‘ನನ್ನ ಪತ್ನಿಗೆ ಮಂತ್ರಿಯೊಂದಿಗೆ ಅಫೇರ್ ಇತ್ತು, ಅದಕ್ಕೆ ಇಬ್ಬರನ್ನೂ ನಾನು ಕೊಂದೆʼ – ಬಾಲಿವುಡ್ ನಟ ಸಂಜಯ್ ದತ್ ಶಾಕಿಂಗ್ ಹೇಳಿಕೆ ವೈರಲ್..!!

‘ನನ್ನ ಪತ್ನಿಗೆ ಮಂತ್ರಿಯೊಂದಿಗೆ ಅಫೇರ್ ಇತ್ತು, ಅದಕ್ಕೆ ಇಬ್ಬರನ್ನೂ ನಾನು ಕೊಂದೆʼ – ಬಾಲಿವುಡ್ ನಟ ಸಂಜಯ್ ದತ್ ಶಾಕಿಂಗ್ ಹೇಳಿಕೆ ವೈರಲ್..!!

ನ್ಯೂಸ್ ಆ್ಯರೋ : ಬಾಲಿವುಡ್‌ ನಟ ಸಂಜಯ್ ದತ್ ತಮ್ಮ ವೈಯಕ್ತಿಕ ಬದುಕಿನ ವಿಚಾರದಲ್ಲಿ ವಿವಾದಕ್ಕೆ ಕಾರಣರಾದವರು. ಡ್ರಗ್ಸ್‌, ಮುಂಬೈ ಬಾಂಬ್‌ ಸ್ಫೋಟ ಪ್ರಕರಣ ಸೇರಿದಂತೆ ಹಲವು ವಿಚಾರಗಳಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅದೆಷ್ಟೋ ತಪ್ಪುಗಳನ್ನು ಮಾಡಿ ಇದೀಗ ಒಳ್ಳೆಯ ಹಾದಿಯಲ್ಲಿ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದಾರೆ.

ಇವರು ಈಚೆಗೆ ನಟ ಯಶ್ ಅಭಿನಯದ ಕೆಜಿಎಫ್ 2ನಲ್ಲಿ ಅಧೀರನ ಪಾತ್ರದಲ್ಲಿ ಹವಾ ಸೃಷ್ಟಿಸಿದ್ದರು. ಸದ್ಯ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸಂಜಯ್ ಅವರು ದಳಪತಿ ವಿಜಯ್ ಅವರ ‘ಲಿಯೋ’ ಸಿನಿಮಾದಲ್ಲೂ ರಗಡ್ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದಲ್ಲದೆ ಸ್ಯಾಂಡಲ್‌ವುಡ್‌ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ‘ಕೇಡಿ’ ಸಿನಿಮಾದಲ್ಲೂ ನಟಿಸಲಿದ್ದಾರೆ.

ಈಚೆಗೆ ಸಂಜಯ್ ಅವರು ನೀಡಿದ ಹೇಳಿಕೆ ಭಾರೀ ವೈರಲ್ ಆಗಿದೆ. ಸಂಜಯ್‌ ಅವರು ಈಚೆಗೆ ಕರಣ್ ಜೋಹರ್ ನಡೆಸಿಕೊಡುವ ‘ಕಾಫಿ ವಿತ್ ಕರಣ್’ ಶೋನಲ್ಲಿ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ ‘ನನ್ನ ಪತ್ನಿಗೆ ಮಂತ್ರಿಯೊಂದಿಗೆ ಅಫೇರ್ ಇಟ್ಟುಕೊಂಡಿದ್ದರು, ಅದಕ್ಕೆ ಆಕೆಯನ್ನು ಕೊಂದೆʼ ಎಂದು ಹೇಳುವ ಮೂಲಕ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣರಾಗಿದ್ದರು. ಅಸಲಿಗೆ ಈ ರೀತಿ ಸಂಜು ಏಕೆ ಹೇಳಿದ್ರು ಅಂತ ನೋಡೋಣ.

ಸಂಜಯ್‌ ದತ್ ಅವರಿಗೆ ಮೂರು ಮದುವೆಯಾಗಿದ್ದು ಇದೀಗ ಮಾನ್ಯತಾ ಅವರ ಜತೆ ಜೀವನ ಕಳೆಯುತ್ತಿದ್ದಾರೆ. 1987ರಲ್ಲಿ ರೀಚಾ ಶರ್ಮಾ ಅವರನ್ನು ಸಂಜಯ್ ಅವರು ಮದುವೆಯಾದರು. ಬ್ರೇನ್ ಟ್ಯೂಮರ್‌ನಿಂದ ರೀಚಾ ಅವರು ತೀರಿಕೊಂಡರು. ನಂತರ 1988ರಲ್ಲಿ ರಿಯಾ ಪಿಳ್ಳಯ್‌ ಅವರನ್ನು ಸಂಜಯ್ ದತ್ ಅವರು ಎರಡನೇ ಮದುವೆಯಾದರು. ಆದರೆ ಕಾರಣಾಂತರಗಳಿಂದ 2008ರಲ್ಲಿ ಇಬ್ಬರು ವಿಚ್ಛೇದನ ಪಡೆದುಕೊಂಡರು. ಮತ್ತೆ ಸಂಜಯ್‌ 2008ರಲ್ಲಿ ಮಾನ್ಯತಾ ಅವರನ್ನು ವಿವಾಹವಾದರು.

ಹಾಗಾದ್ರೆ ಸಂಜು ಈ ಮೂವರಲ್ಲಿ ಯಾರನ್ನು ಸಾಯಿಸಿದ್ದು ಎಂದು ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ನಾನು ಹೆಂಡತಿಯನ್ನು ಸಾಯಿಸಿದ್ದು ಈ ಜನ್ಮದಲ್ಲಿ ಅಲ್ಲ. ನನ್ನ ಕಳೆದ ಜನ್ಮದಲ್ಲಿ ನಡೆದ ವಿಷಯವಾಗಿದೆ ಎಂದು ವಿವರಿಸಿದರು.

ಅಶೋಕ ಸಾಮ್ರಾಜ್ಯವಿದ್ದ ಕಾಲದಲ್ಲಿ ನಾನು ರಾಜನಾಗಿದ್ದೆ. ನನ್ನ ಮಂತ್ರಿಯೊಂದಿಗೆ ನನ್ನ ಪತ್ನಿ ಅಫೇರ್ ಇಟ್ಟುಕೊಂಡಿದ್ದಳು. ನಾನು ಸಾಯಲಿ ಅಂತಾನೇ ಯುದ್ದಕ್ಕೆ ಕಳುಹಿಸಿದ್ದಳು. ಆದರೆ, ನಾನು ಸಾಕಷ್ಟು ಯೋಧರನ್ನು ಯುದ್ಧದಲ್ಲಿ ಸಾಯಿಸಿದೆ. ಯುದ್ದದ ನಂತರ ಇಬ್ಬರ ಮದ್ಯೆ ಇದ್ದ ಅಫೇರ್ ಬಗ್ಗೆ ಗೊತ್ತಾಗಿ, ನಾನು ನನ್ನ ಪತ್ನಿ ಹಾಗೂ ಮಂತ್ರಿ ಸಾಯಿಸಿ ಬಿಟ್ಟೆ ಎಂದು ಸಂಜಯ್ ದತ್ ಹೇಳಿದ್ದಾರೆ.

ಕಳೆದ ಜನ್ಮದಲ್ಲಿ ಇಬ್ಬರು ವ್ಯಕ್ತಿಗಳನ್ನು ಕೊಂದಿದ್ದರಿಂದ ಈ ಜನ್ಮದಲ್ಲಿ ಅದರ ಕರ್ಮವನ್ನು ಅನುಭವಿಸಬೇಕಾಗಿದೆ. ಹಿಂದಿನ ಜನ್ಮದಿಂದಲೇ ನಾನು ಒಳ್ಳೆಯ ಕುಟುಂಬದಲ್ಲಿ ಹುಟ್ಟಿದೆ. ಹಾಗಾಗಿಯೇ ನಾನು ಈಗ ಬದುಕಿದ್ದೇನೆ. ಆ ಕಾರಣಕ್ಕೆ ನಾನು ಈ ವೃತ್ತಿಯಲ್ಲಿದ್ದೇನೆ ಎಂದು ಸಂಜಯ್ ಹೇಳಿದರು. ಹೋದ ಜನ್ಮದಲ್ಲಿ ಮಾಡಿದ ಕರ್ಮದ ಫಲ ಈ ಜನ್ಮದಲ್ಲಿ ತಾಯಿ ನರ್ಗೀಸ್ ದತ್, ಮೊದಲ ಪತ್ನಿ ರಿಚಾ ಶರ್ಮಾ ಕಳೆದುಕೊಂಡೆ ಎಂದು ಹೇಳಿದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *