ಸಲ್ಮಾನ್ ಖಾನ್ ಮದುವೆಯಾಗದಿರಲು ಅವರ ತಾಯಿಯೇ ಕಾರಣ – ಸಲ್ಲು ರಹಸ್ಯ ಕೊನೆಗೂ ಬಯಲು ಮಾಡಿದ ತಂದೆ ಸಲೀಂ ಖಾನ್

ಸಲ್ಮಾನ್ ಖಾನ್ ಮದುವೆಯಾಗದಿರಲು ಅವರ ತಾಯಿಯೇ ಕಾರಣ – ಸಲ್ಲು ರಹಸ್ಯ ಕೊನೆಗೂ ಬಯಲು ಮಾಡಿದ ತಂದೆ ಸಲೀಂ ಖಾನ್

ನ್ಯೂಸ್ ಆ್ಯರೋ‌ : ಬಾಲಿವುಡ್ ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಈ ನಟ ಬಿಗ್ ಬಾಸ್ ಹಿಂದಿ ಅವತರಣಿಕೆಯನ್ನು ನಡೆಸಿಕೊಡುತ್ತಿದ್ದಾರೆ. ಮಾತ್ರವಲ್ಲ ಜಾಹೀರಾತುಗಳಲ್ಲಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಲಕ್ಷಾಂತರ ಮಂದಿ ಅಬಿಮಾನಿಗಳನ್ನು ಹೊಂದಿರುವ ಸಲ್ಮಾನ್ ಖಾನ್ ಗೆ ವಯಸ್ಸು 60ರ ಸಮೀಪ ಬಂದರೂ ಇನ್ನೂ ಯಾಕೆ ಮದುವೆಯಾಗಿಲ್ಲ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆ. ಇದಕ್ಕೆ ಸ್ವತಃ ಅವರ ತಂದೆ ಸಲೀಂ ಖಾನ್ ಕಾರಣ ತಿಳಿಸಿದ್ದಾರೆ.

ಇತ್ತೀಚೆಗೆ ‘ತೇರೆ ಮೇರೆ ಬೀಚ್ ಮೇ’ ಶೋನಲ್ಲಿ ಭಾಗಿಯಾಗಿದ್ದ ಸಲೀಂ ಖಾನ್ ಅವರಿಗೆ ಸಲ್ಮಾನ್ ಖಾನ್ ಇನ್ನೂ ಬ್ರಹ್ಮಚಾರಿಯಾಗಿರುವುದಕ್ಕೆ ಕಾರಣ ಏನು ಎನ್ನುವುದನ್ನು ಕೇಳಲಾಯಿತು. ಸಲ್ಮಾನ್ ಖಾನ್ ಮದುವೆಯಾಗದಿರಲು ಅವರ ತಾಯಿ ಸಲ್ಮಾ ಖಾನ್ ಕಾರಣ ಎಂದು ಹೇಳಿರುವ ಸಲೀಂ ಖಾನ್ ಅದನ್ನು ವಿವರಿಸಿದ್ದಾರೆ.

ಸಲ್ಮಾನ್ ಖಾನ್ ಇಲ್ಲಿಯವರೆಗೆ ಬಹಳಷ್ಟು ಹುಡುಗಿಯರನ್ನು ಪ್ರೀತಿಸಿದ್ದರು. ಆದರೆ ಆ ಸಂಬಂಧ ಮದುವೆ ಎನ್ನುವ ದಡ ಸೇರಲೇ ಇಲ್ಲ. ಯಾವ ಹುಡುಗಿಯನ್ನು ಸಲ್ಮಾನ್ ಪ್ರೀತಿಸುತ್ತಾರೋ, ಆ ಹುಡುಗಿಯಲ್ಲಿ ತನ್ನ ತಾಯಿಯನ್ನು ಹುಡುಕಲು ಪ್ರಾರಂಭಿಸುತ್ತಾರೆ. ಇದರ ಪರಿಣಾಮವಾಗಿಯೇ ಆ ಹುಡುಗಿ ಸಲ್ಮಾನ್ ಅನ್ನು ಬಿಟ್ಟು ಹೋಗುತ್ತಾಳೆ. ಇದೇ ಕಾರಣದಿಂದ ಸಲ್ಮಾನ್ ಇಲ್ಲಿಯವರೆಗೆ ಬ್ರಹ್ಮಚಾರಿಯಾಗಿಯೇ ಉಳಿದಿದ್ದಾರೆ ಎಂದು ವಿವರಿಸಿದ್ದಾರೆ.

ಈ ವರ್ಷ ಬಿಡುಗಡೆಯಾದ ಸಲ್ಮಾನ್ ಚಿತ್ರ ‘ಕಿಸಿ ಕ ಭಾಯಿ ಕಿಸಿ ಕಿ ಜಾನ್’ ಸಾಧಾರಣ ಯಶಸ್ಸು ಕಂಡಿದೆ. ತಮಿಳು ಚಿತ್ರ ‘ವೀರಂ’ನ ರೀಮೇಕ್ ಆದ ಇದರಲ್ಲಿ ಕನ್ನಡತಿ ಪೂಜಾ ಹೆಗ್ಡೆ ನಾಯಕಿಯಾಗಿದ್ದರು. ಇನ್ನು ವರ್ಷಾಂತ್ಯದಲ್ಲಿ ಸಲ್ಮಾನ್-ಕತ್ರಿನಾ ಕೈಫ್ ಜೋಡಿಯ ‘ಟೈಗರ್ 3’ ಸಿನಿಮಾ ತೆರೆ ಕಾಣಲಿದೆ.

Related post

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ನ್ಯೂಸ್ ಆ್ಯರೋ‌ : ನಾವು ಪ್ರೀತಿಸುವ ಜೀವಗಳು ನಮ್ಮನ್ನು ದೂರ ಮಾಡಿದರೆ, ನಮ್ಮನ್ನು ನಿರ್ಲಕ್ಷ್ಯ ಮಾಡಿದರೆ ಅದರಿಂದಾಗುವ ನೋವು ಅಪಾರ. ಅದರಲ್ಲೂ ಪ್ರೇಯಸಿ ದೂರ ಮಾಡುತ್ತಿದ್ದರೆ ಅದನ್ನು ಸಹಿಸಲು…
ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ – ಸಿಸಿಟಿವಿಯಲ್ಲಿ ಘೋರ ಕೃತ್ಯ ಸೆರೆ, ವಿಡಿಯೋ ವೈರಲ್…!!

ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ…

ನ್ಯೂಸ್ ಆ್ಯರೋ : ಮಲಗುವ ವಿಚಾರಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ಸೂರತ್‌ನ ವ್ಯಕ್ತಿಯೊಬ್ಬ ತನ್ನ ಮಗಳಿಗೆ 25 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಇಡೀ ಕೃತ್ಯ ಸಿಸಿಟಿವಿಯಲ್ಲಿ…
ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ ಕಾರಣಿಕದಿಂದಾಗಿಯೇ ಇಲ್ಲಿಗೆ ಬಂದೆ ಎಂದ ಗುಳಿಕೆನ್ನೆ ಬೆಡಗಿ..

ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ…

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಬೆಡಗಿ, ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಅವರು ಬುಧವಾರ ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ…

Leave a Reply

Your email address will not be published. Required fields are marked *