ಮತ್ತೊಂದು ಚಿಕಿತ್ಸೆಗೆ ಒಳಗಾದ ಸಮಂತಾ ರುತ್ ಪ್ರಭು – ನಟಿಯ ಆರೋಗ್ಯ ಈಗ ಹೇಗಿದೆ?

ಮತ್ತೊಂದು ಚಿಕಿತ್ಸೆಗೆ ಒಳಗಾದ ಸಮಂತಾ ರುತ್ ಪ್ರಭು – ನಟಿಯ ಆರೋಗ್ಯ ಈಗ ಹೇಗಿದೆ?

ನ್ಯೂಸ್ ಆ್ಯರೋ‌ : ಟಾಲಿವುಡ್ ಸೂಪರ್ ಸ್ಟಾರ್ ಸಮಂತಾ ಅಭಿಮಾನಿಗಳ ನೆಚ್ಚಿನ ತಾರೆ. ಇತ್ತೀಚೆಗೆ ಅಭಿಮಾನಿಯೊಬ್ಬರು ಅವರಿಗಾಗಿ ತಮ್ಮ ಮನೆಯ ಪಕ್ಕದಲ್ಲಿ ದೇಗುಲವನ್ನೇ ನಿರ್ಮಿಸಿದ್ದಾರೆ. ಇದು ಸಮಂತಾ ಜನಪ್ರಿಯತೆಗೆ ಸಾಕ್ಷಿ. ಇಂತಹ ನಟಿ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಆಗಾಗ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ.

ಸಮಂತಾ ಮಯೋಸೈಟೀಸ್ ಕಾಯಿಲೆಯಿಂದ ಬಳಲುತ್ತಿದ್ದು, ಇದೀಗ ಐಸ್ ಥೆರಪಿಗೆ ಒಳಗಾಗಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೊಂದು ಯಾತನೆ ಥೆರಪಿ ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಕುರಿತು ತಿಳಿಸಿದ್ದಾರೆ.

ಕೆಲ ವರ್ಷಗಳಿಂದ ಅವರು ಮಯೋಸೈಟೀಸ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದು, ಅದರ ಭಾಗವಾಗಿ ಈಗ ಐಸ್ ಥೆರಪಿ ಮಾಡಿಸಿಕೊಂಡಿದ್ದಾರೆ. ಈ ಐಸ್ ಬಾತ್ ಥೆರಪಿ ಚಿತ್ರಹಿಂಸೆಯಿಂದ ಕೂಡಿದ್ದರೂ, ಅನಿವಾರ್ಯ. ಹಿಂಸೆ ಅನಿಸಿದರೂ ದೇಹಕ್ಕೆ ಚೈತನ್ಯವನ್ನು ನೀಡುವಂಥದ್ದು ಎಂದು ಹೇಳಿದ್ದಾರೆ. ದೇಹಕ್ಕೆ ಚೈತನ್ಯ ಬರುವುದಕ್ಕಾಗಿ ಕನಿಷ್ಠ 15 ನಿಮಿಷಗಳ ಕಾಲ ಐಸ್ ಬಾತ್ ಥೆರಪಿಗೆ ಒಳಗಾಗಬೇಕು ಎನ್ನುತ್ತಾರೆ ವೈದ್ಯರು.

ಅನಾರೋಗ್ಯದ ನಡುವೆಯೇ ಸಮಂತಾ ತಮ್ಮ ‘ಯಶೋದಾ’ ಸಿನಿಮಾದ ಚಿತ್ರೀಕರಣ ಮುಗಿಸಿದ್ದರು. ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ, ವಿಶ್ರಾಂತಿ ಪಡೆದ ಬಳಿಕ ಚೇತರಿಸಿಕೊಂಡಿದ್ದರು. ಇತ್ತೀಚೆಗೆ ‘ಶಾಕುಂತಲಂ’ ಸಿನಿಮಾದ ಪ್ರಚಾರ ಸಂದರ್ಭದಲ್ಲಿಯೂ ಮತ್ತೆ ಅನಾರೋಗ್ಯ ಕಾಡಿತ್ತು. ಸದ್ಯ ಅವರು ‘ಖುಷಿ’ ತೆಲುಗು ಚಿತ್ರ ಮತ್ತು ‘ಸಿಟಾಡೆಲ್’ ಹಿಂದಿ ವೆಬ್ ಸರಣಿಯಲ್ಲಿ ತೊಡಗಿಸಿಕೊಂಡಿದ್ದಾರೆ.

Related post

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ…

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು…
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಆ್ಯರೋ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿ ಇಂದು…
ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ…

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ…

Leave a Reply

Your email address will not be published. Required fields are marked *