ರಕ್ಷಿತ್ ಶೆಟ್ಟಿ – ರಶ್ಮಿಕಾ ಮಂದಣ್ಣ ಬ್ರೇಕಪ್ ಗೆ ಕಾರಣ ಕೊನೆಗೂ ರಿವೀಲ್ – ರಶ್ಮಿಕಾ ತಾಯಿ ಸುಮನ್ ಹೇಳಿದ್ದೇನು?

ರಕ್ಷಿತ್ ಶೆಟ್ಟಿ – ರಶ್ಮಿಕಾ ಮಂದಣ್ಣ ಬ್ರೇಕಪ್ ಗೆ ಕಾರಣ ಕೊನೆಗೂ ರಿವೀಲ್ – ರಶ್ಮಿಕಾ ತಾಯಿ ಸುಮನ್ ಹೇಳಿದ್ದೇನು?

ನ್ಯೂಸ್ ಆ್ಯರೋ‌ : ‘ನ್ಯಾಷನಲ್ ಕ್ರಶ್’, ಕನ್ನಡತಿ ರಶ್ಮಿಕಾ ಮಂದಣ್ಣ ಸದ್ಯ ಭಾರತೀಯ ಚಿತ್ರರಂಗದಲ್ಲಿ ಬ್ಯುಸಿ ಇರುವ ಕಲಾವಿದೆಯರ ಪೈಕಿ ಒಬ್ಬರು. 2016ರಲ್ಲಿ ಸ್ಯಾಂಡಲ್‍ವುಡ್ ನಲ್ಲಿ ತೆರೆಕಂಡ ಸೂಪರ್ ಹಿಟ್ ಚಿತ್ರ ‘ಕಿರಿಕ್ ಪಾರ್ಟಿ’ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ ಅವರು ಬಹು ಬೇಗನೆ ಪರ ಭಾಷೆಗಳಿಗೂ ಕಾಲಿಟ್ಟರು. ರಶ್ಮಿಕಾ ಮತ್ತು ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಸಂಬಂಧ ವಿವಾಹ ನಿಶ್ಚಿತಾರ್ಥದ ಬಳಿಕ ಮುರಿದು ಬಿದ್ದಿತ್ತು. ಈ ಬಗ್ಗೆ ರಶ್ಮಿಕಾ ತಾಯಿ ಸುಮನ್ ಮಂದಣ್ಣ ಮಾತನಾಡಿದ್ದಾರೆ.

2017ರಲ್ಲಿ ರಕ್ಷಿತ್ ಮತ್ತು ರಶ್ಮಿಕಾ ನಿಶ್ಚಿತಾರ್ಥ ನಡೆದಿತ್ತು. ಅದಾದ ಒಂದು ವರ್ಷದ ಬಳಿಕ ಅಂದರೆ 2018 ರ ಸೆಪ್ಟಂಬರ್ ನಲ್ಲಿ ಈ ಜೋಡಿ ಬೇರ್ಪಟ್ಟಿತು. ಹೊಂದಾಣಿಕೆಯ ಸಮಸ್ಯೆಗಳಿಂದ ಅವರು ಬೇರ್ಪಟ್ಟಿದ್ದರು. ಆದರೆ ಈ ಬ್ರೇಕಪ್‌ನಿಂದಾಗಿ ಎರಡು ಕುಟುಂಬದವರೂ ಆಘಾತಗೊಂಡಿದ್ದರು ಎಂದು ಸುಮನ್ ಮಂದಣ್ಣ ಹೇಳಿದ್ದಾರೆ.

”ರಶ್ಮಿಕಾ ತನ್ನ ಪೋಷಕರು, ಕುಟುಂಬದ ಹಿರಿಯರು ಮತ್ತು ಸ್ನೇಹಿತರ ಜೊತೆ ಸಮಾಲೋಚಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಂಡರು. ಇದು ಕಠಿಣ ನಿರ್ಧಾರವಾಗಿತ್ತು. ಈ ವೈಯಕ್ತಿಕ ಮತ್ತು ಭಾವನಾತ್ಮಕ ಹಿನ್ನಡೆಯಿಂದ ಆದ ನೋವಿನಿಂದ ಹೊರಬರಲು ರಶ್ಮಿಕಾ ಸಾಕಷ್ಟು ಕಷ್ಟಪಟ್ಟರು” ಎಂದು ಸುಮನ್ ಅಂದಿನ ದಿನಗಳ ಮೆಲುಕು ಹಾಕಿದ್ದಾರೆ.

“ನಾವು ಈಗ ಆಘಾತದಿಂದ ಚೇತರಿಕೆಯ ಹಾದಿಯಲ್ಲಿದ್ದೇವೆ. ಪ್ರತಿಯೊಬ್ಬ ವ್ಯಕ್ತಿಗೆ, ಅವನ ಜೀವನವೇ ಮೊದಲು. ಯಾರೂ ಒಬ್ಬರನ್ನೊಬ್ಬರು ನೋಯಿಸಲು ಇಷ್ಟಪಡುವುದಿಲ್ಲ ಮತ್ತು ಎಲ್ಲರೂ ಸಂತೋಷವಾಗಿರಬೇಕು” ಎಂದಿದ್ದಾರೆ. ರಕ್ಷಿತ್‌ ಜೊತೆ ಬ್ರೇಕಪ್‌ ಬಳಿಕ ರಶ್ಮಿಕಾ ಟಾಲಿವುಡ್ ನಟ ವಿಜಯ್ ದೇವರಕೊಂಡ ಜೊತೆಗೆ ಡೇಟಿಂಗ್ ಮಾಡುತ್ತಿರುವ ಬಗ್ಗೆ ವದಂತಿಗಳು ಹರಿದಾಡುತ್ತಿದ್ದವು. ಆದರೆ ತಾವಿಬ್ಬರೂ ಉತ್ತಮ ಸ್ನೇಹಿತರು ಎಂದು ಇಬ್ಬರೂ ಸ್ಪಷ್ಟನೆ ನೀಡಿದ್ದಾರೆ.

ರಶ್ಮಿಕಾ ಕೈಯಲ್ಲಿರುವ ಪ್ರಾಜೆಕ್ಟ್ ಗಳು

ಕನ್ನಡ, ತೆಲುಗು, ತಮಿಳು ಚಿತ್ರರಂಗದ ಬಳಿಕ ಇದೀಗ ರಶ್ಮಿಕಾ ಹಿಂದಿ ಸಿನಿಮಾಗಳಲ್ಲಿಯೂ ಸಕ್ರಿಯರಾಗಿದ್ದಾರೆ. ಸದ್ಯ ಅವರು ಹಿಂದಿಯ ನಾಲ್ಕು, ತೆಲುಗಿನ ಎರಡು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *