ರಾಜಮೌಳಿ ಬಳಿ ತಮ್ಮ ಮನದಾಸೆಯನ್ನು ಹೇಳಿಕೊಂಡ ಆನಂದ್ ಮಹೀಂದ್ರಾ – ಶ್ರೀಮಂತ ಉದ್ಯಮಿಗೆ ಅದೆಂಥಾ ಸಿನಿಮಾ ನೋಡೋ ಆಸೆ ಗೊತ್ತಾ..!

ರಾಜಮೌಳಿ ಬಳಿ ತಮ್ಮ ಮನದಾಸೆಯನ್ನು ಹೇಳಿಕೊಂಡ ಆನಂದ್ ಮಹೀಂದ್ರಾ – ಶ್ರೀಮಂತ ಉದ್ಯಮಿಗೆ ಅದೆಂಥಾ ಸಿನಿಮಾ ನೋಡೋ ಆಸೆ ಗೊತ್ತಾ..!

ನ್ಯೂಸ್ ಆ್ಯರೋ : ಟಾಲಿವುಡ್ ಖ್ಯಾತ ನಿರ್ದೇಶಕ ಎಸ್.ಎಸ್.ರಾಜಮೌಳಿ ಅವರು ‘ಬಾಹುಬಲಿ’ ಮತ್ತು ‘RRR’ನಂತಹ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಅದರಲ್ಲೂ ‘RRR’ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಪಡೆಯುವ ಮೂಲಕ ಕೇವಲ ಟಾಲಿವುಡ್ ಮಾತ್ರವಲ್ಲದೇ ಇಡೀ ಭಾರತೀಯ ಚಿತ್ರರಂಗಕ್ಕೆ ಗೌರವ ತಂದುಕೊಟ್ಟಿದೆ. ಪ್ರತಿಷ್ಠಿತ ಪ್ರಶಸ್ತಿಯನ್ನು ಗಳಿಸಿದ್ದಕ್ಕಾಗಿ ಸಮಾಜದ ಎಲ್ಲಾ ವರ್ಗದ ಜನರು ಅವರನ್ನು ಶ್ಲಾಘಿಸಿದ್ದಾರೆ.

ಇತ್ತೀಚೆಗೆ ಪ್ರಮುಖ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಮತ್ತು ಎಸ್.ಎಸ್.ರಾಜಮೌಳಿ ನಡುವಿನ ಸಂಭಾಷಣೆ ಟ್ವಿಟರ್ನಲ್ಲಿ ಟ್ರೆಂಡಿಂಗ್ ಆಗಿದೆ. ಮಹೀಂದ್ರಾ ಸಂಸ್ಥೆಯ ಚೇರ್ಮನ್ ಆಗಿರುವ ಆನಂದ್ ಮಹೀಂದ್ರಾ ಅವರು ಟ್ವಿಟರ್ನಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ ಹೊಸ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಾ ಗಮನ ಸೆಳೆಯುತ್ತಿರುತ್ತಾರೆ.

ಅವರು ಚಲನಚಿತ್ರ ಪ್ರೇಮಿಯೂ ಆಗಿರುವುದರಿಂದ ಈ ಬಾರಿ ಸಿಂಧೂ ಕಣಿವೆ ನಾಗರೀಕತೆಯ ಕುರಿತು ಸಿನಿಮಾ ಮಾಡುವಂತೆ ರಾಜಮೌಳಿ ಅವರಲ್ಲಿ ವಿನಂತಿ ಮಾಡಿದ್ದಾರೆ. ಇದಕ್ಕೆ ರಾಜಮೌಳಿಯೂ ಸಕಾರಾತ್ಮಕವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ಸಿಂಧೂ ಕಣಿವೆ ನಾಗರೀಕತೆ ಸಂಬಂಧಿಸಿದ ಕೆಲವು ಫೋಟೋಗಳನ್ನು ಹಂಚಿಕೊಂಡಿರುವ ಆನಂದ್ ಮಹೀಂದ್ರಾ ಅವರು, “ಇವು ಇತಿಹಾಸವನ್ನು ಜೀವಂತಗೊಳಿಸುವ ಮತ್ತು ನಮ್ಮ ಕಲ್ಪನೆಗಳನ್ನು ಪ್ರಚೋದಿಸುವ ಅದ್ಭುತ ಚಿತ್ರಗಳಾಗಿವೆ. ಈ ಪುರಾತನ ನಾಗರೀಕತೆಯ ಬಗ್ಗೆ ಜಾಗತಿಕ ಮಟ್ಟದಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಬೇಕಿದೆ. ಇಂತಹ ಸಮಯದಲ್ಲಿ ಜಗತ್ತಿಗೆ ಸಿಂಧು ನಾಗರೀಕತೆಯ ಕುರಿತಾದ ಸಿನಿಮಾವನ್ನು ನೀವು ಮಾಡಬಹುದೇ” ಎಂದು ಬರೆದು ರಾಜಮೌಳಿ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಯಾಗಿ ರಾಜಮೌಳಿ ಪ್ರತ್ಯುತ್ತರ ನೀಡಿದ್ದು, ‘ಮಗಧೀರ’ ಚಿತ್ರದ ಘಟನೆಗಳನ್ನು ನೆನಪಿಸಿಕೊಂಡಿದ್ದಾರೆ. ಸಿಂಧೂ ನಾಗರೀಕತೆಯನ್ನು ಆಧರಿಸಿ ಚಿತ್ರ ಮಾಡಲು ಆಸಕ್ತಿ ಇದೆ ಎಂಬುದಾಗಿ ಹೇಳಿದ್ದಾರೆ. “ಧೋಲವೀರದಲ್ಲಿ ‘ಮಗಧೀರ’ ಚಿತ್ರೀಕರಣದ ವೇಳೆ ನಾನು ತುಂಬಾ ಪುರಾತನವಾದ ಮರಗಳನ್ನು ನೋಡಿದ್ದೆ. ಅದು ಪಳೆಯುಳಿಕೆಯಾಗಿ ಮಾರ್ಪಟ್ಟಿದೆ.

ಸಿಂಧೂ ನಾಗರೀಕತೆಯ ಉಗಮ ಮತ್ತು ಪತನದ ಚಿತ್ರದ ಚಿಂತನೆ ಆ ಮರದಿಂದ ನಿರೂಪಿಸಲ್ಪಟ್ಟಿದೆ. ಕೆಲವು ವರ್ಷಗಳ ನಂತರ ಪಾಕಿಸ್ತಾನಕ್ಕೆ ಹೋಗಿದ್ದೆ. ಆದರೆ ಮೊಹೆಂಜೊದಾರೊಗೆ ಭೇಟಿ ನೀಡಲು ತುಂಬಾ ಪ್ರಯತ್ನಿಸಿದೆ. ಆದರೆ ದುರಾದೃಷ್ಟವಾತ್ ನನಗೆ ಅನುಮತಿ ಸಿಕ್ಕಿಲ್ಲ” ಎಂದು ಬೇಸರದ ಎಮೋಜಿ ಜೊತೆ ಉತ್ತರಿಸಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *