ಕನ್ನಡದ ಹಿರಿಯ ನಟ, ಖಳನಟನಾಗಿಯೇ ಖ್ಯಾತಿ ಹೊಂದಿದ್ದ ಲಕ್ಷ್ಮಣ ಇನ್ನಿಲ್ಲ..!!
- ಮನರಂಜನೆ
- January 23, 2023
- No Comment
- 7738
ನ್ಯೂಸ್ ಆ್ಯರೋ : ಕನ್ನಡ ಚಿತ್ರರಂಗದ ಹಿರಿಯ ನಟ ಲಕ್ಷ್ಮಣ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಕೆಲ ವರ್ಷಗಳಿಂದ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಇಂದು ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ರಸ್ತೆ ಮಧ್ಯೆದಲ್ಲೇ ಲಕ್ಷ್ಮಣ ಕೊನೆಯುಸಿರು ಎಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನ ಮೂಡಲಪಾಳ್ಯದ ನಿವಾಸದಲ್ಲಿ ಲಕ್ಷ್ಮಣ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಕನ್ನಡ ಚಿತ್ರರಂಗದಲ್ಲಿ ಕಳೆದೆರಡು ದಶಕಗಳಿಂದ ನಟನಾಗಿದ್ದ ಇವರು ಮುನ್ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಖಳನಟರಾಗಿ ನಟಿಸಿದ್ದಾರೆ. ಅವುಗಳಲ್ಲಿ ಮಲ್ಲ, ಯಜಮಾನ, ಸೂರ್ಯವಂಶ, ಅಂತ ಸೇರಿದಂತೆ ಹಲವು ಸಿನಿಮಾಗಳಲ್ಲಿ ಲಕ್ಷ್ಮಣ ಅವರ ಅಭಿನಯಕ್ಕೆ ಅವರದ್ದೇ ಆದ ಅಭಿಮಾನಿ ಬಳಗ ನಿರ್ಮಾಣವಾಗಿತ್ತು.
ರೆಬಲ್ ಸ್ಟಾರ್ ಅಂಬರೀಶ್ ಅವರ ನೆಚ್ಚಿನ ನಟ ಎನ್ನುವ ಖ್ಯಾತಿಗೂ ಪಾತ್ರರಾಗಿದ್ದ ಇವರು ಡಾ.ರಾಜ್ ಕುಮಾರ್, ಡಾ.ಅಂಬರೀಶ್, ಡಾ.ವಿಷ್ಣುವರ್ಧನ್, ರವಿಚಂದ್ರನ್, ಶಿವರಾಜ್ ಕುಮಾರ್ ಹೀಗೆ ಸಾಕಷ್ಟು ದಿಗ್ಗಜ ನಟರೊಂದಿಗೆ ಕೆಲಸ ಮಾಡಿದ ಹೆಗ್ಗಳಿಕೆ ಹೊಂದಿದ್ದರು.