ಹೆಣ್ಮಕ್ಕಳ ಬಟ್ಟೆಯ ಬಗ್ಗೆ ಸಲ್ಮಾನ್ ಖಾನ್ ಅಸಭ್ಯ ಕಮೆಂಟ್ – ಬ್ಯಾಡ್ ಬಾಯ್ ಅಷ್ಟು ಕೆಟ್ಟದಾಗಿ ಹೇಳಿದ್ದೇನು?

ಹೆಣ್ಮಕ್ಕಳ ಬಟ್ಟೆಯ ಬಗ್ಗೆ ಸಲ್ಮಾನ್ ಖಾನ್ ಅಸಭ್ಯ ಕಮೆಂಟ್ – ಬ್ಯಾಡ್ ಬಾಯ್ ಅಷ್ಟು ಕೆಟ್ಟದಾಗಿ ಹೇಳಿದ್ದೇನು?

ನ್ಯೂಸ್ ಆ್ಯರೋ : ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಸಿನಿಮಾ ಜೊತೆಗೆ ಆಗಾಗ ವಿವಾದಾತ್ಮಕ ಹೇಳಿಕೆ ಮೂಲಕವೂ ಸದ್ದು ಮಾಡುತ್ತಿರುತ್ತಾರೆ. ಇದೀಗ ಮತ್ತೊಂದು ವಿವಾದಕ್ಕೆ ಮುನ್ನುಡಿ ಬರೆದಿರುವ ಸಲ್ಲು ಬಾಯ್ ಸಲ್ಲು ಬಾಯ್ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಕಿಸಿ ಕಾ ಭಾಯ್ ಕಿಸಿ ಜಾನ್ ಸಿನಿಮಾ ಮೂಲಕ ಸಲ್ಮಾನ್ ಅಭಿಮಾನಿಗಳ ಮುಂದೆ ಬಂದಿದ್ದು, ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ. ಪೂಜಾ ಹೆಗ್ಡೆ ಜೊತೆ ಸಲ್ಮಾನ್ ಖಾನ್ ನಟಿಸಿದ್ದಾರೆ. ಆದರೆ ಸಿನಿಮಾ ಪ್ರಚಾರದಲ್ಲಿರುವ ಸಲ್ಮಾನ್ ಖಾನ್ ಈ ವೇಳೆ ಹೆಣ್ಮಕ್ಕಳ ಬಟ್ಟೆ ವಿಚಾರವಾಗಿ ಹೇಳಿಕೆ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೇ ಸಲ್ಮಾನ್ ಖಾನ್ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದು, ಹೆಣ್ಮಕ್ಕಳ ಮೇಲೆ ದೌರ್ಜನ್ಯ ಮಾಡಿದವರು ಮಹಿಳೆಯ ಬಗ್ಗೆ ಮಾತನಾಡುತ್ತಾರೆ ಎಂಬ ಕಾಮೆಂಟ್ ಗಳು ಕೇಳಿ ಬರುತ್ತಿವೆ.

ಇನ್ನೂ ಕೆಲವು ದಿನಗಳ ಹಿಂದೆ ಹಿಂದೆ ನಟಿ ಪಲಕ್​ ತಿವಾರಿ ಶೂಟಿಂಗ್ ಸೆಟ್ ನಲ್ಲಿ ಹೆಣ್ಮಕ್ಕಳು ಮೈ ತುಂಬಾ ಬಟ್ಟೆ ಹಾಕಿಕೊಂಡು ಬರಬೇಕು ಎಂದು ಸಲ್ಮಾನ್ ಖಾನ್ ನಿಯಮ ಮಾಡಿದ್ದರು ಎಂದು ಹೇಳಿದ್ದರು. ಆ ಹೇಳಿಕೆ ವೈರಲ್ ಆಗುತ್ತಿದ್ದಂತೆ ತಮ್ಮ ಹೇಳಿಕೆಗೆ ಬೇರೆ ರೀತಿಯ ಸಮರ್ಥನೆ ನೀಡಲು ಪ್ರಯತ್ನಿಸಿದ್ದರು. ಆದರೆ ಈಗ ಈ ಬಗ್ಗೆ ಸ್ವತಃ ಸಲ್ಮಾನ್​ ಖಾನ್​ ಮೌನ ಮುರಿದಿದ್ದಾರೆ. ಮಹಿಳೆಯರ ಬಟ್ಟೆ ಬಗ್ಗೆ ತಮಗೆ ಇರುವ ಅಭಿಪ್ರಾಯ ಏನು ಎಂಬುದನ್ನು ಬಹಿರಂಗವಾಗಿ ಹೇಳಿದ್ದಾರೆ.

ಸಲ್ಮಾನ್ ಖಾನ್ ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ನೆಟ್ಟಿಗರು ಬ್ಯಾಡ್ ಬಾಯ್‌ಯನ್ನು ತರಾಟೆ ತೆಗೆದುಕೊಂಡಿದ್ದಾರೆ. ಹೆಣ್ಮಕ್ಕಳ ಮೇಲೆ ದೌರ್ಜನ್ಯ ಮಾಡಿದವರು ಮಹಿಳೆಯ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ಇದೆಲ್ಲ ಬೂಟಾಟಿಕೆ ಮಾತುಗಳು ಎಂದು ಗೊತ್ತಾಗುತ್ತಿದೆ ಎಂದು ಹೇಳಿದ್ದಾರೆ. ಇನ್ನು ಕೆಲವರು ನೀವು ಯಾಕೆ ಶರ್ಟ್ ತೆಗೆದುಕೊಂಡು ಓಡಾಡುತ್ತೀರಿ ಎಂದು ಕೇಳಿದ್ದಾರೆ. ಇನ್ನು ಕೆಲವರು ಸಲ್ಮಾನ್ ಪರ ವಾದಿಸುತ್ತಿದ್ದಾರೆ. ಸಲ್ಮಾನ್ ಖಾನ್ ಹೇಳಿದ್ದುಸರಿ ಇದೆ ಎನ್ನುತ್ತಿದ್ದಾರೆ.

ಸಲ್ಮಾನ್ ಖಾನ್ ಸದ್ಯ ಟೈಗರ್ -3 ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಸಲ್ಮಾನ್ ಖಾನ್ ಜೊತೆ ಕತ್ರಿನಾ ಕೈಫ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಮನೀಶ್ ಶರ್ಮಾ ಆಕ್ಷನ್ ಕಟ್ ಹೇಳಿದ್ದಾರೆ. ನವೆಂಬರ್ 10 ಸಿನಿಮಾ ರಿಲೀಸ್ ಆಗುತ್ತಿದೆ. ಸಲ್ಮಾನ್ ಖಾನ್ ಹೊಸ ಸಿನಿಮಾ ಯಾವುದು? ಯಾರ ಜೊತೆ ಸಿನಿಮಾ ಮಾಡುತ್ತಾರೆ ಎಂದು ಕಾದುನೋಡಬೇಕಿದೆ.

Related post

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…
ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷತುಂಬಾ ಚಿಂತೆ ಮಾನಸಿಕ ಶಾಂತಿಗೆ ಭಂಗ ತರಬಹುದು. ಆತಂಕ, ಉದ್ವೇಗದ ಪ್ರತೀ ತುಣುಕೂ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇದನ್ನು ತಡೆಯಿರಿ. ಬಯಸದೆ ಇರುವ ಯಾವುದೇ ಅತಿಥಿ…
Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…

Leave a Reply

Your email address will not be published. Required fields are marked *