ರಶ್ಮಿಕಾ-ವಿಜಯ್ ದೇವರಕೊಂಡ ನಡುವಿನ ಲವ್ ಬಹಿರಂಗ – ಪ್ರೀತಿ ವಿಚಾರ ಬಯಲು ಮಾಡಿದ್ದು ಯಾರು ಗೊತ್ತಾ?

ರಶ್ಮಿಕಾ-ವಿಜಯ್ ದೇವರಕೊಂಡ ನಡುವಿನ ಲವ್ ಬಹಿರಂಗ – ಪ್ರೀತಿ ವಿಚಾರ ಬಯಲು ಮಾಡಿದ್ದು ಯಾರು ಗೊತ್ತಾ?

ನ್ಯೂಸ್ ಆ್ಯರೋ : ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪ್ರೀತಿಯಲ್ಲಿರುವುದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈ ಬಗ್ಗೆ ಅವರು ಎಲ್ಲಿವರೆಗೂ ಎಲ್ಲಿಯೂ ಹೇಳಿಕೊಂಡಿಲ್ಲ. ಆದರೆ ಈಗ ಒಂದು ಶೋ ಅವರ ಪ್ರೀತಿಯ ವಿಚಾರವನ್ನು ಬಹಿರಂಗ ಪಡಿಸಿದೆ.

ನಟ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಪ್ರೀತಿಯಲ್ಲಿ ಬಿದ್ದಿದ್ದಾರೆ ಎನ್ನುವ ವಿಚಾರ ಅವರ ಅಭಿಮಾನಿಗಳಿಗಂತೂ ಗೊತ್ತೇ ಇದೆ. ಆದರೆ ಇದು ಎಲ್ಲಿಯೂ ಅಧಿಕೃತವಾಗಿ ಬಹಿರಂಗವಾಗಿರಲಿಲ್ಲ.

ಇದೀಗ ಬಾಲಯ್ಯ ಅವರು ನಡೆಸಿಕೊಡುವ ‘ಅನ್​ಸ್ಟಾಪೆಬಲ್ ವಿತ್ ಎನ್​ಬಿಕೆ’ ಶೋ ಗೆ ಬಂದಿದ್ದ ಅನಿಮಲ್ ಚಿತ್ರ ತಂಡ ರಶ್ಮಿಕಾ ಅವರ ಪ್ರೀತಿಯಲ್ಲಿ ಬಿದ್ದಿರುವ ವಿಷಯವನ್ನು ಬಹಿರಂಗ ಪಡಿಸಿದೆ.

ರಶ್ಮಿಕಾ ಮಂದಣ್ಣ, ರಣಬೀರ್ ಕಪೂರ್ ಹಾಗೂ ಸಿನಿಮಾ ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಶೋ ಗೆ ಬಂದಿದ್ದು, ಈ ವೇಳೆ ರಶ್ಮಿಕಾ ಪ್ರೀತಿಯಲ್ಲಿ ಇರುವ ವಿಚಾರ ಹೊರಬಿದ್ದಿದೆ.

ಶೋ ನಲ್ಲಿ ವಿಜಯ್ಗೆ ಕರೆ ಮಾಡುವಂತೆ ರಶ್ಮಿಕಾ ಅವರಿಗೆ ಹೇಳಲಾಗಿದ್ದು, ಕರೆ ಮಾಡಿ ಲೌಡ್ ಸ್ಪೀಕರ್ ಇರಿಸಲಾಗಿದೆ. ರಶ್ಮಿಕಾ ಕರೆ ಸ್ವೀಕರಿಸಿದ ವಿಜಯ್ ಹಲೋ ಎಂದಿದ್ದಾರೆ. ಬಳಿಕ ಪ್ರೀತಿಯಿಂದ ಮಾತು ಆರಂಭಿಸಿದ್ದಾರೆ.

ಫೋನ್ ಸ್ಪೀಕರ್​ನಲ್ಲಿ ಇಟ್ಟಿರುವ ವಿಷಯವನ್ನು ರಶ್ಮಿಕಾ ವಿಜಯ್ ಗೆ ಹೇಳಿದ್ದರು. ಇವರ ಮಾತಿನ ಮಧ್ಯೆ ರಶ್ಮಿಕಾ ‘ಐ ಲವ್ ಬಾಲ ಸರ್’ ಎಂದಿದ್ದಾರೆ ಇದಕ್ಕೆ ವಿಜಯ್ ‘ಐ ಲವ್ ಸಂದೀಪ್ ರೆಡ್ಡಿ ವಂಗ’ ಎಂದಿದ್ದಾರೆ. ಅವರ ಮಾತಿನಲ್ಲಿ ಹಾಸ್ಯವಿತ್ತು.

ವಿಜಯ್ ದೇವರಕೊಂಡ ಮನೆಯಲ್ಲಿ ನಡೆದ ಅರ್ಜುನ್ ರೆಡ್ಡಿ ಸಕ್ಸಸ್ ಪಾರ್ಟಿಯಲ್ಲಿ ರಶ್ಮಿಕಾ ಅವರನ್ನು ಸಂದೀಪ್ ಮೊದಲ ಭಾರಿ ಭೇಟಿ ಮಾಡಿದ್ದರು ಎನ್ನುವುದನ್ನು ಸಂದೀಪ್ ರೆಡ್ಡಿ ವಂಗ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಈ ರೀತಿಯ ಮಾಹಿತಿಯನ್ನು ಅವರು ಯಾಕೆ ಲೀಕ್ ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿ ನಕ್ಕಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *