ಮುಸ್ಲಿಂ ಉದ್ಯಮಿ ಜೊತೆ ಕೀರ್ತಿ ಸುರೇಶ್ ಡೇಟಿಂಗ್? – ಮಹಾನಟಿ ಶೇರ್ ಮಾಡಿದ ಫೋಟೋ ಸೀಕ್ರೆಟ್ ಏನು?

ಮುಸ್ಲಿಂ ಉದ್ಯಮಿ ಜೊತೆ ಕೀರ್ತಿ ಸುರೇಶ್ ಡೇಟಿಂಗ್? – ಮಹಾನಟಿ ಶೇರ್ ಮಾಡಿದ ಫೋಟೋ ಸೀಕ್ರೆಟ್ ಏನು?

ನ್ಯೂಸ್ ಆ್ಯರೋ‌ : ಮಲೆಯಾಳಂ ಮೂಲದ ನಟಿ ಕೀರ್ತಿ ಸುರೇಶ್ ಸಿನಿ ಪ್ರಿಯರಿಗೆ ಚಿರಪರಿಚಿತ ಮುಖ. ಕನ್ನಡ ಹೊರತುಪಡಿಸಿ ದಕ್ಷಿಣ ಭಾರತದ ಎಲ್ಲಾ ಚಿತ್ರರಂಗದಲ್ಲಿ ಅಭಿನಯಿಸಿದ್ದಾರೆ. ಸೂಪರ್ ಸ್ಟಾರ್ ಗಳ ಜೊತೆ ತೆರೆ ಹಂಚಿಕೊಂಡು ಅನೇಕ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅಭಿನಯದ ಮೂಲಕವೂ ಗಮನ ಸೆಳೆದಿರುವ ಅವರು ಹಲವು ನಾಯಕಿ ಪ್ರಧಾನ ಸಿನಿಮಾಗಳಲ್ಲಿಯೂ ಮಿಂಚಿದ್ದಾರೆ. ‘ಮಹಾನಟಿ’ ತೆಲುಗು ಚಿತ್ರದ ಮೂಲಕ ರಾಷ್ಟ್ರ ಪ್ರಶಸ್ತಿ ಪಡೆದ ಕೀರ್ತಿ ಈಗ ಪ್ರೀತಿಯಲ್ಲಿ ಬಿದ್ದಿದ್ದಾರಾ ಎನ್ನುವ ಅನುಮಾನ ಅಭಿಮಾನಿಗಳಿಗೆ ಕಾಡುತ್ತಿದೆ.

ಇತ್ತೀಚೆಗೆ ಕೀರ್ತಿ ಯುವಕನೊಬ್ಬನ ಜೊತೆ ಕಾಣಿಸಿಕೊಂಡಿರುವ ಫೋಟೋ ಶೇರ್ ಮಾಡಿಕೊಂಡಿದ್ದರು. ಆತನ ಹುಟ್ಟುಹಬ್ಬ ಪಾರ್ಟಿಯಲ್ಲಿ ಭಾಗವಹಿಸಿ ಶುಭಾಶಯ ಕೋರಿದ್ದರು. ಈ ಫೋಟೋದಲ್ಲಿರುವ ವ್ಯಕ್ತಿ ಜೊತೆ ಕೀರ್ತಿ ಡೇಟಿಂಗ್ ಮಾಡುತ್ತಾರೆ, ಆತನನ್ನು ಮದುವೆ ಆಗುತ್ತಾರೆ ಎಂದೆಲ್ಲ ಗಾಸಿಪ್ ಹರಿದಾಡುತ್ತಿದೆ.

ಕುತೂಹಲದಿಂದ ನೆಟ್ಟಿಗರು ಆತನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಆತನ ಹೆಸರು ಫರ್ಹಾನ್ ಬಿನ್ ಲೈತ್. ರಿಯಲ್ ಎಸ್ಟೇಟ್ ಉದ್ಯಮಿ. ರೆಸ್ಟೋರೆಂಟ್‌ ಒಡೆಯ. ಇಬ್ಬರು ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಪರೀತ ಚರ್ಚೆ ನಡೆಯುತ್ತಿದ್ದರೂ ಅವರು ಈ ಬಗ್ಗೆ ಮಾತನಾಡಿಲ್ಲ. ಈ ಹಿಂದೆ ಕೀರ್ತಿ ತನ್ನ ಕ್ಲಾಸ್‌ಮೇಟ್ ಒಬ್ಬರನ್ನು ಮದುವೆ ಆಗ್ತಾರೆ ಎನ್ನುವ ಸುದ್ದಿ ಬಂದಾಗ ಅದನ್ನು ಅವರ ತಾಯಿ ಖಂಡಿಸಿದ್ದರು.

ಕೀರ್ತಿ ಸುರೇಶ್ ಬ್ಯುಸಿ

ಗಾಸಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದ ಕೀರ್ತಿ ಸದ್ಯ ಹಲವು ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ತೆಲುಗಿನ ‘ಭೋಳಾ ಶಂಕರ್’, ತಮಿಳಿನ ‘ಮಾಮನನ್’, ‘ಸಿರೇನ್’, ‘ರಘು ತಾತ’ ಹಾಗೂ ‘ರಿವಾಲ್ವರ್ ರೀಟಾ’ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ.

Related post

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ ಪತ್ರ

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ…

ನ್ಯೂಸ್ ಆರೋ: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಜ್ಞಾವಂತ ನಾಗರೀಕರು ಎಂಬ ಹೆಸರಿನಲ್ಲಿ…
ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…

Leave a Reply

Your email address will not be published. Required fields are marked *