ವೈರಲ್ ನಟಿ ಮಹಾಲಕ್ಷ್ಮಿ ಪತಿ ರವೀಂದರ್ ಚಂದ್ರಶೇಖರನ್ ಬಂಧನ – ಏನು ಆರೋಪ? ವಂಚನೆ ಎಷ್ಟು ಕೋಟಿ ಗೊತ್ತಾ?

ವೈರಲ್ ನಟಿ ಮಹಾಲಕ್ಷ್ಮಿ ಪತಿ ರವೀಂದರ್ ಚಂದ್ರಶೇಖರನ್ ಬಂಧನ – ಏನು ಆರೋಪ? ವಂಚನೆ ಎಷ್ಟು ಕೋಟಿ ಗೊತ್ತಾ?

ನ್ಯೂಸ್‌ ಆ್ಯರೋ : ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಬೆನ್ನಲ್ಲೇ ಕಾಲಿವುಡ್ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಅವರನ್ನು ಬಂಧಿಸಲಾಗಿದೆ.

ಕಿರುತೆರೆ ನಟಿ ಮಹಾಲಕ್ಷ್ಮಿ ಶಂಕರ್ (Mahalakshmi Shankar) ಅವರನ್ನು ವಿವಾಹವಾದ ಬಳಿಕ ಹೆಚ್ಚು ಸುದ್ದಿಯಲ್ಲಿದ್ದ ರವೀಂದರ್ ಅವರನ್ನು ವಂಚನೆ ಪ್ರಕರಣದಲ್ಲಿ ಬಂಧಿಸಲಾಗಿದೆ.

ಲಿಬ್ರಾ ಪ್ರೊಡಕ್ಷನ್ ಹೆಸರಿನ ನಿರ್ಮಾಣ ಸಂಸ್ಥೆಯನ್ನು ನಡೆಸುತ್ತಿರುವ ರವೀಂದರ್ ಚಂದ್ರಶೇಖರನ್, ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆ ಆರಂಭಿಸುವುದಾಗಿ ಷೇರುದಾರರನ್ನಾಗಿ ಸೇರಿಸಿಕೊಳ್ಳುವುದಾಗಿ ಕೆಲವರಿಂದ ಹಣ ಪಡೆದಿದ್ದರು. ಒಟ್ಟು 16 ಕೋಟಿ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ಚೆನ್ನೈನ ಬಾಲಾಜಿ ಎಂಬವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

2021ರಲ್ಲಿ ಈ ವಂಚನೆ ಪ್ರಕರಣ ನಡೆದಿದ್ದು, ದೂರು ಕೂಡ ದಾಖಲಾಗಿತ್ತು. ಈಗ ರವೀಂದರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ರವೀಂದರ್ ಅವರು ಇಬ್ಬರಿಗೆ 8 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರವೀಂದರ್ ವಿರುದ್ದ ಮತ್ತೊಂದು ದೂರು ದಾಖಲಾಗಿದ್ದು, ವಿಜಯ್ ಎಂಬುವರಿಂದ 15 ಲಕ್ಷ ರೂಪಾಯಿ ಪಡೆದಿದ್ದರು. ಈ ಹಣವನ್ನು ಸಿನೆಮಾವೊಂದಕ್ಕೆ ಹೂಡಿಕೆ ಮಾಡಿದ್ದು, ಬಂದ ಲಾಭದಲ್ಲಿ ಪಾಲು ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಚಿತ್ರ ಬಿಡುಗಡೆಯಾಗಿ ತಿಂಗಳು ಕಳೆದರೂ ರವೀಂದರ್ ಹಣ ಮರಳಿ ನೀಡಿದ್ದ ಎಂದು ವಿಜಯ್ ಪೊಲೀಸರಿಗೆ ದೂರು ಕೊಟ್ಟಿದ್ದರು.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *