Kiccha Birthday Special : ಮತ್ತೊಮ್ಮೆ ಮಾಸ್ ಅವತಾರದಲ್ಲಿ ಕಿಚ್ಚ ಸುದೀಪ್ – ಕಿಚ್ಚನ ಹೊಸ ಪ್ಯಾನ್ ಇಂಡಿಯಾ ಚಿತ್ರದ ಶೀರ್ಷಿಕೆ ಏನ್ ಗೊತ್ತಾ?

Kiccha Birthday Special : ಮತ್ತೊಮ್ಮೆ ಮಾಸ್ ಅವತಾರದಲ್ಲಿ ಕಿಚ್ಚ ಸುದೀಪ್ – ಕಿಚ್ಚನ ಹೊಸ ಪ್ಯಾನ್ ಇಂಡಿಯಾ ಚಿತ್ರದ ಶೀರ್ಷಿಕೆ ಏನ್ ಗೊತ್ತಾ?

ನ್ಯೂಸ್ ಆ್ಯರೋ‌ : ಪ್ಯಾನ್ ಇಂಡಿಯಾ ಸ್ಟಾರ್, ಸ್ಯಾಂಡಲ್ ವುಡ್ ಕಿಚ್ಚ ಸುದೀಪ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದ ಅಂಗವಾಗಿ ಅವರು ಅಭಿನಯಿಸುತ್ತಿರುವ ಚಿತ್ರತಂಡಗಳು ಪೋಸ್ಟರ್, ಟೀಸರ್ ಬಿಡುಗಡೆ ಮಾಡಿ ಶುಭಾಶಯ ತಿಳಿಸುತ್ತಿವೆ. ಈ ಮಧ್ಯೆ ಕೆಲವು ದಿನಗಳ ಹಿಂದೆ ಟೀಸರ್ ಬಿಡುಗಡೆ ಮಾಡಿ ತೀವ್ರ ಕುತೂಹಲ ಮೂಡಿಸಿದ್ದ ‘ಕೆ46’ ಚಿತ್ರ ತಂಡ ಶೀರ್ಷಿಕೆ ಬಹಿರಂಗ ಪಡಿಸಿ ಅಭಿಮಾನಿಗಳ ನಿರೀಕ್ಷೆ ಇನ್ನೂ ಹೆಚ್ಚಿಸಿದೆ.

ಗಮನ ಸೆಳೆದ ಶೀರ್ಷಿಕೆ

ಚಿತ್ರಕ್ಕೆ ‘ಮ್ಯಾಕ್ಸ್’ ಎಂದು ಶೀರ್ಷಿಕೆ ಇಡಲಾಗಿದೆ. ಈ ಮೂಲಕ ಸುದೀಪ್ ಮತ್ತೊಂದು ಮಾಸ್ ಚಿತ್ರದ ಮೂಲಕ ಪ್ರತ್ಯಕ್ಷವಾಗಲಿದ್ದಾರೆ ಎನ್ನುವುದು ಖಚಿತವಾದಂತಾಗಿದೆ. ಆ್ಯಕ್ಷನ್ ಥ್ರಿಲ್ಲರ್ ಆಗಿರುವ ಇದು ಕನ್ನಡ ಜೊತೆಗೆ ತೆಲುಗು, ತಮಿಳು, ಮಲೆಯಾಳಂ ಮತ್ತು ಹಿಂದಿಯಲ್ಲೂ ತೆರೆಗೆ ಬರಲಿದೆ. ಕಳೆದ ವರ್ಷ ಬಿಡುಗಡೆಯಾದ ಸುದೀಪ್ ಚಿತ್ರ ‘ವಿಕ್ರಾಂತ್ ರೋಣ’ವೂ ಪ್ಯಾನ್ ಇಂಡಿಯಾದಲ್ಲಿ ತೆರೆಕಂಡಿತ್ತು. ಇದೀಗ ಮ್ಯಾಕ್ಸ್ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ.

‘ಮ್ಯಾಕ್ಸ್’ ಚಿತ್ರವನ್ನು ವಿಜಯ್ ಕಾರ್ತಿಕೇಯ ನಿರ್ದೇಶಿಸುತ್ತಿದ್ದಾರೆ. ಶೀರ್ಷಿಕೆ ಟೀಸರ್ ನಲ್ಲಿ ‘ಮ್ಯಾಕ್ಸ್’ ತುಂಬಾ ಅಪಾಯಕಾರಿ ಎನ್ನುವುದನ್ನು ಹೇಳಲಾಗಿದ್ದು, ಅಭಿಮಾನಿಗಳು ಈಗಲೇ ಭರ್ಜರಿ ಫೈಟಿಂಗ್ ದೃಶ್ಯಗಳ ನಿರೀಕ್ಷೆಯಲ್ಲಿದ್ದಾರೆ.

ಮತ್ತೊಂದು ವಿಶೇಷ ಎಂದರೆ ಈ ಚಿತ್ರದಲ್ಲಿ ಸುದೀಪ್ ಮತ್ತೆ ಪೊಲೀಸ್ ಆಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದರ ಸೂಚನೆ ಸಿಕ್ಕಿದೆ. ತಮಿಳಿನ ಖ್ಯಾತ ನಿರ್ಮಾಣ ಸಂಸ್ಥೆ ವಿ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ‘ಮ್ಯಾಕ್ಸ್’ ಚಿತ್ರ ನಿರ್ಮಾಣವಾಗುತ್ತಿದೆ. ಕಲೈಪುಲಿ ಎಸ್.ಧಾನು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದಾರೆ.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *