5 ವರ್ಷದಲ್ಲಿ ₹3ಸಾವಿರ ಕೋಟಿ ಸಿನಿಮಾ ನಿರ್ಮಾಣಕ್ಕೆ ಹೂಡಿಕೆ: ಹೊಸ ವರ್ಷದಲ್ಲಿ ಹೊಂಬಾಳೆ ಫಿಲಂ ಹೊಸ ಯೋಜನೆ

5 ವರ್ಷದಲ್ಲಿ ₹3ಸಾವಿರ ಕೋಟಿ ಸಿನಿಮಾ ನಿರ್ಮಾಣಕ್ಕೆ ಹೂಡಿಕೆ: ಹೊಸ ವರ್ಷದಲ್ಲಿ ಹೊಂಬಾಳೆ ಫಿಲಂ ಹೊಸ ಯೋಜನೆ

ನ್ಯೂಸ್ ಆ್ಯರೋ: ನಾಡಿನ ಜನತೆ ಹೊಂಬಾಳೆ ಫಿಲಮ್ಸ್ ಮೇಲೆ ಇಟ್ಟಿರುವ ನಂಬಿಕೆ, ಭರವಸೆಗಳನ್ನು ಹುಸಿಯಾಗದಂತೆ ನೋಡಿಕೊಳ್ಳಲು ನಾವು ಬದ್ಧರಾಗಿದ್ದು, ಮುಂದಿನ 5 ವರ್ಷಗಳಲ್ಲಿ ಮನರಂಜನಾ ಕ್ಷೇತ್ರದಲ್ಲಿ ಸುಮಾರು ಮೂರು ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲು ಉದ್ದೇಶಿಸಿದ್ದೇವೆ ಎಂದು ಹೊಂಬಾಳೆ ಫಿಲಮ್ಸ್ ನ ವಿಜಯ್ ಕಿರಗಂದೂರು ಘೋಷಿಸಿದ್ದಾರೆ.

ಈ ಬಗ್ಗೆ ಅವರು ತಮ್ಮ ಟ್ವೀಟರ್ ನಲ್ಲಿ ಅಧಿಕೃತವಾಗಿ ಹೇಳಿಕೊಂಡಿದ್ದಾರೆ. ನಾಡಿನ ಜನತೆಗೆ ಹೊಸವರ್ಷದ ಶುಭಾಶಯ ಕೋರಿರುವ ವಿಜಯ್ ಕಿರಗಂದೂರು ಅವರು ಕಳೆದ ವರ್ಷ ನಮ್ಮನ್ನು ಬೆಂಬಲಿಸಿ ಬೆನ್ನು ತಟ್ಟಿ ಪ್ರೋತ್ಸಾಹಿಸಿದ ನಾಡಿನ ಸಮಸ್ತ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನೂತನ ವರ್ಷದಲ್ಲಿ ನವ ಸಂಕಲ್ಪದೊಂದಿಗೆ ಬೃಹತ್ ಯೋಜನೆಗಳನ್ನು ಘೋಷಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಈ ನಡೆಗೆ ಭಾರತೀಯ ಸಿನಿಮಾ ರಂಗದಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ನಿರ್ದೇಶಕರಾದ ಪ್ರಶಾಂತ್ ನೀಲ್, ಪವನ್ ಕುಮಾರ್, ನಟಿ ರಮ್ಯಾ , ಅಶ್ವಿನಿ ಪುನೀತ್ ರಾಜ್ ಕುಮಾರ್, ವಿತರಕ ಜಯಣ್ಣ ಸೇರಿದಂತೆ ಸಾಕಷ್ಟು ಮಂದಿ ಹೊಂಬಾಳೆ ಫಿಲ್ಮ್ಸ್ ಬಗ್ಗೆ ಹಾಡಿ ಹೊಗಳಿದ್ದಾರೆ.

ಈಗಾಗಲೇ ಭಾರತೀಯ ಸಿನಿಮಾ ರಂಗಕ್ಕೆ ಹೊಂಬಾಳೆ ಫಿಲ್ಮಸ್ ಕೊಟ್ಟಿರುವ ಕೊಡುಗೆಯನ್ನು ಎಲ್ಲರೂ ಸ್ಮರಿಸಿದ್ದಾರೆ. ಮೂರು ಸಾವಿರ ಕೋಟಿ ಬಂಡವಾಳ ಹೂಡುತ್ತಿರುವ ಸಂಸ್ಥೆಗೆ ದೊಡ್ಡಮಟ್ಟದ ಗೆಲುವು ಸಿಗಲಿ ಎಂದು ಎಲ್ಲರೂ ಹಾರೈಸಿದ್ದಾರೆ.

ಇಂದು ಮನರಂಜನಾ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು ನಮ್ಮ ದೇಶದಲ್ಲಿ ವೈವಿದ್ಯಮಯ ಗುಣಮಟ್ಟದ ಚಿತ್ರ ನಿರ್ಮಾಣಕ್ಕೆ ವಿಫುಲ ಅವಕಾಶವಿದೆ. ದೇಶದ ಯುವಪೀಳಿಗೆಯನ್ನು ಜಾಗೃತಗೊಳಿಸುವ ಮತ್ತು ಹೆಚ್ಚು ಪ್ರೋತ್ಸಾಹಿಸುವ ಸಲುವಾಗಿ ಮನರಂಜನಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಸೇವೆ ಮಾಡಲು ನಾವು ಉದ್ದೇಶಿಸಿದ್ದೇವೆ ಎಂದು ಹೇಳಿದ್ದಾರೆ.

ಹೊಸವರ್ಷ ಸರ್ವರಿಗೂ ಒಳಿತನ್ನು ಮಾಡಲಿ ಎಂದು ಹಾರೈಸುತ್ತಾ, ನಾಡಿನ ಜನತೆಯ ಪ್ರೀತಿ-ವಿಶ್ವಾಸ, ಬೆಂಬಲ ಪ್ರೋತ್ಸಾಹ ಹೀಗೆ ಇರಲಿ ಎಂದು ವಿಜಯ್ ಕಿರಗಂದೂರು ಹಾರೈಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *