಸ್, ಬೈಕ್ ಸವಾರನಿಗೆ ಗಂಭೀರ ಗಾಯ – ಗುದ್ದಿದ್ರೂ ಕಾರ್ ನಿಲ್ಲಿಸದೇ ಎಸ್ಕೇಪ್ ಆದ್ರಾ ಗಿಚ್ಚಿ ಗಿಲಿ ಗಿಲಿ ನಟ ಚಂದ್ರಪ್ರಭ?
- ಮನರಂಜನೆ
- September 6, 2023
- No Comment
- 45
ನ್ಯೂಸ್ ಆ್ಯರೋ : ಚಿಕ್ಕಮಗಳೂರು ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಹಿಟ್ ಆ್ಯಂಡ್ ರನ್ ಆಕ್ಸಿಡೆಂಟ್ ನಡೆದಿದ್ದು, ಕಾರು ಸವಾರ ಬೈಕ್ಗೆ ಗುದ್ದಿ ಎಸ್ಕೇಪ್ ಆಗಿದ್ದಾನೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬೈಕ್ಗೆ ಗುದ್ದಿ ಪರಾರಿಯಾದ ಕಾರು ಗಿಚ್ಚಿ ಗಿಲಿ ಗಿಲಿ ಕಾಮಿಡಿ ಶೋ ಕಲಾವಿದ ಚಂದ್ರಪ್ರಭಗೆ ಸೇರಿರುವುದಾಗಿ ತಿಳಿದುಬಂದಿದೆ.
KA 51 MD 9552 ರಿಜಿಸ್ಟ್ರೇಷನ್ ನಂಬರ್ ಹೊಂದಿರುವ ಕಾರು ಇದಾಗಿದ್ದು, ಇದು ಚಂದ್ರಪ್ರಭಗೆ ಸೇರಿರುವುದಾಗಿ ಗೊತ್ತಾಗಿದೆ. ಗಾಯಾಳುವನ್ನು ಚಿಕ್ಕಮಗಳೂರು ತಾಲ್ಲೂಕಿನ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂದು ಗುರುತಿಸಲಾಗಿದೆ.
ಕೆಲಸ ಮುಗಿಸಿ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ಸರ್ಕಾರಿ ಬಸ್ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ಈ ವೇಳೆ ಮಾನವೀಯತೆಗೂ ಕಾರು ನಿಲ್ಲಿಸದೆ ಸವಾರ ಎಸ್ಕೇಪ್ ಆಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಅಪಘಾತದಲ್ಲಿ ಬೈಕ್ ಸವಾರ ಮಾಲ್ತೇಶ್ ಗಂಭೀರವಾಗಿ ಗಾಯಗೊಂಡಿದ್ದಾನೆ.
ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳು ಮಾಲ್ತೇಶ್ನನ್ನು ಹಾಸನಕ್ಕೆ ರವಾನಿಸಲಾಗಿದೆ. ಆತನ ಸಂಬಂಧಿಕರು ಕಾರು ಸವಾರನ ವಿರುದ್ಧ ಚಿಕ್ಕಮಗಳೂರು ನಗರದ ಟ್ರಾಫಿಕ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.