ಸ್ಯಾಂಡಲ್ವುಡ್ ಸ್ಟಾರ್ಸ್ ಜತೆ ಪ್ರಧಾನಿ ಮೋದಿ ಮಾತುಕತೆ: ಕಾಂತಾರ, ಕೆಜಿಎಫ್ ಚಿತ್ರಕ್ಕೆ ಪ್ರಶಂಸೆ
ಜೌತಣಕೂಟದಲ್ಲಿ ಭಾಗಿಯಾದ ಯಶ್, ರಿಷಬ್ ಶೆಟ್ಟಿ
- ಮನರಂಜನೆ
- February 13, 2023
- No Comment
- 162
ನ್ಯೂಸ್ಆ್ಯರೋ: ‘ಏರೋ ಇಂಡಿಯಾ 2023ʼ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ಚಿತ್ರರಂಗದ ಪ್ರಮುಖರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಕಾಂತಾರ ಚಿತ್ರದ ನಿರ್ದೇಶಕ, ನಟ ರಿಷಬ್ ಶೆಟ್ಟಿ, ಕೆಜಿಎಫ್ ಸ್ಟಾರ್ ಯಶ್, ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ, ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿರುವ ಶ್ರದ್ಧಾ, ನಿರ್ಮಾಪಕ ವಿಜಯ್ ಕಿರಂಗದೂರು ಅವರ ಜತೆ ಮೋದಿ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಕನ್ನಡ ಚಿತ್ರರಂಗ ಬೆಳೆಯುತ್ತಿರುವ ಬಗ್ಗೆ ಪ್ರಧಾನಿ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅದಲ್ಲದೆ ಕೆಜಿಎಫ್, ಕಾಂತಾರ ಚಿತ್ರಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅದರ ಬಗ್ಗೆ ಚರ್ಚಿಸಿದ್ದಾರೆ. ಹಾಲಿವುಡ್ ರೀತಿ ನಮ್ಮ ಕನ್ನಡ ಚಿತ್ರರಂಗ ಬೆಳೆಯಬೇಕು ಎಂದಿದ್ದಾರೆ.
ನರೇಂದ್ರ ಮೋದಿ ಅವರು ಕನ್ನಡ ಚಿತ್ರರಂಗದ ಗಣ್ಯರನ್ನು ಭೇಟಿಯಾಗಿ ಅವರೊಂದಿಗೆ ಕರ್ನಾಟಕದ ಸಾಂಸ್ಕೃತಿಕ ಚಿತ್ರಣ ಮತ್ತು ನವ ಭಾರತ ಹಾಗೂ ಪ್ರಗತಿಪರ ಕರ್ನಾಟಕದ ನಿರ್ಮಾಣಕ್ಕೆ ಅವರು ನೀಡಬಹುದಾದ ಕೊಡುಗೆಗಳ ಬಗ್ಗೆ ಚರ್ಚಿಸಿದ್ದಾರೆ.
ಮೋದಿ ಅವರು ಇಂದು ಬೆಂಗಳೂರಿನಲ್ಲಿ ಏರೋ ಇಂಡಿಯಾ 2023 ಕ್ಕೆ ಚಾಲನೆ ನೀಡಿದರು ಮತ್ತು ಇದರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದರು. ಇದು ಏಷ್ಯಾದ ಅತೀ ದೊಡ್ಡ ಏರ್ ಶೋ ಆಗಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ ಸಿಂಗ್, ಕರ್ನಾಟಕದ ರಾಜ್ಯಪಾಲರು, ಕೇಂದ್ರ ಸಚಿವರು ಉಪಸ್ಥಿತರಿದ್ದರು.