ಕ್ರಿಕೆಟಿಗ ಶುಬ್ಮನ್ ಗಿಲ್ ಗೆ ರಶ್ಮಿಕಾ ಮೇಲೆ ಕ್ರಶ್ – ಕಿರಿಕ್ ಹುಡ್ಗಿ ಪ್ರತಿಕ್ರಿಯೆ ಏನ್ ಗೊತ್ತಾ..‌!!

ಕ್ರಿಕೆಟಿಗ ಶುಬ್ಮನ್ ಗಿಲ್ ಗೆ ರಶ್ಮಿಕಾ ಮೇಲೆ ಕ್ರಶ್ – ಕಿರಿಕ್ ಹುಡ್ಗಿ ಪ್ರತಿಕ್ರಿಯೆ ಏನ್ ಗೊತ್ತಾ..‌!!

ನ್ಯೂಸ್ ಆ್ಯರೋ : ರಿಷಬ್ ಶೆಟ್ಟಿ ನಿರ್ದೇಶನದ ಕಿರಿಕ್ ಪಾರ್ಟಿ ಮೂಲಕ ಸಿನಿಮಾ ರಂಗಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ ಸದ್ಯ ಟಾಲಿವುಡ್ ಹಾಗೂ ಬಾಲಿವುಡ್ ನಲ್ಲಿ ಸಖತ್ ಸದ್ದು ಮಾಡ್ತಿದ್ದಾರೆ. ರಶ್ಮಿಕಾ ಏನೇ ಮಾಡಿದ್ದರೂ, ಅವರ ಬಗ್ಗೆ ಯಾರು ಏನೇ ಮಾತನಾಡಿದ್ದರೂ ಸಖತ್ ಸುದ್ದಿಯಾಗುತ್ತಿದೆ. ಇತ್ತೀಚಿಗೆ ಕ್ರಿಕೆಟರ್ ಶುಭಮನ್ ಗಿಲ್‌ಗೆ ರಶ್ಮಿಕಾ ಮೇಲೆ ಕ್ರಶ್ ಎಂದು ಹೇಳಿರುವ ವಿಚಾರ ಸೆನ್ಸೇಷನ್ ಕ್ರಿಯೇಟ್ ಮಾಡಿತ್ತು. ಈ ವಿಚಾರಕ್ಕೆ ನಟಿ ರಶ್ಮಿಕಾ ರಿಯಾಕ್ಟ್ ಮಾಡಿದ್ದಾರೆ.

ರಶ್ಮಿಕಾ ಅವರು ಸಿನಿಮಾ ಮಾತ್ರವಲ್ಲದೇ ಸಾಕಷ್ಟು ಬ್ರ್ಯಾಂಡ್ ಪ್ರಮೋಷನ್ ಕೂಡ ಮಾಡ್ತಿದ್ದಾರೆ. ಇತ್ತೀಚಿಗೆ ಬ್ರ್ಯಾಂಡ್ ಪ್ರಮೋಷನ್‌ನಲ್ಲಿ ಭಾಗಿಯಾಗಿದ್ದ ವೇಳೆ ಪಾಪರಾಜಿಗಳು ಅವರನ್ನು ಸಾಕಷ್ಟು ಪ್ರಶ್ನೆ ಕೇಳಿದ್ದು, ಶುಭಮನ್ ಗಿಲ್ ಬಗ್ಗೆ ನಟಿಗೆ ಕೇಳಿದ್ದಾರೆ.

ರಶ್ಮಿಕಾ ಅವರೇ ನೀವು ಎಲ್ಲರ ಕ್ರಶ್ ಆಗಿಬಿಟ್ಟಿದ್ದೀರಾ. ಕ್ರಿಕೆಟರ್ ಕ್ರಶ್ ಕೂಡ ಎಂದು ರಶ್ಮಿಕಾಗೆ ಕೇಳಿದ್ದಾರೆ. ಅದಕ್ಕೆ ನಟಿ ನಕ್ಕಿದ್ದಾರೆ ಅಷ್ಟೇ. ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಚೆಂದದ ನಗು ಬೀರಿ ಹೋಗಿದ್ದಾರೆ.

ಸದ್ಯ ರಶ್ಮಿಕಾ ರಣ್‌ಬೀರ್ ಕಪೂರ್ ಜೊತೆ `ಅನಿಮಲ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಈ ಚಿತ್ರವನ್ನು ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡ್ತಿದ್ದಾರೆ.

ಈ ಮೊದಲು ತಮ್ಮ ಮೊದಲ ಚಿತ್ರದ ನಟನೆಯ ಬಗ್ಗೆ ಕೈಸನ್ನೆ ಮೂಲಕ ಉತ್ತರಿಸಿ ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದ ನಟಿ ಬಳಿಕ ಅದಕ್ಕಾಗಿ ಕ್ಷಮೆ ಯಾಚಿಸಿದ್ದರು. ಅದ್ಯಾಕೋ ರಕ್ಷಿತ್ ಶೆಟ್ಟಿ ಜೊತೆ ಸಂಬಂಧ ಕಡಿದುಕೊಂಡ ಬಳಿಕ ಕನ್ನಡ ಸಿನಿ ಅಭಿಮಾನಿಗಳು ಅವರನ್ನು ಅಷ್ಟಾಗಿ ಗಮನಹರಿಸುತ್ತಿಲ್ಲ‌ ಎಂಬುದು ಮಾತ್ರ ಅಷ್ಟೇ ಸತ್ಯ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *