ಕೆಜಿಎಪ್-2 ಸಿನಿಮಾ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ‌ ಕಿಶೋರ್. ವಿವಾದದ ಸುಳಿಯಲ್ಲಿ ಪ್ರತಿಭಾವಂತ ನಟ.

ಕೆಜಿಎಪ್-2 ಸಿನಿಮಾ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ‌ ಕಿಶೋರ್. ವಿವಾದದ ಸುಳಿಯಲ್ಲಿ ಪ್ರತಿಭಾವಂತ ನಟ.

ನ್ಯೂಸ್ ಆ್ಯರೋ: ಕನ್ನಡಿಗ ಬಹುಭಾಷಾ ನಟ, ‘ಹುಲಿ’ ಸಿನಿಮಾ‌ ಖ್ಯಾತಿಯ ಪ್ರತಿಭಾನ್ವಿತ ಕಲಾವಿದ ಕಿಶೋರ್ ಸದ್ಯ ದಿನಕ್ಕೊಂದು ವಿವಾದಾತ್ಮಕ ಹೇಳಿಕೆಯ ಮೂಲಕ ಸುದ್ದಿಯಲ್ಲಿದ್ದಾರೆ.

ಇತ್ತೀಚೆಗೆ ಕರಾವಳಿ ಭಾಗದ ದೈವಾಚರಣೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹರಿಬಿಟ್ಟಿದ್ದ ಅವರು ನಂಬಿಕೆ ಮತ್ತು ಮೂಡನಂಬಿಕೆಯ ಬಗ್ಗೆ ಚರ್ಚಿಸಿದ್ದರು. ಇದೀಗ ಮತ್ತೆ ಭಾರತೀಯ ಸಿನಿಮಾ ರಂಗದಲ್ಲಿ ದಾಖಲೆಯ ಮೈಲಿಗಲ್ಲು ಸ್ಥಾಪಿಸಿದ ಕೆಜಿಎಪ್-2 ಸಿನಿಮಾದ ಬಗ್ಗೆ ಮಾತನಾಡಿ ವಿವಾದಕ್ಕೀಡಾಗಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಪ್ 2 ಸಿನಿಮಾದ ಬಗ್ಗೆ ಮಾತನಾಡಿರುವ ಕಿಶೋರ್ ‘ಕೆಜಿಎಪ್-2 ಸಿನಿಮಾವನ್ನ ನಾನು ನೋಡಿಲ್ಲ. ನೋಡುವ ಆಸಕ್ತಿಯು ನನಗಿಲ್ಲ. ನಾನು ಇಷ್ಟ ಪಡುವ ಚಿತ್ರಗಳೆ ಬೇರೆ. ಕೆಜಿಎಪ್ ನನ್ನ ಅಭಿರುಚಿಯ ಸಿನಿಮಾ ಅಲ್ಲ’ ಎನ್ನುವ ಮೂಲಕ ಯಶ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಿಶೋರ್ ಹೇಳಿಕೆಯಿಂದ ಗರಂ ಆಗಿರುವ ಯಶ್ ಫ್ಯಾನ್ಸ್ ‘ಹಾಗಿದ್ದರೆ ಕಿಶೋರ್ ಎಂತಹಾ ಸಿನಿಮಾಗಳನ್ನು ಇಷ್ಟಪಡುತ್ತಾರೆ ಅನ್ನುವ ಲಿಸ್ಟ್ ಕೊಡಲಿ. ಕಿಶೋರ್ ನಟಿಸಿರುವ ಸಿನಿಮಾಗಳೆಲ್ಲ ಅವರ ಅಭಿರುಚಿಗೆ ತಕ್ಕಂತೆ ಇದೆಯೇ ಎಂದು ತಿರುಗೇಟು ನೀಡಿದ್ದಾರೆ.

ಇತ್ತೀಚೆಗೆ ಕಿಶೋರ್ ಕಾಂತಾರ ಸಿನಿಮಾ ಬಿಡುಗಡೆಯ ನಂತರ ದೈವಾಚರಣೆಯ ಬಗ್ಗೆ ಪೋಸ್ಟ್ ಮಾಡಿ ನಂಬಿಕೆ ಮತ್ತು ಮೂಡನಂಬಿಕೆಗಳ ಬಗ್ಗೆ ಮಾತನಾಡಿದ್ದರು. ಇದು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಹಲವಾರ ಮಂದಿ ಕಿಶೋರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಅದೇ ಸಮಯಕ್ಕೆ ಅವರ ಟ್ವಿಟ್ಟರ್ ಖಾತೆಯೂ ಕೂಡ ಡಿಲಿಟ್ ಆಗಿ ಚಿತ್ರರಂಗ ಮತ್ತು ಸಾಮಾಜಿಕ ಜಾಲದ ಸುತ್ತ ಅನುಮಾನದ ಹುತ್ತ ಬೆಳೆದು ನಿಂತಿತ್ತು.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *