ಕಾಂತಾರ, ಚಾರ್ಲಿ 777 ಸಿನಿಮಾದ ದಾಖಲೆ ಧೂಳಿಪಟ – ಕ್ರಾಂತಿ ಮೊದಲ ದಿನ ಗಳಿಸಿದ್ದೆಷ್ಟು ಕೋಟಿ ಗೊತ್ತಾ?

ಕಾಂತಾರ, ಚಾರ್ಲಿ 777 ಸಿನಿಮಾದ ದಾಖಲೆ ಧೂಳಿಪಟ – ಕ್ರಾಂತಿ ಮೊದಲ ದಿನ ಗಳಿಸಿದ್ದೆಷ್ಟು ಕೋಟಿ ಗೊತ್ತಾ?

ನ್ಯೂಸ್ ಆ್ಯರೋ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ಡಿಂಪಲ್ ಕ್ವೀನ್ ರಚಿತಾ ರಾಮ್ ನಟಿಸಿರುವ ‘ಕ್ರಾಂತಿ’ ಸಿನಿಮಾ, ಗಳಿಕೆ ವಿಚಾರದಲ್ಲೂ ಕ್ರಾಂತಿಯನ್ನೇ ಮಾಡಿದೆ. ಬಿಡುಗಡೆಯಾದ ಮೊದಲ ದಿನವೇ ರಾಜ್ಯದಾದ್ಯಂತ ಉತ್ತಮ‌ಗಳಿಕೆ ಕಂಡಿರುವ ಸಿನಿಮಾ, ಮೊದಲ ದಿನ ಅತೀ ಹೆಚ್ಚು ಗಳಿಕೆ ಕಂಡ ಕನ್ನಡ ಚಿತ್ರಗಳ ಪಟ್ಟಿಯಲ್ಲಿ 5ನೇ ಸ್ಥಾನ‌ ಪಡೆದುಕೊಂಡಿದೆ‌.

ಕೋಟಿ ಬಾಚಿದ ‘ಕ್ರಾಂತಿ’

ಮಾಧ್ಯಮಗಳ ಹೊರತಾಗಿ ‘ಕ್ರಾಂತಿ’ ಚಿತ್ರಕ್ಕೆ ಅಭಿಮಾನಿಗಳು ರಾಜ್ಯದಾದ್ಯಂತ ಭರ್ಜರಿ ಪ್ರಚಾರ ನೀಡಿದ್ದರು. ವರ್ಷಗಳ ನಂತರ ದರ್ಶನ್ ಅವರನ್ನು ಥಿಯೇಟರ್ ನಲ್ಲಿ ಕಾಣಲು ಅಭಿಮಾನಿಗಳು ತುದಿಗಾಲಿನಲ್ಲಿ‌ ನಿಂತಿದ್ದರು. ಚಿತ್ರವನ್ನು ಹರಿಕೃಷ್ಣ ನಿರ್ದೇಶನ‌ಮಾಡಿದ್ದು, ಒಟ್ಟು 16 ಕೋಟಿಯಲ್ಲಿ ಸಿನಿಮಾ ತಯಾರಾಗಿದೆ ಎನ್ನಲಾಗಿದೆ‌. ಸದ್ಯ, ಬಿಡುಗಡೆಯಾಗಿರು ಕ್ರಾಂತಿ ಸಿನಿಮಾ, ಮೊದಲ ದಿನವೇ 13 ರಿಂದ 14 ಕೋಟಿ ಬಾಚಿಕೊಂಡಿದೆ ಎನ್ನಲಾಗಿದೆ.

ಮೊದಲ ದಿನ ಹೆಚ್ಚು ಗಳಿಕೆ ಕಂಡ ಕನ್ನಡ ಸಿನಿಮಾಗಳು

ಕನ್ನಡದಲ್ಲಿ ಬಿಡುಗಡೆಯಾದ ಮೊದಲ ದಿನವೇ ಅತೀ‌ ಹೆಚ್ಚು ಗಳಿಕೆ ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಪ್-2 ಸಿನಿಮಾ ಮೊದಲ ಸ್ಥಾನದಲ್ಲಿದೆ. ಈ ಸಿನಿಮಾ ಮೊದಲ ದಿನ 29.8 ಕೋಟಿ ಗಳಿಕೆ ಕಂಡಿತ್ತು. ಇನ್ನು ಪವರ್ ಸ್ಟಾರ್ ದಿ.ಪುನಿತ್ ರಾಜ್ ಕುಮಾರ್ ಕೊನೆಯ ಚಿತ್ರ ‘ಜೇಮ್ಸ್’ 28 ಕೋಟಿ ಗಳಿಕೆಯೊಂದಿಗೆ 2ನೇ ಸ್ಥಾನದಲ್ಲಿದೆ. ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾ ಮೊದಲ ದಿನ 23.84 ಕೋಟಿ ಗಳಿಸಿ ಮೂರನೇ ಸ್ಥಾನದಲ್ಲಿದೆ. ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ 17.3 ಕೋಟಿ ಗಳಿಕೆ ಮಾಡಿ ನಾಲ್ಕನೆ ಸ್ಥಾನದಲ್ಲಿದೆ. ಇದೀಗ ದರ್ಶನ್ ಅಭಿನಯದ ‘ಕ್ರಾಂತಿ’ 13 ಕೋಟಿ ಗಳಿಕೆಯೊಂದಿಗೆ 5ನೇ ಸ್ಥಾನ ಅಲಂಕರಿಸಿದೆ. ಇದರೊಂದಿಗೆ ಮೊದಲ ದಿನ ಕರ್ನಾಟಕದಲ್ಲಿ 3.85 ಕೋಟಿ ಗಳಿಸಿದ ‘ಕಾಂತಾರ’ ಹಾಗೂ 5 ಕೋಟಿ ಗಳಿಸಿದ್ದ ‘ಚಾರ್ಲಿ’ ಸಿನಿಮಾವನ್ನು ‘ಕ್ರಾಂತಿ’ ಹಿಂದಿಕ್ಕಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *