Meghana Raj : ಎರಡನೇ ಮದುವೆ ಬಗ್ಗೆ ಕೊನೆಗೂ ಮೌನ ಮುರಿದ ‘ರಾಜಾಹುಲಿ’ ನಾಯಕಿ – ನಂಗೆ ಅನ್ಸಿದ್ದು ಇಷ್ಟೇ ಎಂದ ಮೇಘನಾ ಹೇಳಿದ್ದೇನು?

Meghana Raj : ಎರಡನೇ ಮದುವೆ ಬಗ್ಗೆ ಕೊನೆಗೂ ಮೌನ ಮುರಿದ ‘ರಾಜಾಹುಲಿ’ ನಾಯಕಿ – ನಂಗೆ ಅನ್ಸಿದ್ದು ಇಷ್ಟೇ ಎಂದ ಮೇಘನಾ ಹೇಳಿದ್ದೇನು?

ನ್ಯೂಸ್ ಆ್ಯರೋ‌ : ಬಹುಭಾಷಾ ನಟಿ, ಸ್ಯಾಂಡಲ್ ವುಡ್ ನ ಹಿರಿಯ ಕಲಾವಿದರಾದ ಸುಂದರ್ ರಾಜ್ – ಪ್ರಮೀಳಾ ಜೋಷಾಯ್ ದಂಪತಿ ಪುತ್ರಿ ಮೇಘನಾ ರಾಜ್ ದಕ್ಷಿಣ ಭಾರತದ ಎಲ್ಲಾ ಚಿತ್ರರಂಗಗಳಲ್ಲಿ ನಟಿಸಿದ್ದಾರೆ. 2018ರಲ್ಲಿ ಅವರು ನಟ ಚಿರಂಜೀವಿ ಸರ್ಜಾ ಅವರನ್ನು ವರಿಸಿದ್ದರು. 2020ರಲ್ಲಿ ಚಿರಂಜೀವಿ ಸರ್ಜಾ ನಿಧನ ಹೊಂದುವಾಗ ಮೇಘನಾ ಗರ್ಭಿಣಿಯಾಗಿದ್ದರು. ಬಳಿಕ ಅವರು ರಾಯನ್ ರಾಜ್ ಸರ್ಜಾಗೆ ಜನ್ಮ ನೀಡಿದರು. ಇದೀಗ ಮೇಘನಾ ಸರ್ಜಾ ಎರಡನೇ ಮದುವೆ ಬಗ್ಗೆ ಮಾತನಾಡಿದ್ದಾರೆ.

ಮೇಘನಾ ಹೇಳಿದ್ದೇನು?

ಮೇಘನಾ ಎರಡನೇ ಮದುವೆಯಾಗುತ್ತಾರೆ ಎನ್ನುವ ಗಾಸಿಪ್ ಚಿತ್ರರಂಗದಲ್ಲಿ ಹಲವು ದಿನಗಳಿಂದ ಹಬ್ಬಿತ್ತು. ಇದುವರೆಗೆ ಈ ಬಗ್ಗೆ ಮಾತನಾಡದ ಮೇಘನಾ ಇದೀಗ ಸ್ಪಷ್ಟನೆ ಕೊಟ್ಟಿದ್ದಾರೆ. ಎರಡನೇ ಮದುವೆ ಬಗ್ಗೆ ನಾನು ಯೋಚನೆ ಕೂಡ ಮಾಡಿಲ್ಲ. ನಿಜ ಹೇಳಬೇಕು ಎಂದರೆ ಈ ಥರದ ಆಯ್ಕೆ ಇದೆ ಎನ್ನುವ ಯೋಚನೆಯೂ ಬಂದಿಲ್ಲ. ಈ ವಿಚಾರದ ಬಗ್ಗೆ ನನ್ನ ಜೊತೆ ಯಾರೂ ಚರ್ಚೆ ನಡೆಸಿಲ್ಲ ಎಂದಿದ್ದಾರೆ.

ಎರಡನೇ ಮದುವೆ ಬಗ್ಗೆ ಯೋಚನೆ ಮಾಡುವುದೂ ಇಲ್ಲ. ನನಗೆ ಜೀವನದಲ್ಲಿ ಮಗ ರಾಯನ್ ರಾಜ್ ಸರ್ಜಾನೇ ಮುಖ್ಯ. ನನ್ನ ಗಮನ ಏನಿದ್ದರೂ ಕೇವಲ ಅವನ ಮೇಲೆ. ನನ್ನ ಜೀವನ ಇರುವುದೇ ಅವನ ಮೇಲೆ ಎಂದು ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಮೇಘನಾ ಸ್ಪಷ್ಟ ಮಾತುಗಳಲ್ಲಿ ಹೇಳುವ ಮೂಲಕ ಗಾಳಿಸುದ್ದಿಗೆ ಬ್ರೇಕ್ ಹಾಕಿದ್ದಾರೆ.

ಸ್ವಲ್ಪ ದಿನಗಳ ಬ್ರೇಕ್ ನಂತರ ಇದೀಗ ಮೇಘನಾ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಪ್ರಜ್ವಲ್ ದೇವರಾಜ್ ಜೊತೆಗೆ ಅಭಿನಯಿಸುತ್ತಿರುವ ‘ತತ್ಸಮ ತದ್ಭವ’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಉಪೇಂದ್ರ ಜೊತೆ ‘ಬುದ್ದಿವಂತ-2’ ಚಿತ್ರದಲ್ಲಿ ನಟಿಸಲಿದ್ದಾರೆ. ಜೊತೆಗೆ ಮಲೆಯಾಳಂ ಚಿತ್ರದಲ್ಲೂ ನಟಿಸುವುದಾಗಿ ಮೇಘನಾ ತಿಳಿಸಿದ್ದಾರೆ.

Related post

ದಿನ‌ ಭವಿಷ್ಯ 13-05-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 13-05-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ನೀವು ಸಾಲ ತೆಗೆದುಕೊಳ್ಳಲು ಹೊರಟಿದ್ದರೆ ಮತ್ತು ಈ ಕೆಲಸದಲ್ಲಿ…

ಅಕ್ರಮ ಭ್ರೂಣ ಹತ್ಯೆ ಹಗರಣ; ವೈದ್ಯರ ವಿರುದ್ಧದ ಪ್ರಕರಣ ರದ್ದು ಸಾಧ್ಯವಿಲ್ಲ…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ವ್ಯಾಪಿಸಿರುವ ಅಕ್ರಮ ಭ್ರೂಣ ಹತ್ಯೆ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. “ಪ್ರಕರಣ…
ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…

Leave a Reply

Your email address will not be published. Required fields are marked *