ಸ್ಯಾಂಡಲ್‌ವುಡ್‌ ಸ್ಟಾರ್ಸ್ ಜತೆ ಪ್ರಧಾನಿ ಮೋದಿ ಮಾತುಕತೆ: ಕಾಂತಾರ, ಕೆಜಿಎಫ್‌ ಚಿತ್ರಕ್ಕೆ ಪ್ರಶಂಸೆಜೌತಣಕೂಟದಲ್ಲಿ ಭಾಗಿಯಾದ ಯಶ್, ರಿಷಬ್ ಶೆಟ್ಟಿ

ಸ್ಯಾಂಡಲ್‌ವುಡ್‌ ಸ್ಟಾರ್ಸ್ ಜತೆ ಪ್ರಧಾನಿ ಮೋದಿ ಮಾತುಕತೆ: ಕಾಂತಾರ, ಕೆಜಿಎಫ್‌ ಚಿತ್ರಕ್ಕೆ ಪ್ರಶಂಸೆ
ಜೌತಣಕೂಟದಲ್ಲಿ ಭಾಗಿಯಾದ ಯಶ್, ರಿಷಬ್ ಶೆಟ್ಟಿ

ನ್ಯೂಸ್‌ಆ್ಯರೋ: ‘ಏರೋ ಇಂಡಿಯಾ 2023ʼ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ಚಿತ್ರರಂಗದ ಪ್ರಮುಖರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಕಾಂತಾರ ಚಿತ್ರದ ನಿರ್ದೇಶಕ, ನಟ ರಿಷಬ್‌ ಶೆಟ್ಟಿ, ಕೆಜಿಎಫ್‌ ಸ್ಟಾರ್‌ ಯಶ್‌, ದಿವಂಗತ ನಟ ಪುನೀತ್‌ ರಾಜ್‌ ಕುಮಾರ್‌ ಅವರ ಪತ್ನಿ ಅಶ್ವಿನಿ, ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿರುವ ಶ್ರದ್ಧಾ, ನಿರ್ಮಾಪಕ ವಿಜಯ್ ಕಿರಂಗದೂರು ಅವರ ಜತೆ ಮೋದಿ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಕನ್ನಡ ಚಿತ್ರರಂಗ ಬೆಳೆಯುತ್ತಿರುವ ಬಗ್ಗೆ ಪ್ರಧಾನಿ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅದಲ್ಲದೆ ಕೆಜಿಎಫ್, ಕಾಂತಾರ ಚಿತ್ರಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅದರ ಬಗ್ಗೆ ಚರ್ಚಿಸಿದ್ದಾರೆ. ಹಾಲಿವುಡ್ ರೀತಿ ನಮ್ಮ ಕನ್ನಡ ಚಿತ್ರರಂಗ ಬೆಳೆಯಬೇಕು ಎಂದಿದ್ದಾರೆ.

ನರೇಂದ್ರ ಮೋದಿ ಅವರು ಕನ್ನಡ ಚಿತ್ರರಂಗದ ಗಣ್ಯರನ್ನು ಭೇಟಿಯಾಗಿ ಅವರೊಂದಿಗೆ ಕರ್ನಾಟಕದ ಸಾಂಸ್ಕೃತಿಕ ಚಿತ್ರಣ ಮತ್ತು ನವ ಭಾರತ ಹಾಗೂ ಪ್ರಗತಿಪರ ಕರ್ನಾಟಕದ ನಿರ್ಮಾಣಕ್ಕೆ ಅವರು ನೀಡಬಹುದಾದ ಕೊಡುಗೆಗಳ ಬಗ್ಗೆ ಚರ್ಚಿಸಿದ್ದಾರೆ.

ಮೋದಿ ಅವರು ಇಂದು ಬೆಂಗಳೂರಿನಲ್ಲಿ ಏರೋ ಇಂಡಿಯಾ 2023 ಕ್ಕೆ ಚಾಲನೆ ನೀಡಿದರು ಮತ್ತು ಇದರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದರು. ಇದು ಏಷ್ಯಾದ ಅತೀ ದೊಡ್ಡ ಏರ್‌ ಶೋ ಆಗಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ, ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ ಸಿಂಗ್‌, ಕರ್ನಾಟಕದ ರಾಜ್ಯಪಾಲರು, ಕೇಂದ್ರ ಸಚಿವರು ಉಪಸ್ಥಿತರಿದ್ದರು.

Related post

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ – ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈ‌ ದಿನಗಳಲ್ಲಿ ಮದ್ಯ ಮಾರಾಟ ಇಲ್ಲ..!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ –…

ನ್ಯೂಸ್ ಆ್ಯರೋ ‌: ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ…

Leave a Reply

Your email address will not be published. Required fields are marked *