ನಟಿ ಅಮಲಾ ಪೌಲ್ ಗೆ ಧಮ್ಕಿ ಹಾಕಿದ್ದ ರಜನಿಕಾಂತ್ – ಮಗಳಿಗಾಗಿ ಖಡಕ್ ಆದ್ರಾ ಸೂಪರ್ ಸ್ಟಾರ್? ಪತ್ರಕರ್ತ ಬಾಯ್ಬಿಟ್ಟ ಸತ್ಯವೇನು?

ನಟಿ ಅಮಲಾ ಪೌಲ್ ಗೆ ಧಮ್ಕಿ ಹಾಕಿದ್ದ ರಜನಿಕಾಂತ್ – ಮಗಳಿಗಾಗಿ ಖಡಕ್ ಆದ್ರಾ ಸೂಪರ್ ಸ್ಟಾರ್? ಪತ್ರಕರ್ತ ಬಾಯ್ಬಿಟ್ಟ ಸತ್ಯವೇನು?

ನ್ಯೂಸ್‌ ಆ್ಯರೋ : ಸೂಪರ್‌ ಸ್ಟಾರ್ ರಜನಿಕಾಂತ್ ಅವರಿಗೆ ಇಬ್ಬರು ಹೆಣ್ಣು ಮಕ್ಕಳು. ಐಶ್ವರ್ಯ ಹಾಗೂ ಸೌಂದರ್ಯ ಎಂಬ ಇಬ್ಬರ ದಾಂಪತ್ಯ ಜೀವನದಲ್ಲಿ ಬಿರುಕಾಗಿದ್ದು, ಸೌಂದರ್ಯ ಅವರು ಈಗಾಗಲೇ ಗಂಡನಿಂದ ವಿಚ್ಛೇದನ ಪಡೆದು ದೂರವಾಗಿದ್ದಾರೆ. ಇನ್ನೂ ನಟ ಧನುಷ್‌ ಅವರನ್ನು ಮದುವೆಯಾಗಿರುವ ಐಶ್ವರ್ಯ ಕೂಡ ಗಂಡನಿಂದ ದೂರವಾಗಿ ಬೇರೆ ಮನೆಯಲ್ಲಿ ವಾಸವಾಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ.

ಇನ್ನೂ ಇವರಿಬ್ಬರ ದಾಂಪತ್ಯವನ್ನು ಸರಿಮಾಡಲು ರಜನಿಕಾಂತ್ ಅವರು ತುಂಬಾನೇ ಪ್ರಯತ್ನ ಪಟಿದ್ದಾರಂತೆ. ಇದೀಗ ಈ ಸಂಬಂಧ ಪತ್ರಕರ್ತರೊಬ್ಬರು ಮಾತನಾಡಿರುವ ವಿಷಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಜನಿಕಾಂತ್ ಯಾರಿಗಾದ್ರೂ ಧಮ್ಕಿ ಹಾಕಲು ಸಾಧ್ಯವೇ? ಯಾರನ್ನೇ ನೋಡಿದ್ರೂ ಕೈಮುಗಿದು ಗೌರವ ಕೊಡುವ ರಜನಿಕಾಂತ್ ಅವರು ತಮ್ಮ ಮಗಳ ದಾಂಪತ್ಯ ಸಂಬಂಧ ಮಲೆಯಾಳಂ ನಟಿಗೆ ಧಮ್ಕಿ ಹಾಕಿದ್ದಾರೆ ಎಂಬ ವಿಷಯವನ್ನು ಪತ್ರಕರ್ತ ಹೇಳಿಕೊಂಡಿದ್ದಾರೆ. ಆ ನಟಿ ಬೇರಾರೂ ಅಲ್ಲ. ಕನ್ನಡದ ಹೆಬ್ಬುಲಿ ಸಿನಿಮಾದಲ್ಲಿ ನಟ ಸುದೀಪ್‌ಗೆ ನಾಯಕಿಯಾಗಿ ನಟಿಸಿದ ಅಮಲಾ ಪೌಲ್‌ ಅನ್ನೋ ಸುದ್ದಿ ಹೆಚ್ಚು ಕುತೂಹಲ ಮೂಡಿಸಿದೆ.

ಈ ಹಿಂದೆ ನಟಿ ಅಮಲಾ ಪೌಲ್ ಮತ್ತು ಧನುಷ್ ಒಟ್ಟಿಗೆ ಸಿನಿಮಾ ಮಾಡಿದ್ದಾರೆ. ಆಗಲೇ ಇವರಿಗೆ ಆತ್ಮೀಯತೆ ಬೆಳೆದಿದೆ. ಅದು ಇನ್ನೂ ಒಂದು ಲೆವಲ್‌ಗೆ ಹೋಗಿ ಇಬ್ಬರ ಮಧ್ಯೆ ಪ್ರೀತಿ ಬೆಳೆದಿದೆ. ಇದರಿಂದ ಐಶ್ವರ್ಯ ಹಾಗೂ ಧನುಷ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಮಾತಿದೆ. ಈ ವೇಳೆ ರಜನಿಕಾಂತ್ ಅವರು ತಮ್ಮ ಮಗಳ ಬದುಕು ಸರಿಮಾಡುವ ಸಲುವಾಗಿ ನಟಿ ಅಮಲಾ ಪೌಲ್‌ ಮನೆಗೆ ಹೋಗಿ ಎಚ್ಚರಿಕೆ ನೀಡಿದ್ದಾರೆ ಎಂದು ಪತ್ರಕರ್ತರೊಬ್ಬರು ಹೇಳಿಕೊಂಡಿದ್ದಾರೆ. ಈ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Related post

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ…

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು…
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಆ್ಯರೋ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿ ಇಂದು…
ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ…

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ…

Leave a Reply

Your email address will not be published. Required fields are marked *