ನಾಪತ್ತೆಯಾಗಿದ್ದಾರೆ ಸ್ಯಾಂಡಲ್ ವುಡ್ ನಟ ನವೀನ್ ಕೃಷ್ಣ ಪತ್ನಿಯ ಅಕ್ಕ – ಪತ್ತೆಗೆ ಸಹಕರಿಸುವಂತೆ ನವೀನ್ ಮನವಿ

ನಾಪತ್ತೆಯಾಗಿದ್ದಾರೆ ಸ್ಯಾಂಡಲ್ ವುಡ್ ನಟ ನವೀನ್ ಕೃಷ್ಣ ಪತ್ನಿಯ ಅಕ್ಕ – ಪತ್ತೆಗೆ ಸಹಕರಿಸುವಂತೆ ನವೀನ್ ಮನವಿ

ನ್ಯೂಸ್ ಆ್ಯರೋ : ಕನ್ನಡ ಚಿತ್ರರಂಗದಲ್ಲಿ ನಟ ಹಾಗೂ ನಿರ್ದೇಶಕನಾಗಿ ಕೆಲಸ ಮಾಡಿರುವ ನವೀನ್ ಕೃಷ್ಣ ಅವರ ಪತ್ನಿ ಅಕ್ಕ ಇತ್ತೀಚೆಗೆ ನಾಪತ್ತೆಯಾಗಿದ್ದು, ಈ ಬಗ್ಗೆ ನವೀನ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಸಹೋದರಿ ನೀತಾ ಪವರ್ ಅವರ ವಿಳಾಸ ಮತ್ತು ಪೋಟೋವನ್ನು ಪೋಸ್ಟ್ ಮಾಡಿರುವ ಅವರು ‘ನನ್ನ ಅಕ್ಕ ಕಾಣೆಯಾಗಿದ್ದಾರೆ, ಕಂಡರೆ ಕೂಡಲೇ ತಿಳಿಸಿ’ ಎಂದು ಬರೆದುಕೊಂಡಿದ್ದಾರೆ.

ನವೀನ್ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ನೀತಾ ಪಾವರ್ ಜನವರಿ 17ರಂದು‌ ಮನೆಯಿಂದ ಹೊರಗೆ ಹೋದವರು ಮರಳಿ ಬಾರದೆ ಕಾಣೆಯಾಗಿದ್ದಾರಂತೆ. ಆದ್ದರಿಂದ ‘ಈ ಮಾಹಿತಿಯನ್ನು ಆದಷ್ಟು ಹಂಚಿಕೊಳ್ಳಿ, ಮಾಹಿತಿ ಸಿಕ್ಕರೆ ದಯವಿಟ್ಟು ತಿಳಿಸಿ’ ಎಂದು ಫೋನ್‌ ನಂಬರ್ ನೀಡಿದ್ದಾರೆ. ಆದರೆ‌ ಸದ್ಯ ಈ ಪೋಸ್ಟ್ ಟ್ವಿಟರ್ ಖಾತೆಯಿಂದ ಡಿಲೀಟ್ ಆಗಿದೆ.

ಹಿರಿಯ ನಟ ಶ್ರೀನಿವಾಸ್ ಮೂರ್ತಿ ಅವರ ಪುತ್ರನಾದ ನವೀನ್ ಕೃಷ್ಣ ನಾಯಕ ನಟರಾಗುವ ಮೊದಲು ಚಿತ್ರರಂಗದಲ್ಲಿ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದರು. ಧಿಮಾಕು ಅವರಿಗೆ ಹೆಸರು ತಂದು ಕೊಟ್ಟ ಸಿನಿಮಾಗಳಲ್ಲೊಂದು.

ಸ್ಟಾರ್ ನಟರ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸ್ವತಃ ನಿರ್ದೇಶಕರಾಗಿ ಹಲವು ಧಾರಾವಾಹಿಗಳನ್ನು ನಿರ್ದೇಶನ ಮಾಡಿದ್ದಾರೆ. ಕಿರುತೆರೆಯಲ್ಲಿ ಕಿರಿಜಾ ಕಲ್ಯಾಣ, ಪತ್ತೆದಾರಿ ಪ್ರತಿಭಾ, ಕಮಲಿ, ಉಘೇ ಉಘೆ ಮಾದೇಶ್ವರ, ರಾಧಾಕೃಷ್ಣ ಮತ್ತು ಯಡಿಯೂರು ಶ್ರೀ ಸಿದ್ದಲಿಂಗೇಶ್ವರದಲ್ಲಿ ಬಣ್ಣ ಹಚ್ಚಿದ್ದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *