ಮದುವೆ ಮುಗಿದ ಕೂಡಲೇ ವಿದೇಶಕ್ಕೆ ಹಾರಿದ ಪವಿತ್ರಾ– ನರೇಶ್ – ದುಬೈನಲ್ಲಿ ಕೈ ಕೈ ಹಿಡಿದು ಲವ್‌ ಬರ್ಡ್ಸ್‌ ಓಡಾಟ

ಮದುವೆ ಮುಗಿದ ಕೂಡಲೇ ವಿದೇಶಕ್ಕೆ ಹಾರಿದ ಪವಿತ್ರಾ– ನರೇಶ್ – ದುಬೈನಲ್ಲಿ ಕೈ ಕೈ ಹಿಡಿದು ಲವ್‌ ಬರ್ಡ್ಸ್‌ ಓಡಾಟ

ನ್ಯೂಸ್‌ ಆ್ಯರೋ : ತೆಲುಗು ನಟ ನರೇಶ್ ಅವರು ಟ್ವಿಟರ್‌ನಲ್ಲಿ ಕನ್ನಡ ನಟಿ ಪವಿತ್ರಾ ಲೋಕೇಶ್ ಜೊತೆಗಿನ ಮದುವೆ ವಿಡಿಯೋವನ್ನು ಶೇರ್ ಮಾಡಿದ್ದರು. ಈ ಬಗ್ಗೆ ಯಾವುದೇ ಸ್ಪಷ್ಟನೆಯನ್ನು ಕೊಡದೆ ವಿಡಿಯೋ ಹಂಚಿಕೊಂಡ ಜೋಡಿ ಇದೀಗ ದುಬೈನಲ್ಲಿ ಕಾಲ ಕಳೆಯುತ್ತಿರುವ ವಿಡಿಯೋ, ಫೋಟೋಗಳನ್ನು ಶೇರ್ ಮಾಡಿದ್ದಾರೆ.

ಇನ್ನೂ ಈ ಫೋಟೋ, ವಿಡಿಯೋಗಳನ್ನು ನೋಡಿದವರು ಮದುವೆಯಾಯಿತೇ ಎಂದು ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಯಾವುದೇ ವಿಷಯಗಳನ್ನು ಈ ಜೋಡಿ ಬಿಟ್ಟುಕೊಟ್ಟಿಲ್ಲ. ಬದಲಾಗಿ ಜಾಲಿ ಮೂಡ್‌ನಲ್ಲಿರುವ ಫೋಟೋಗಳನ್ನು ಶೇರ್ ಮಾಡಿದ್ದಾರೆ.

ದುಬೈನಲ್ಲಿ ಜಾಲಿ ರೈಡ್:

ಮರುಭೂಮಿ, ಸಮುದ್ರ, ದೊಡ್ಡ ದೊಡ್ಡ ಬಿಲ್ಡಿಂಗ್‌ಗಳ ಮಧ್ಯೆ ಪವಿತ್ರಾ, ನರೇಶ್ ಅವರು ಕೈ ಕೈ ಹಿಡಿದು ಜಾಲಿಯಾಗಿ ತಿರುಗಾಡಿದ್ದಾರೆ.

ಪವಿತ್ರ ಬಂಧಕ್ಕೆ ಆಶೀರ್ವಾದವಿರಲಿ ಎಂದ ನರೇಶ್: ‘ಒಂದು ಪವಿತ್ರ ಬಂಧ, ಎರಡು ಮನಸ್ಸು, ಮೂರು ಗಂಟು, ಏಳು ಹೆಜ್ಜೆ.. ನಿಮ್ಮೆಲ್ಲರ ಆಶೀರ್ವಾದವನ್ನು ಬಯಸುತ್ತೇವೆ..’ ಎಂದು ಬರಹ ಬರೆದುಕೊಂಡು ನರೇಶ್ ಅವರು ಪವಿತ್ರಾ ಲೋಕೇಶ್ ಜತೆ ಸಪ್ತಪದಿ ತುಳಿಯುವ ವಿಡಿಯೋವನ್ನು ಶೇರ್ ಮಾಡಿದ್ದರು.

ಇದು ನಿಜವಾದ ಮದುವೆಯಾ ಅಥವಾ ಸಿನಿಮಾ ಚಿತ್ರೀಕರಣದ ತುಣುಕಾ ಎಂಬುದರ ಬಗ್ಗೆ ಜೋಡಿ ಗುಟ್ಟು ಬಿಟ್ಟುಕೊಟ್ಟಿಲ್ಲ.

ನರೇಶ್, ಪವಿತ್ರಾ ವಿರುದ್ಧ ರಮ್ಯಾ ಆರೋಪ

ನರೇಶ್ ಹಾಗೂ ಪವಿತ್ರಾ ಲೋಕೇಶ್ ಸಂಬಂಧದ ಬಗ್ಗೆ ಈ ಹಿಂದೆಯೇ ನರೇಶ್ ಮೂರನೇ ಪತ್ನಿ ರಮ್ಯಾ ಅವರು ತಕರಾರು ತೆಗೆದಿದ್ದರು. ಕೆಲ ತಿಂಗಳುಗಳ ಹಿಂದೆ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಪವಿತ್ರಾ ಲೋಕೇಶ್‌ ಮತ್ತು ನರೇಶ್‌ ಇರೋದನ್ನು ನೋಡಿ ರಮ್ಯಾ ಕೂಗಾಡಿದ್ದರು. ಪೊಲೀಸ್ ಭದ್ರತೆಯೊಂದಿಗೆ ನರೇಶ್, ಪವಿತ್ರಾ ಅವರು ಹೋಟೆಲ್‌ನಿಂದ ಹೊರಗಡೆ ಹೋಗಿದ್ದರು. ಈ ವರ್ಷದ ಆರಂಭದಲ್ಲಿಯೇ ಪವಿತ್ರಾ, ನರೇಶ್ ಅವರು ಶೀಘ್ರದಲ್ಲಿ ಮದುವೆ ಆಗಲಿದ್ದೇವೆ ಎಂದು ಹೇಳುವ ವಿಡಿಯೋವನ್ನು ಬಿಟ್ಟಿದ್ದರು.

Related post

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ ಸುತ್ತ ಭದ್ರತೆ ಹೆಚ್ಚಿಸಿದ ಮುಂಬೈ ಪೊಲೀಸರು

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ…

ನ್ಯೂಸ್‌ ಆ್ಯರೋ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಇದೀಗ ಜೀವ ಬೆದರಿಕೆಯೊಡ್ಡಿ ಇ ಮೇಲ್‌ ಬಂದ ಹಿನ್ನೆಲೆಯಲ್ಲಿ ಮನೆಯ ಸುತ್ತಲೂ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಕಳೆದ ವರ್ಷ…
ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ ಉದ್ಘಾಟಿಸಿ ಪೋಷಕರಿಗೆ ಕಿವಿಮಾತು ಹೇಳಿದ್ದೇನು?

ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ…

ನ್ಯೂಸ್‌ ಆ್ಯರೋ : ಸರ್ಕಾರಿ ಶಾಲೆ ಉಳಿವಿಗಾಗಿ ಮಕ್ಕಳು, ಗ್ರಾಮಸ್ಥರು ಹೋರಾಡುವ ಕಥೆಯನ್ನು ಸಿನಿಮಾ ಮಾಡಿ ಎಲ್ಲರ ಮನಸ್ಸನ್ನು ಗೆದ್ದಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ನಾನು…
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ ಸಾಧ್ಯತೆ, ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ…

ನ್ಯೂಸ್‌ ಆ್ಯರೋ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗವು ಇದೇ ತಿಂಗಳ ಕೊನೆಯ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಮೇ…

Leave a Reply

Your email address will not be published. Required fields are marked *