‘KGF-3ಗೆ ಬೇಗ ರೆಡಿಯಾಗಿ ಅಂತ’ ಯಶ್ ಕಾಲ್ ಮಾಡಿ ಹೇಳಿದ್ರು ಎಂದ ರವೀನಾ ಟಂಡನ್ – ಯಾವಾಗ ಆರಂಭವಾಗುತ್ತೆ ಬಹುನಿರೀಕ್ಷಿತ ಚಿತ್ರದ ಶೂಟಿಂಗ್…!?

‘KGF-3ಗೆ ಬೇಗ ರೆಡಿಯಾಗಿ ಅಂತ’ ಯಶ್ ಕಾಲ್ ಮಾಡಿ ಹೇಳಿದ್ರು ಎಂದ ರವೀನಾ ಟಂಡನ್ – ಯಾವಾಗ ಆರಂಭವಾಗುತ್ತೆ ಬಹುನಿರೀಕ್ಷಿತ ಚಿತ್ರದ ಶೂಟಿಂಗ್…!?

ನ್ಯೂಸ್ ಆ್ಯರೋ : ಕನ್ನಡದ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ರಾಕಿಂಗ್ ಸ್ಟಾರ್ ಯಶ್ ಸೇರಿ ಸೃಷ್ಟಿಸಿದ್ದ KGF ಎನ್ನುವ ಆ ಗ್ಯಾಂಗ್ ಸ್ಟರ್ ಲೋಕವನ್ನು ಮೆಚ್ಚಿಕೊಳ್ಳದವರೇ ಇಲ್ಲ. ಕನ್ನಡದ ಮಣ್ಣಿನಲ್ಲಿ ಬಂಗಾರ ಅಗೆದ ಈ ಸಿನಿಮಾ ಅಂತರಾಷ್ಟ್ರೀಯ ಮಟ್ಟದಲ್ಲೂ ಕನ್ನಡದ ತಾಕತ್ತನ್ನು ತೋರಿಸಿತ್ತು. ಜೊತೆಗೆ ಸಾಕಷ್ಟು ದಾಖಲೆಗಳನ್ನು ತನ್ನದಾಗಿಸಿಕೊಂಡಿತ್ತು. ಈ ನಡುವೆ ಇತ್ತೀಚೆಗಷ್ಟೇ ಸಿನಿಮಾಗೆ ಬಂಡವಾಳ ಹೂಡಿದ್ದ ಹೊಂಬಾಳೆ ಫಿಲ್ಮ್ಸ್ KGF2 ಬಿಡುಗಡೆಯಾಗಿ ಒಂದು ವರ್ಷ ಕಳೆದಿರುವ ಹಿನ್ನಲೆಯಲ್ಲಿ ವಿಶೇಷವಾದ ವಿಡಿಯೋಗಳನ್ನು ಹಂಚಿಕೊಂಡಿತ್ತು, ಅದರಲ್ಲಿ KGF-3 ಬಗ್ಗೆ ಸುಳಿವು ನೀಡಿದ ಬೆನ್ನಲ್ಲೇ‌ ಇದೀಗ ನಟಿ ರವೀನಾ ಟಂಡನ್ ನೀಡಿರುವ ಹೇಳಿಕೆ ಸಂಚಲನ ಸೃಷ್ಟಿಸಿದೆ.

‘ಕೆಜಿಎಫ್’-2 ಸಿನಿಮಾ ಏ.14ಕ್ಕೆ ರಿಲೀಸ್ ಆಗಿ ಒಂದು ವರ್ಷವಾಗಿದೆ. ಇದೇ ಖುಷಿಯಲ್ಲಿ ಕೆಜಿಎಫ್ 3 ಬರುವ ಬಗ್ಗೆ ಸಿಹಿಸುದ್ದಿ ನೀಡಿದ್ದಾರೆ. ಮತ್ತೆ ತೆರೆಯ ಮೇಲೆ ರಾಕಿ ಭಾಯ್ ಆರ್ಭಟವನ್ನು ಕಣ್ತುಂಬಿಕೊಳ್ಳಲು ಜನ ಕಾಯುತ್ತಿದ್ದಾರೆ. ಈಗ ಕೆಜಿಎಫ್-3 ಚರ್ಚೆಯ ನಡುವೆಯೇ ನಟಿ ರಮಿಕಾ ಸೇನ್ ಖ್ಯಾತಿಯ ರವೀನಾ ಟಂಡನ್ ಅಚ್ಚರಿಯ ಹೇಳಿಕೆಯೊಂದನ್ನು‌ನೀಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್- ಪ್ರಶಾಂತ್ ನೀಲ್ ಕರೆ ಮಾಡಿ ಹೇಳಿದ್ದೇನು ಎನ್ನುವುದನ್ನು ರವೀನಾ ಬಹಿರಂಗ ಪಡಿಸಿದ್ದು, ಈ ಬಗೆಗಿನ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ರವೀನಾ ಟಂಡನ್, ‘ಕೆಜಿಎಫ್ 2 ಮೊದಲ ವಾರ್ಷಿಕೋತ್ಸವದ ದಿನ ಮೊದಲು ವಿಶ್ ಮಾಡಿದ್ದು, ಯಶ್ ಪತ್ನಿ ರಾಧಿಕಾ ಪಂಡಿತ್ ಎಂದು ಹೇಳಿದ್ದಾರೆ. ಏಪ್ರಿಲ್ 14ರ ಬೆಳಗ್ಗೆಯೇ ಯಶ್ ಪತ್ನಿ ರಾಧಿಕಾ ಪಂಡಿತ್ ವಿಶ್ ಮಾಡಿದ್ದರು ಎಂದಿದ್ದಾರೆ. ಜೊತೆಗೆ ಅದೇ ದಿನ ಸಂಜೆ ನಟ ಯಶ್ ಫೋನ್ ಮಾಡಿದ ವಿಚಾರನ್ನೂ ತಿಳಿಸಿದ್ದಾರೆ.

ರವೀನಾ‌ ಹೇಳಿದ್ದಿಷ್ಟು..

ಸಂದರ್ಶನವೊಂದರಲ್ಲಿ ಮಾತನಾಡಿದ ರವೀನಾ, ಏ.14ರ ಸಂಜೆ ಯಶ್ ನನಗೆ ಫೋನ್ ಮಾಡಿದ್ದರು. ನಾವಿಬ್ಬರೂ ವಾರ್ಷಿಕೋತ್ಸವಕ್ಕೆ ಒಬ್ಬರಿಗೊಬ್ಬರು ವಿಶ್ ಮಾಡಿಕೊಂಡೆವು. ಆಗ ಯಶ್ ಕೆಜಿಎಫ್ 3ಗೆ ರೆಡಿಯಾಗಬೇಕು ಅಂತ ಹೇಳಿದರು. ಆಗ ಮೊದಲ ಸೀನ್‌ನಲ್ಲೇ ನನ್ನನ್ನು ಸಾಯಿಸಬೇಡಿ ಅಂತ ಹೇಳಿದೆ. ಹೀಗೆ ಜೋಕ್ ಮಾಡಿಕೊಂಡೆ ನಕ್ಕೆವು. ಹಾಗೇ ಪ್ರಶಾಂತ್ ಕೂಡ ಫೋನ್ ಮಾಡಿದ್ದರು. ಆದರೆ, ಕೆಜಿಎಫ್ -3 ಯಾವಾಗ ಬರುತ್ತೆ ಅನ್ನೋದು ನಮಗೆ ಗೊತ್ತಿಲ್ಲ. ನಾವೆಲ್ಲರೂ ಬೇಗ ಬರಲಿ ಅಂತ ಕಾಯುತ್ತಿದ್ದೇವೆ. ಪ್ರಶಾಂತ್ ನೀಲ್ ಫೋನ್ ಮಾಡಿ ಪ್ರತಿ ದೃಶ್ಯದಲ್ಲೂ ಅದ್ಭುತವಾಗಿ ಮಾಡಿದ್ದೀರಿ ಎಂದು ಹೇಳಿದ್ದರು. ಪ್ರಶಾಂತ್ ನೀಲ್ ಕೂಡ ಆದಷ್ಟು ಬೇಗ ಮಾಡೋಣ ಅಂತ ಹೇಳಿದರು’ ಎಂದು ರವೀನಾ ಟಂಡನ್ ಹೇಳಿದ್ದಾರೆ.

ಯಶ್, ಪ್ರಶಾಂತ್ ಫುಲ್ ಬ್ಯುಸಿ!

ಒಂದು‌ ಕಡೆ ಹೊಂಬಾಳೆ ಫಿಲ್ಮ್ಸ್ ಕೆಜಿಎಪ್-3 ಬರುವ ಬಗ್ಗೆ ಸುಳಿವು ನೀಡಿದೆ. ಆದರೆ ಕೆಜಿಎಫ್ ರಾಕಿ ಬಾಯ್ ಯಶ್ ಮತ್ತು ಕೆಜಿಎಫ್ ಲೋಕ ಸೃಷ್ಟಿಸಿದ್ದ ಪ್ರಶಾಂತ್ ನೀಲ್ ಫುಲ್ ಬ್ಯುಸಿ ಆಗಿದ್ದಾರೆ. ಪ್ರಶಾಂತ್ ನೀಲ್ ಸದ್ಯ ಪ್ರಭಾಸ್ ಅವರಿಗೆ ಸಲಾರ್ ಸಿನಿಮಾ ಮಾಡುತ್ತಿದ್ದಾರೆ. ಅದಾದ ನಂತರ ಜೂ.NTR ಜೊತೆಗೆ ಸಿನಿಮಾ‌ ಮಾಡುವ ಬಗ್ಗೆ ಇತ್ತೀಚೆಗೆ ತಿಳಿಸಿದ್ದರು. ಇನ್ನೊಂದೆಡೆ ನಟ ಯಶ್‌ ತಮ್ಮ ಮುಂದಿನ ಸಿನಿಮಾದ ಬಗ್ಗೆ ಯಾವೊಂದು ಅಪ್ಡೇಟ್ ಕೂಡ ನೀಡುತ್ತಿಲ್ಲ. ಮೂಲಗಳ ಪ್ರಕಾರ ಖ್ಯಾತ ನಿರ್ದೇಶಕಿ ಮಲೆಯಾಳಂನ ಗೀತು ಮೋಹನ್ ದಾಸ್ ಜೊತೆ ಯಶ್ ಸಿನಿಮಾ‌ ಮಾಡಲಿದ್ದಾರಂತೆ. ಇದು ನಿಖರ ಸುದ್ದಿ ಆಗಿದ್ದರೆ ಕೆಜಿಎಫ್ ಅಭಿಮಾನಿಗಳು ಕೆಜಿಎಫ್-3 ನೋಡಲು ಇನ್ನೊಂದಿಷ್ಟು ವರ್ಷ ಕಾಯಲೇ ಬೇಕು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *