34 ವರ್ಷಗಳ ಬಳಿಕ ಒಂದಾದ ಬಾಲಿವುಡ್‌ ಸ್ಟಾರ್‌ ದಂಪತಿ – ಮತ್ತೆ ಒಂದೇ ಮನೆಯಲ್ಲಿ ಸಂಸಾರ ಆರಂಭಿಸಿದ ಕರೀನಾ ಪೋಷಕರು

34 ವರ್ಷಗಳ ಬಳಿಕ ಒಂದಾದ ಬಾಲಿವುಡ್‌ ಸ್ಟಾರ್‌ ದಂಪತಿ – ಮತ್ತೆ ಒಂದೇ ಮನೆಯಲ್ಲಿ ಸಂಸಾರ ಆರಂಭಿಸಿದ ಕರೀನಾ ಪೋಷಕರು

ನ್ಯೂಸ್‌ ಆ್ಯರೋ : ಬಾಲಿವುಡ್‌ ಮಂದಿ ಲೈಫಲ್ಲಿ ಸಿನಿಮಾ ಬಿಟ್ಟರೆ ಲವ್‌, ಬ್ರೇಕಪ್, ಲಿವಿಂಗ್ ರಿಲೇಶನ್‌ಶಿಪ್‌, ಅದ್ಧೂರಿ ಮದುವೆ ಹಾಗೂ ವಿಚ್ಛೇಧನಗಳು ಆಗಾಗ ಸುದ್ದಿಯಾಗುತ್ತಿರುವ ವಿಷಯಗಳು.

ಇದೀಗ ಬಾಲಿವುಡ್‌ನಿಂದ ವಿಭಿನ್ನ ಸುದ್ದಿಯೊಂದು ಕೇಳಿ ಬರುತ್ತಿದೆ. 34 ವರ್ಷಗಳಿಂದ ದೂರ ಉಳಿದಿದ್ದ ದಂಪತಿ ಇದೀಗ ಮತ್ತೆ ಒಂದಾಗಲು ಬಯಸುತ್ತಿರುವ ವಿಷಯ ಕೇಳಿಬರುತ್ತಿದೆ.

ಹೌದು.. ಬಾಲಿವುಡ್ ನಾಯಕಿಯರಾದ ಕರಿಷ್ಮಾ ಕಪೂರ್ ಮತ್ತು ಕರೀನಾ ಕಪೂರ್ ಅವರ ಹೆತ್ತವರು ರಣಧೀರ್ ಕಪೂರ್ ಮತ್ತು ಬಬಿತಾ ಕಪೂರ್ ಮತ್ತೆ ಒಂದಾಗಲು ಸಿದ್ಧರಾಗಿದ್ದಾರೆ.

ರಣಧೀರ್ ಕಪೂರ್ ಮತ್ತು ಬಬಿತಾ ದಂಪತಿ 1980 ರ ದಶಕದಲ್ಲಿ ಬೇರೆ ಬೇರೆಯಾಗಿ ಜೀವನ ಸಾಗಿಸುತ್ತಿದ್ದಾರೆ. ಬಬಿತಾ ಅವರು ತಮ್ಮ ಮಕ್ಕಳೊಂದಿಗೆ ಲೋಖಂಡವಾಲಾದಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ರಣಧೀರ್ ಕಪೂರ್ ಅವರು ಚೆಂಬೂರಿನಲ್ಲಿರುವ ತಮ್ಮ ಕುಟುಂಬದ ಮನೆಯಲ್ಲಿ ವಾಸಿಸುತ್ತಿದ್ದರು.

ಇಬ್ಬರೂ 34 ವರ್ಷಗಳಿಂದ ದೂರವಾಗಿದ್ದ ದಂಪತಿ ಇದೀಗ ಮಕ್ಕಳಿಗೆ ಮೊಕ್ಕಳಾದ ಬಳಿಕ ಒಂದಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಇದರ ಭಾಗವಾಗಿ ಬಬಿತಾ ಬಾಂದ್ರಾದಲ್ಲಿರುವ ರಣಧೀರ್ ಕಪೂರ್ ಮನೆಗೆ ತೆರಳಿದ್ದಾರೆ ಎಂದು ವರದಿಯಾಗಿದೆ.

ಯಾವುದೇ ಸಮಾರಂಭ, ಪಾರ್ಟಿಗಳಲ್ಲಿ ಈ ದಂಪತಿ ತಮ್ಮ ಮಕ್ಕಳೊಂದಿಗೆ ಸೇರುತ್ತಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದರು.

ಬಬಿತಾ ಮತ್ತು ರಣಧೀರ್ 1971 ರಲ್ಲಿ ವಿವಾಹವಾದರು. ಇಬ್ಬರೂ ಬಾಲಿವುಡ್‌ನ ಮಾಜಿ ತಾರೆಯರು. ಕಲ್ ಆಜ್ ಔರ್ ಕಲ್ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದಾಗ ಇಬ್ಬರ ನಡುವೆ ಪ್ರೀತಿ ಮೂಡಿ, ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *