ಮೊದಲ ಮಗುವಿನ ನಿರೀಕ್ಷೆಯಲ್ಲಿ ರಾಮ್ ಚರಣ್ ತೇಜಾ ದಂಪತಿ – ಚಿರಂಜೀವಿ ಕುಟುಂಬದಲ್ಲಿ ಸಂಭ್ರಮದ ವಾತಾವರಣ

ಮೊದಲ ಮಗುವಿನ ನಿರೀಕ್ಷೆಯಲ್ಲಿ ರಾಮ್ ಚರಣ್ ತೇಜಾ ದಂಪತಿ – ಚಿರಂಜೀವಿ ಕುಟುಂಬದಲ್ಲಿ ಸಂಭ್ರಮದ ವಾತಾವರಣ

ನ್ಯೂಸ್‌ ಆ್ಯರೋ‌ : ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಸಂತಸ ಮನೆ ಮಾಡಿದ್ದು, ರಾಮ್ ಚರಣ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಹೌದು.. ನಟ ರಾಮ್‌ ಚರಣ್ ತೇಜ ಹಾಗೂ ಉಪಾಸನಾ ಜೋಡಿ ಮದುವೆಯಾಗಿ 10 ವರ್ಷಗಳ ಕಳೆದ ಬಳಿಕ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ಈ ವಿಷಯವನ್ನು ‘ಮಗಧೀರ’ ನಟ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತಪಡಿಸಿದ್ದಾರೆ.

“ನಾನು, ಉಪಾಸನಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಸುರೇಖಾ, ಚಿರಂಜೀವಿ ಹಾಗೂ ಶೋಬನಾ, ಅನಿಲ್ ಕಾಮಿನೇನಿ ಕಡೆಯಿಂದ ಕೃತಜ್ಞತೆಗಳು” ಎಂದು ರಾಮ್ ಚರಣ್ ತೇಜಾ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಹಾಕಿದ್ದಾರೆ.

ಈ ಕುರಿತು ಚಿರಂಜೀವಿ ಮತ್ತು ಅನಿಲ್ ಕಾಮಿನೇನಿ ಸುದ್ದಿಯನ್ನು ದೃಢಪಡಿಸಿದ್ದು, ‘ಶ್ರೀ ಹನುಮಾನ್ ಜೀ ಅವರ ಆಶೀರ್ವಾದದೊಂದಿಗೆ, ಉಪಾಸನಾ ಮತ್ತು ರಾಮ್ ಚರಣ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ತಿಳಿಸಲು ನಾವು ಸಂತೋಷಪಡುತ್ತೇವೆ. ಪ್ರೀತಿ ಮತ್ತು ಕೃತಜ್ಞತೆಗಳೊಂದಿಗೆ ಸುರೇಖಾ ಮತ್ತು ಚಿರಂಜೀವಿ ಕೊನಿಡೇಲಿ, ಶೋಭನಾ ಮತ್ತು ಅನಿಲ್ ಕಾಮಿನೇನಿ ಎಂದು ಬರೆದಿದ್ದಾರೆ.

ಅಲ್ಲದೇ ಈ ಹಿಂದೆ ಸಾಕಷ್ಟು ಬಾರಿ ಉಪಾಸನಾ ಮಗುವಿನ ಬಗ್ಗೆ ಮಾತನಾಡಿದ್ದು, ಮದುವೆಯಾಗಿ ಇಷ್ಟು ವರ್ಷವಾದರೂ ಕೂಡ ಈ ಜೋಡಿ ಮಗು ಮಾಡಿಕೊಂಡಿಲ್ಲ ಎಂದು ಪ್ರಶ್ನೆ ಮೂಡಿತ್ತು. ಅಲ್ಲದೇ ಉಪಾಸನಾ, “ಇದು ಮೊದಲಿಗೆ ನನ್ನ ವೈಯಕ್ತಿಕ ವಿಷಯ. ಸಮಸ್ಯೆ ಇದೆ ಅಥವಾ ಇಲ್ಲ ಎಂದು ಹೇಳಿದರೂ ಕೂಡ ಇನ್ನೇನೋ ಪ್ರಶ್ನೆ ಏಳುತ್ತದೆ. ಹಾಗಾಗಿ ನಾನು ಈ ಬಗ್ಗೆ ಏನೂ ಮಾತನಾಡಲಾರೆ” ಎಂದು ಹೇಳಿದ್ದರು.

ಹಾಗೇ ಸದ್ಗುರು ಜೊತೆಗಿನ ಸಂವಾದದಲ್ಲಿ ಈ ಬಗ್ಗೆ ಮಾತನಾಡಿದ್ದ ಉಪಾಸನಾ ಅವರು, “ನಾನು ಮದುವೆಯಾಗಿ ಖುಷಿಯಿಂದ 10 ವರ್ಷ ಕಳೆದಿದ್ದೇನೆ. ನನಗೆ ನನ್ನ ಜೀವನ, ಕುಟುಂಬ ಅಂದರೆ ತುಂಬ ಇಷ್ಟ. ಆದರೆ ಜನರು ನನ್ನ ರಿಲೇಶನ್‌ಶಿಪ್‌, ಜೀವನದಲ್ಲಿ ನನ್ನ ಪಾತ್ರ, ಮಗುವಿನ ಬಗ್ಗೆ ಜನರು ಯಾಕೆ ಪ್ರಶ್ನೆ ಮಾಡ್ತಾರೆ ಅಂತ ಅರ್ಥ ಆಗುತ್ತಿಲ್ಲ. ಇದಕ್ಕೆ ಉತ್ತರ ಕೊಡಲು ಇಷ್ಟಪಡದಿರುವ ಎಷ್ಟೋ ಮಹಿಳೆಯರಿದ್ದಾರೆ” ಎಂದು ಹೇಳಿದ್ದರು.

ಇನ್ನೂ ರಾಮ್ ಚರಣ್ ಮತ್ತು ಉಪಾಸನಾ ಒಬ್ಬರನೊಬ್ಬರು ಪ್ರೀತಿಸಿ, ಜೂನ್ 14, 2012ರಂದು ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದರು. ಇದೀಗ ಹತ್ತು ವರ್ಷಗಳು ರಾಮ್ ಚರಣ್ ಜೋಡಿ ವೈವಾಹಿಕ ಜೀವನ ಪೂರೈಸಿರುವ ಬೆನ್ನಲ್ಲೇ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ರಾಮ್ ಚರಣ್ ದಂಪತಿ ಪೋಷಕರಾಗುತ್ತಿರುವ ಬಗ್ಗೆ ಚಿರಂಜೀವಿ ಸಾಮಾಜಿಕ ಜಾಲತಾಣದ ಮೂಲಕ ಸಿಹಿ ಸುದ್ದಿ ತಿಳಿಸಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *