ಸೋನು ಗೌಡ ದತ್ತು ಪಡೆದಿದ್ದ ಬಾಲಕಿಯ ಮನೆಯ ಸ್ಥಳ ಮಹಜರು – ಸೋನು ಗೌಡಳನ್ನು ಮರಕ್ಕೆ ಕಟ್ಟಿ ಹಾಕಲು ಮುಂದಾದ ಆಕ್ರೋಶಿತ ಗ್ರಾಮಸ್ಥರು…!!

ಸೋನು ಗೌಡ ದತ್ತು ಪಡೆದಿದ್ದ ಬಾಲಕಿಯ ಮನೆಯ ಸ್ಥಳ ಮಹಜರು – ಸೋನು ಗೌಡಳನ್ನು ಮರಕ್ಕೆ ಕಟ್ಟಿ ಹಾಕಲು ಮುಂದಾದ ಆಕ್ರೋಶಿತ ಗ್ರಾಮಸ್ಥರು…!!

ನ್ಯೂಸ್ ಆ್ಯರೋ : ಮಗು ದತ್ತು ಪ್ರಕರಣದಲ್ಲಿ ಸಿಲುಕಿ ಹಾಕಿಕೊಂಡಿರುವ ರೀಲ್ಸ್‌ ಸ್ಟಾರ್‌, ಮಾಜಿ ಬಿಗ್‌ ಬಾಸ್‌ ಸ್ಪರ್ಧಿ ಸೋನು ಗೌಡ ಅವರನ್ನು ಸ್ಥಳ ಮಹಜರು ಮಾಡಲು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಕಾಚಾಪುರ ಗ್ರಾಮದಕ್ಕೆ ಕರೆದೊಯ್ಯಲಾಗಿದ್ದು, ಈ ವೇಳೆ ಸೋನು ಗೌಡಳನ್ನು ಗ್ರಾಮಸ್ಥರು ಮರಕ್ಕೆ ಕಟ್ಟಿ ಹಾಕಿ ಥಳಿಸುವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಹೆಣ್ಣು ಮಗುವನ್ನು ದತ್ತು ಪಡೆದ ವಿಚಾರವಾಗಿ ಸೋನು ಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಇಂದು ಮಹಜರು ಮಾಡಲಾಗುತ್ತಿದೆ. ಬಾಲಕಿ ಚಿಕ್ಕಪ್ಪ ಅಮರೇಗೌಡ ಅವರ ಮನೆಯಿಂದ ಮಗು ಕರೆದೊಯ್ದಿದ್ದ ಈ ಹಿನ್ನೆಲೆಯಲ್ಲಿ ಆ ಮನೆಯಲ್ಲಿ ಸ್ಥಳ ಮಹಜರು‌ ಮಾಡಲಾಗುತ್ತಿದೆ.

ಆರೋಪಿ ಸೋನುಗೌಡ ಇದೇ ಮನೆಯಲ್ಲಿ ರೀಲ್ಸ್ ಕೂಡ ಮಾಡಿದ್ದಳು. ದತ್ತು ಪ್ರಕರಣ ವಿಚಾರ ತಿಳಿಯುತ್ತಲೇ ಕೋಪಗೊಂಡ ಗ್ರಾಮಸ್ಥರು ಸೋನುಗೌಡಳನ್ನ ಹಿಡಿದು ಕಟ್ಟಿ ಹಾಕಲು ಮುಂದಾದರು. ಜನ ರೊಚ್ಚಿಗೇಳುತ್ತಿದ್ದಂತೆಯೇ ಬ್ಯಾಡರಹಳ್ಳಿ ಪೊಲೀಸರು ಅಲ್ಲಿಂದ ಕರೆದೊಯ್ದರು.

ಅಪ್ರಾಪ್ತ ಬಾಲಕಿಯ ಹೆತ್ತವರಿಗೆ ಬೆಂಗಳೂರು ಬ್ಯಾಡರಹಳ್ಳಿ ಪೊಲೀಸರು ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇಂದು ಬೆಳಗ್ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯೇ ಬೆಂಗಳೂರಿಗೆ ಬಾಲಕಿ ತಂದೆ-ತಾಯಿ ತೆರಳಿದ್ದರು. ರಾತ್ರೋ ರಾತ್ರಿ ಬಾಲಕಿಯನ್ನು ಆರೋಪಿತೆ ಸೋನುಗೌಡ ಕರೆದುಕೊಂಡು ಹೋಗಿದ್ದಳು ಎನ್ನಲಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *