ಚಿತ್ರವೊಂದಕ್ಕೆ 150 ಕೋಟಿ ರೂ. ಸಂಭಾವನೆ ಪಡೆದರಾ ‘ದಳಪತಿ’ ವಿಜಯ್? – ವೈರಲ್ ಸುದ್ದಿಯ ಅಸಲಿಯತ್ತೇನು?

ಚಿತ್ರವೊಂದಕ್ಕೆ 150 ಕೋಟಿ ರೂ. ಸಂಭಾವನೆ ಪಡೆದರಾ ‘ದಳಪತಿ’ ವಿಜಯ್? – ವೈರಲ್ ಸುದ್ದಿಯ ಅಸಲಿಯತ್ತೇನು?

ನ್ಯೂಸ್ ಆ್ಯರೋ‌ : ದಕ್ಷಿಣ ಭಾರತದ ನಟರ ಪೈಕಿ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವವರು ಯಾರು? ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆ. ಸದ್ಯ ತಮಿಳಿನ ದಳಪತಿ ವಿಜಯ್ ಅತ್ಯಂತ ದುಬಾರಿ ನಟ ಎನ್ನಲಾಗುತ್ತಿದೆ. ಅವರು ಮುಂದಿನ ಚಿತ್ರವೊಂದಕ್ಕೆ 150 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎನ್ನುವ ಸುದ್ದಿ ಚರ್ಚೆ ಹುಟ್ಟು ಹಾಕಿದೆ.

”ದಕ್ಷಿಣ ಭಾರತದಲ್ಲಿ ದುಬಾರಿ ಸಂಭಾವನೆ ಪಡೆಯುವ ನಟರಲ್ಲಿ ವಿಜಯ್ ಕೂಡ ಒಬ್ಬರು. ವಾಸ್ತವದಲ್ಲಿ ಅವರ ಸಂಭಾವನೆ ಸೂಪರ್ ಸ್ಟಾರ್ ರಜನೀಕಾಂತ್ ಗಿಂತ ಹೆಚ್ಚೇ ಇದೆ. ಆದರೆ 150 ಕೋಟಿ ರೂ. ಎನ್ನುವುದನ್ನು ನಂಬಲು ಸಾಧ್ಯವಿಲ್ಲ. ದಕ್ಷಿಣ ಭಾರತದ ತಾರೆಯೊಬ್ಬರಿಗೆ ಇಷ್ಟು ದುಬಾರಿ ಮೊತ್ತದ ಸಂಭಾವನೆ ನೀಡುವುದು ಸತ್ಯಕ್ಕೆ ದೂರವಾದುದು. ವಿಜಯ್ ಅಂದಾಜು 60-70 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ” ಎಂದು ಖ್ಯಾತ ನಿರ್ಮಾಪಕರೊಬ್ಬರು ಹೇಳಿದ್ದಾರೆ.

”ವಿಜಯ್ ಯಾವತ್ತೂ ಹಣದ ಹಿಂದೆ ಹೋಗಿಲ್ಲ. ಹೀಗಾಗಿ ಅವರು ಇಷ್ಟೊಂದು ದೊಡ್ಡ ಮೊತ್ತಕ್ಕೆ ಬೇಡಿಕೆ ಸಲ್ಲಿಸಲು ಸಾಧ್ಯವಿಲ್ಲ. ಅಲ್ಲದೆ ಅವರಿಗೆ ಸಂಭಾವನೆ ಮೂಲಕ ತನ್ನ ಸ್ಟಾರ್ ಗಿರಿಯನ್ನು ಸಾಬೀತು ಪಡಿಸುವ ಅಗತ್ಯವಿಲ್ಲ” ಎಂದು ಗಾಳಿಸುದ್ದಿಯನ್ನು ನಿರ್ಮಾಪಕ ನಿರಾಕರಿಸಿದ್ದಾರೆ.

ವರ್ಷಾರಂಭದಲ್ಲಿ ತೆರೆಕಂಡ ವಿಜಯ್-ರಶ್ಮಿಕಾ ಅಭಿನಯದ ‘ವಾರಿಸು’ ಚಿತ್ರ ಸೂಪರ್ ಹಿಟ್ ಆಗಿತ್ತು. ಬಾಕ್ಸ್ ಆಫೀಸ್ ನಲ್ಲಿ ಇದು ಸುಮಾರು 310 ಕೋಟಿ ರೂ. ಕಲೆಕ್ಷನ್ ಮಾಡಿದ ಬಳಿಕ ವಿಜಯ್ ಸಂಭಾವನೆ ಹೆಚ್ಚಿಸಿದ್ದಾರೆ ಎನ್ನಲಾಗಿದೆ. ಸದ್ಯ ಅವರು ತ್ರಿಷಾ ಜೊತೆ ಲೋಕೇಶ್ ಕನಕರಾಜ್ ನಿರ್ದೇಶನದ ‘ಲಿಯೋ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬಳಿಕ ವಿಜಯ್ ವೆಂಕಟ್ ಪ್ರಭು ಆ್ಯಕ್ಷನ್ ಕಟ್ ಹೇಳಿಲಿರುವ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಇದಕ್ಕಾಗಿ 150 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎನ್ನುವ ಗಾಸಿಪ್ ಹರಡಿತ್ತು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *