ನಟಿ ಪ್ರಿಯ ಜತೆ ಗಟ್ಟಿಮೇಳಕ್ಕೆ ಸಜ್ಜಾದ ನಟ ಸಿದ್ದು – ಪ್ರಣಯ ಪಕ್ಷಿಗಳಿಗೆ ಸಿಕ್ತು ಪೋಷಕರ ಗ್ರೀನ್ ಸಿಗ್ನಲ್

ನಟಿ ಪ್ರಿಯ ಜತೆ ಗಟ್ಟಿಮೇಳಕ್ಕೆ ಸಜ್ಜಾದ ನಟ ಸಿದ್ದು – ಪ್ರಣಯ ಪಕ್ಷಿಗಳಿಗೆ ಸಿಕ್ತು ಪೋಷಕರ ಗ್ರೀನ್ ಸಿಗ್ನಲ್

ನ್ಯೂಸ್ ಆ್ಯರೋ : ಪಾರು ಸೀರಿಯಲ್ ಖ್ಯಾತಿಯ ಸಿದ್ದು ಮೂಲಿಮನಿ ಹಾಗೂ ಗಟ್ಟಿಮೇಳ ಸೀರಿಯಲ್ ಖ್ಯಾತಿಯ ಪ್ರಿಯ ಆಚಾರ್ ಅವರ ನಿಶ್ಚಿತಾರ್ಥ ಭಾನುವಾರ ದಾವಣಗೆರೆಯಲ್ಲಿ ನಡೆಯಿತು. ಈ ಅದ್ಧೂರಿ ಕಾರ್ಯಕ್ರಮದಲ್ಲಿ ಸೀರಿಯಲ್‌ನ ಕಲಾವಿದರು ಭಾಗವಹಿಸಿದ್ದರು.

ಡ್ಯಾನ್ಸ್ ಶೋ ಮೂಲಕ ಪರಿಚಯವಾಗಿದ್ದ ಈ ಜೋಡಿ ನಂತರ ಧಮಾಕ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದರು. ಈ ವೇಳೆ ಸ್ನೇಹ ಬೆಳೆದು, ಪ್ರೀತಿಗೆ ತಿರುಗಿದೆ. ಇದೀಗ ಗುರುಹಿರಿಯರ ಒಪ್ಪಿಗೆ ಪಡೆದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಟಿ ಪ್ರಿಯಾ ಹುಟ್ಟೂರಾದ ದಾವಣಗೆರೆಯಲ್ಲಿ ನಿಶ್ಚಿತಾರ್ಥ ನಡೆದಿದೆ.

ಸಿದ್ದು ಮೂಲಿಮನಿ ಕನ್ನಡದ ಸಾಕಷ್ಟು ಸಿನಿಮಾ ಹಾಗೂ ಸೀರಿಯಲ್‌ಗಳಲ್ಲಿ ಬಣ್ಣ ಹಚ್ಚಿದ್ದಾರೆ. ಧಮಾಕ, ವಿಕ್ರಾಂತ್‌ರೋಣ, ರಂಗಿತರಂಗ ಚಿತ್ರಗಳಲ್ಲಿ ನಟಿಸಿದ್ದಾರೆ. ಇನ್ನೂ ಪ್ರಿಯಾ `ಗಟ್ಟಿಮೇಳ’ ಸೀರಿಯಲ್ ಜೊತೆ ಪರಭಾಷೆಯಲ್ಲೂ ತುಂಬಾನೇ ಖ್ಯಾತಿ ಗಳಿಸಿದ್ದಾರೆ. ಇನ್ನೂ ಶೀಘ್ರದಲ್ಲಿಯೇ ಈ ಜೋಡಿ ಹಸೆಮಣೆ ಏರಲಿದ್ದಾರೆ ಎಂದು ತಿಳಿದುಬಂದಿದೆ.

ಸಿದ್ದು ಅವರು ಕಳೆದ ಹಲವು ವರ್ಷದಿಂದ ಸಿನಿಮಾ ಹಾಗೂ ಕಿರುತೆರೆಯಲ್ಲಿ ಸಕ್ರಿಯರಾಗಿದ್ದು, ಅವರಿಗೆ ಹೆಚ್ಚು ಹೆಸರು ತಂದುಕೊಟ್ಟಿದ್ದು ಪಾರು ಧಾರಾವಾಹಿ. ಇದರಲ್ಲಿ ಸಿದ್ದು ನಾಯಕ ನಟ ಆದಿಯ ಸಹೋದರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾರು ಧಾರಾವಾಹಿ ಮೂಲಕ ಪ್ರೀತು ಆಗಿ ಜನಪ್ರಿಯತೆಯನ್ನೂ ಗಳಿಸಿದ್ದಾರೆ. ಸಿನಿಮಾಗಳಲ್ಲಿ ಬ್ಯುಸಿ ಇರುವ ಸಿದ್ದು ಅವರು, ಕಿರುತೆರೆಯಲ್ಲೂ ಬ್ಯುಸಿಯಾಗಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *