ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾದ ನವಜೋತ್ ಸಿಧು ಪತ್ನಿ – ಗಂಡ ಜೈಲಲ್ಲಿರುವುದನ್ನು ನೆನೆದು ಭಾವನಾತ್ಮಕ ಪೋಸ್ಟ್

ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾದ ನವಜೋತ್ ಸಿಧು ಪತ್ನಿ – ಗಂಡ ಜೈಲಲ್ಲಿರುವುದನ್ನು ನೆನೆದು ಭಾವನಾತ್ಮಕ ಪೋಸ್ಟ್

ನ್ಯೂಸ್ ಆ್ಯರೋ : ಸ್ತನದ ಕ್ಯಾನ್ಸರ್ ನ‌ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನವಜೋತ್ ಕೌರ್ ಸಿಧು ಅವರು ಈ ಸಂದರ್ಭ ಗಂಡ ಮಾಜಿ ಕ್ರಿಕೆಟಿಗ, ಪಂಜಾಬ್‌ ಪ್ರದೇಶ ಕಾಂಗ್ರೆಸ್‌ ಸಮಿತಿಯ ಮಾಜಿ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಅವರು ಜೈಲಲ್ಲಿ ಇರುವುದನ್ನು ನೆನೆದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

ಪೋಸ್ಟ್ ನಲ್ಲಿ ಏನಿದೆ?

ಪದೇ ಪದೇ ನಿಮಗೆ ನ್ಯಾಯ ಸಿಗದಿರುವುದನ್ನು ಕಾಣುತ್ತಲೇ ನಿಮಗಾಗಿ ಕಾಯುತ್ತಿರುವೆ. ಸತ್ಯವು ಅತ್ಯಂತ ಪ್ರಬಲವಾದುದು, ಅದು ನಿಮ್ಮ ಪರೀಕ್ಷೆಗೆ ಒಳಪಡಿಸುವ ಮೂಲಕ ಸಮಯ ತೆಗೆದುಕೊಳ್ಳುತ್ತದೆ. ಇದು ಕಲಿಯುಗ. ಆದರೆ, ಕ್ಷಮಿಸಿ ನನ್ನಿಂದ ನಿಮ್ಮನ್ನು ಕಾಣಲು ಕಾಯಲು ಆಗುತ್ತಿಲ್ಲ, ಏಕೆಂದರೆ, ಇದು ಎರಡನೇ ಹಂತದ ಸ್ತನ ಕ್ಯಾನ್ಸರ್ ಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಇದಕ್ಕೆ ಯಾರನ್ನೂ ದೂಷಿಸಲು ಸಾಧ್ಯವಿಲ್ಲ, ಇದೆಲ್ಲ ದೇವರ ಯೋಜನೆ’ ಎಂದು ತಮ್ಮ ನೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿದ ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷ ಅಮರಿಂದರ್‌ ಸಿಂಗ್‌ ರಾಜಾ ವಾರಿಂಗ್‌ ಅವರು ಟ್ವೀಟಿಸಿ, ”ನೀವು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವುದು ವಿಷಾದನೀಯ. ಆದರೆ, ಸರಿಯಾದ ಸಮಯಕ್ಕೆ ಅದು ಪತ್ತೆಯಾಗಿದೆ. ಶೀಘ್ರ ಗುಣಮುಖವಾಗುವಂತೆ ಪ್ರಾರ್ಥಿಸುತ್ತೇನೆ” ಎಂದು ಹಾರೈಸಿದ್ದಾರೆ.

1988ರ ಪ್ರಕರಣದಲ್ಲಿ ನವಜೋತ್‌ ಸಿಂಗ್‌ ಸಿಧು ಅವರಿಗೆ ಒಂದು ವರ್ಷದ ಶಿಕ್ಷೆಯಾಗಿದ್ದು, ಅವರನ್ನು ಪಟಿಯಾಲಾದ ಸೆಂಟ್ರಲ್‌ ಜೈಲಿನಲ್ಲಿ ಇರಿಸಲಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *