ಗಂಗಮ್ಮ ದೇವಿಗೆ ಪಂಜುರ್ಲಿ ಅಲಂಕಾರ: ಕಾಂತಾರ 2 ಬ್ಯಾನ್ ಮಾಡುವಂತೆ ಕರಾವಳಿಗರ ಒತ್ತಾಯ

ಗಂಗಮ್ಮ ದೇವಿಗೆ ಪಂಜುರ್ಲಿ ಅಲಂಕಾರ: ಕಾಂತಾರ 2 ಬ್ಯಾನ್ ಮಾಡುವಂತೆ ಕರಾವಳಿಗರ ಒತ್ತಾಯ

ನ್ಯೂಸ್ ಆ್ಯರೋ : ಕರಾವಳಿಯ ಭೂತರಾಧನೆಗೆ ಧಕ್ಕೆ ತಂದಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ಇಲ್ಲಿನ ಗಂಗಮ್ಮ ತಾಯಿಗೆ ಪಂಜುರ್ಲಿ ದೈವದದಂತೆ ಅಲಂಕಾರ ಮಾಡಿ,‌ಆ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಕರಾವಳಿಗರು ಆಕ್ರೋಶವನ್ನು ವ್ಯಕ್ತಪಡಿಸಿ, ಕಾಂತಾರ ೨ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದಿದ್ದಾರೆ.

ಈ ಎಲ್ಲ ಬೆಳವಣಿಗೆಗಳು ಕಾಂತಾರ ಸಿನಿಮಾ ಯಶಸ್ವಿನ ಬಳಿಕ ನಡೆಯುತ್ತಿರುವುದರಿಂದ ಜನರು ನಿರ್ದೇಶಕ, ನಟ ರಿಷಬ್‌ ಶೆಟ್ಟಿ ವಿರುದ್ಧ ಆಕ್ರೋಶವಾಗಿದ್ದಾರೆ.

ಕರಾವಳಿ ಭಾಗದಲ್ಲಿ ಹೊರತುಪಡಿಸಿದರೆ ದೇಶದ ಬೇರೆಲ್ಲೂ ದೈವರಾಧನೆಯನ್ನು ಪೂಜಿಸುತ್ತಿರಲಿಲ್ಲ. ಆದರೆ ಇದೀಗ ಇಲ್ಲಿನ‌ ದೈವರಾಧನೆಯ ಕಾರ್ಣಿಕ ತಿಳಿದು ಅದನ್ನು ದುರುಪಯೋಗ ಮಾಡುವ ಯತ್ನ‌ ನಡೆಯುತ್ತಿದೆ. ಈ ಎಲ್ಲ‌ ಬೆಳವಣಿಗೆ ಕಾಂತಾರ ಸಿನಿಮಾದಲ್ಲಿ ಪಂಜುರ್ಲಿ ದೈವದ ಕಾರ್ಣಿಕವನ್ನು ತೋರಿಸಿದ ನಂತರ ನಡೆಯುತ್ತಿರುವುದು ಆಘಾತಕಾರಿಯಾಗಿದೆ. ಮುಂದಿನ ದಿನಗಳಲ್ಲಿ ಇದು ಎತ್ತ ಸಾಗಲಿದೆಯೋ, ಆದ್ದರಿಂದ ‘ಕಾಂತಾರ 2’ ಸಿನಿಮಾವನ್ನು ಬ್ಯಾನ್‌ ಮಾಡುವ ಮೂಲಕ ತುಳುನಾಡಿನ ಸಂಸ್ಕೃತಿಯನ್ನು ಕಾಪಾಡಬೇಕು ಎಂದು ಕೆಲವು ಕರಾವಳಿಗರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

‘ಕಾಂತಾರ’ ಸಿನಿಮಾ ತಂಡ ಇದಕ್ಕೆಲ್ಲ‌ ಅವಕಾಶ ನೀಡಬಾರದಿತ್ತು ಆದರೆ ಚಿತ್ರ ತಂಡ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ. ಸಾಕಷ್ಟು ಹಣವನ್ನು ಮಾಡಿರುವ ಚಿತ್ರತಂಡ ದೈವರಾಧನೆಯನ್ನು ದುರುಪಯೋಗ ಮಾಡುತ್ತಿರುವುದರ ಬಗ್ಗೆ ಕರಾವಳಿ ದೈವರಾಧಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *