ಕೊನೆಗೊಳ್ಳುತ್ತಾ ಕನ್ನಡದ ಜನಪ್ರಿಯ ಧಾರವಾಹಿ ಜೊತೆ ಜೊತೆಯಲಿ? – ನಟಿ ಮೇಘಾ‌ ಶೆಟ್ಟಿ ಸಿನಿಮಾದತ್ತ ಮುಖಮಾಡಿದ್ದು ಯಾಕೆ?

ಕೊನೆಗೊಳ್ಳುತ್ತಾ ಕನ್ನಡದ ಜನಪ್ರಿಯ ಧಾರವಾಹಿ ಜೊತೆ ಜೊತೆಯಲಿ? – ನಟಿ ಮೇಘಾ‌ ಶೆಟ್ಟಿ ಸಿನಿಮಾದತ್ತ ಮುಖಮಾಡಿದ್ದು ಯಾಕೆ?

ನ್ಯೂಸ್ ಆ್ಯರೋ‌ : ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಆರಂಭದಿಂದಲೇ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಆರೂರು ಜಗದೀಶ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಧಾರಾವಾಹಿ ಅಭಿಮಾನಿಗಳಿಗೆ ಬೇಸರದ ಸಂಗತಿಯೊಂದು ಕೇಳಿ ಬಂದಿದೆ. ಧಾರಾವಾಹಿ ಮುಗಿಯುತ್ತಿರುವ ಕುರಿತು ನಾಯಕಿ ಮೇಘಾ ಶೆಟ್ಟಿ ಹೇಳಿಕೊಂಡಿದ್ದಾರೆ.

ಒಂದು ರೀತಿಯಲ್ಲಿ ಕುಟುಂಬವನ್ನು ತೊರೆದಂತೆ ನೋವು ಆಗುತ್ತಿದೆ ಎಂದು ಅವರು ಹೇಳಿದ್ದಾರೆ. ಸತತ ನಾಲ್ಕು ವರ್ಷಗಳ ಕಾಲ ಪ್ರೇಕ್ಷಕರನ್ನು ಹಿಡಿದಿಟ್ಟ ಈ ಧಾರಾವಾಹಿಯ ಅಂತಿಮ ದೃಶ್ಯಗಳನ್ನು ಈಗ ಚಿತ್ರೀಕರಿಸುತ್ತಿದೆ ಎಂದು ಹೇಳಲಾಗುತ್ತಿದೆ. ‘ಜೊತೆ ಜೊತೆಯಲಿ’ ಮೂಲಕ ಮೇಘಾ ಶೆಟ್ಟಿ ಅಪಾರ ಜನಪ್ರಿಯತೆ ಪಡೆದಿದ್ದಾರೆ. ಜೊತೆಗೆ ನಟ ಅನಿರುದ್ಧ ಜತ್ಕರ್ ಗೂ ಕೂಡ ದೊಡ್ಡ ಮಟ್ಟದ ಗೆಲುವನ್ನು ತಂದು ಕೊಟ್ಟಿತ್ತು.

‘ಜೊತೆ ಜೊತೆಯಲಿ’ ಧಾರಾವಾಹಿ ಮುಗಿಯುತ್ತಿದ್ದಂತೆಯೇ ಮೇಘಾ ಶೆಟ್ಟಿ ಸಿನಿಮಾಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಈಗಾಗಲೇ ಅವರು ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಟ್ರಿಬಲ್ ರೈಡಿಂಗ್’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ್ದಾರೆ. ಈಗ ಧನ್ವೀರ್ ನಟನೆಯ ‘ಕೈವಾ’, ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ.

ಮೇಘಾ ಶೆಟ್ಟಿ ಹೇಳಿದ್ದೇನು?

‘ನಾನು ಈ ಧಾರಾವಾಹಿಯಿಂದ ಹೊರಬರುತ್ತಿಲ್ಲ. ಬದಲಿಗೆ ಈ ಸೀರಿಯಲ್‌ ಕೊನೆಯಾಗುತ್ತಿದೆ. ಇಷ್ಟು ಸಮಯದ ಸೀರಿಯಲ್‌ ಜರ್ನಿ ಮರೆಯಲಾಗದ ಅನುಭವ ಕೊಟ್ಟಿದೆ. ಮುಂದೆ ಸಿನಿಮಾಗಳತ್ತ ನನ್ನ ಚಿತ್ತ. ಒಂದಿಷ್ಟು ಸ್ಕ್ರಿಪ್ಟ್ ಕೇಳಿದ್ದೇನೆ. ಮುಂದಿನ ವಾರ ಹೊಸ ಸಿನಿಮಾ ಘೋಷಿಸುವ ಸಾಧ್ಯತೆ ಇದೆ’ ಎಂದು ಮೇಘಾ ಶೆಟ್ಟಿ ತಿಳಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *