ರಾಖಿ ಸಾವಂತ್ ಪತಿ ಆದಿಲ್ ಖಾನ್ ಅರೆಸ್ಟ್ – ಬೀದಿಗೆ ಬಿತ್ತು ಹಾಟ್ ನಟಿಯ ವೈವಾಹಿಕ ಜೀವನ

ರಾಖಿ ಸಾವಂತ್ ಪತಿ ಆದಿಲ್ ಖಾನ್ ಅರೆಸ್ಟ್ – ಬೀದಿಗೆ ಬಿತ್ತು ಹಾಟ್ ನಟಿಯ ವೈವಾಹಿಕ ಜೀವನ

ನ್ಯೂಸ್ ಆ್ಯರೋ : ತಿಂಗಳ ಹಿಂದೆಯಷ್ಟೇ ರಾಖಿ ಸಾವಂತ್ ಹಾಗೂ ಆದಿಲ್ ಖಾನ್ ಮದುವೆಯಾಗಿದ್ದರು. ಆದರೆ ಇವರು ಮದುವೆಯಾದಾಗಿನಿಂದಲೂ ವಿವಾದಗಳಿಂದ ಸುದ್ದಿಯಲ್ಲಿದ್ದಾರೆ. ಕೆಲ ಸಮಯವಷ್ಟೇ ಚೆನ್ನಾಗಿದ್ದ ಈ ಜೋಡಿಗಳ ನಡುವೆ ಮತ್ತೆ ಬಿರುಕು‌ ಮೂಡಿದೆ. ಅಷ್ಟೇ ಅಲ್ಲದೆ ಪತಿ ಆದಿಲ್ ಖಾನ್‌ ವಿರುದ್ದ ರಾಖಿ ಸಾವಂತ್ ದೂರು ದಾಖಲಿಸಿದ್ದು, ಆತನನ್ನು ಮುಂಬೈನ ಓಶಿರ ಪೊಲೀಸರು ಬಂಧಿಸಿದ್ದಾರೆ.

ಇಷ್ಟೆಲ್ಲ ಸಾಂಸಾರಿಕ ಜಟಾಪಟಿಯ ನಂತರವೂ ಇತ್ತೀಚೆಗಷ್ಟೇ ರಾಖಿ ಸಾವಂತ್‌ ಪತಿ ಆದಿಲ್‌ ಖಾನ್ ಅವರಿಗೆ ಕೈ ತುತ್ತು ನೀಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಖಿ ಸಾವಂತ್, ‘ಆದಿಲ್ ಪರ ಸ್ತ್ರೀಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದಾನೆ. ಇದು ನಾಟಕವಲ್ಲ, ಆತ‌ ನನ್ನ ಜೀವನ ಹಾಳು ಮಾಡಿದ್ದಾನೆ. ನನಗೆ ಥಳಿಸಿದ್ದಾನೆ. ನನ್ನ ಹಣವನ್ನೆಲ್ಲ ಆತ ಲಪಟಾಯಿಸಿದ್ದಾನೆ’ ಎಂದಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ರಾಖಿ ಸಾವಂತ್‌ ಹಾಗೂ ಆದಿಲ್ ಖಾನ್‌ ಒಟ್ಟಿಗೆ ಕುಳಿತು ಊಟ ಮಾಡುವುದು ಹಾಗೂ ಆಕೆ ಕೈ ತುತ್ತು ತಿನ್ನಿಸುವ ತುಣುಕುಗಳಿದೆ. ಆ ನಂತರವೇ ಆದಿಲ್ ಖಾನ್ ಬಂಧನವಾಗಿದೆ. ಈ ಬಗ್ಗೆ ಮಾತನಾಡಿರುವ ರಾಖಿ ಸಾವಂತ್, ‘ಮನೆಯಲ್ಲಿ ನಾನು ಅವನಿಗೆ ಊಟ ಮಾಡಿಸುತ್ತಿದ್ದೆ. ಶತ್ರುಗಳು ಮನೆಗೆ ಬಂದಾಗಲೂ ನೀರು ಕೊಡುತ್ತೇವೆ. ಆತ ನನ್ನ ಗಂಡ. ಆತನನ್ನು ಸಾಯುವ ತನಕ ಪ್ರೀತಿಸುತ್ತೇನೆ, ಆದರೆ ಎಂದಿಗೂ ಕ್ಷಮಿಸುವುದಿಲ್ಲ’ ಎಂದಿದ್ದಾರೆ.

ಈ ವಿಡಿಯೋಗಳನ್ನು ನೋಡಿ ನೆಟ್ಟಿಗರು ಬಗೆಬಗೆಯ ಕಮೆಂಟ್ ಮಾಡಿದ್ದಾರೆ. ‘ಇವರ ಜೀವನದ ರೀತಿಯೇ ಅರ್ಥವಾಗುವುದಿಲ್ಲ’ ಎಂದು ಕಮೆಂಟಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *