‘ದಿ ಎಲಿಫೆಂಟ್​ ವಿಸ್ಪರರ್ಸ್’ಡಾಕ್ಯುಮೆಂಟರಿಗೆ ‘ಆಸ್ಕರ್‌’ಗರಿ – ಮಾವುತರಿಗೆ ಬಂಪರ್ ಬಹುಮಾನ ಘೋಷಿಸಿದ ಸಿಎಂ ಸ್ಟಾಲಿನ್

‘ದಿ ಎಲಿಫೆಂಟ್​ ವಿಸ್ಪರರ್ಸ್’ಡಾಕ್ಯುಮೆಂಟರಿಗೆ ‘ಆಸ್ಕರ್‌’ಗರಿ – ಮಾವುತರಿಗೆ ಬಂಪರ್ ಬಹುಮಾನ ಘೋಷಿಸಿದ ಸಿಎಂ ಸ್ಟಾಲಿನ್

ನ್ಯೂಸ್‌ ಆ್ಯರೋ : ಅಮೆರಿಕದ ಲಾಸ್​ ಏಂಜಲೀಸ್​ನ ಡಾಲ್ಫಿ ಥಿಯೇಟರ್​ನಲ್ಲಿ ನಡೆದ 2023 ನೇ ಸಾಲಿನ ಆಸ್ಕರ್​ ಪ್ರಶಸ್ತಿ ಸಮಾರಂಭದಲ್ಲಿ ಭಾರತದ ಎರಡು ಚಿತ್ರತಂಡ ಆಸ್ಕರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು.

‘ಆರ್​ಆರ್​​ಆರ್’​ ತೆಲುಗು ಚಿತ್ರದ ‘ನಾಟು ನಾಟು’ ಅತ್ಯುತ್ತಮ ಮೂಲ ಗೀತೆ ಮತ್ತು ಕಾರ್ತಿಕಿ ಗೊನ್ಸಾಲ್ವೆಸ್​ ಅವರ ‘ದಿ ಎಲಿಫೆಂಟ್​ ವಿಸ್ಪರರ್ಸ್’​ ಅತ್ಯುತ್ತಮ ಸಾಕ್ಷ್ಯಚಿತ್ರಕ್ಕೆ ಆಸ್ಕರ್​ ಪ್ರಶಸ್ತಿ ಲಭಿಸಿದೆ. ಎರಡೂ ಚಿತ್ರತಂಡಕ್ಕೂ ಶುಭಾಶಯಗಳ ಮಹಾಪೂರವೇ ಹರಿದುಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ರಾಜಕೀಯ ಗಣ್ಯರು, ಕ್ರೀಡಾಪಟುಗಳು, ಸಿನಿಮಾ ರಂಗದವರು, ಜನ ಸಾಮಾನ್ಯರು ಈಗಾಗಲೇ ಶುಭಕೋರಿದ್ದಾರೆ.

ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರು ಪ್ರಶಸ್ತಿ ವಿಜೇತ ಡಾಕ್ಯುಮೆಂಟರಿಯ ಕಥಾ ನಾಯಕ ಮತ್ತು ನಾಯಕಿಗೆ ಭರ್ಜರಿ ಬಹುಮಾನ ಘೋಷಣೆ ಮಾಡಿದ್ದಾರೆ. ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿಯ ನಿಜವಾದ ಹೀರೋ ಬೊಮ್ಮನ್ ಮತ್ತು ಹಿರೋಯಿನ್ ಬೆಳ್ಳಿ ಎಂಬ ಮಾವುತ ದಂಪತಿಗಳು. ಈ ಡಾಕ್ಯುಮೆಂಟರಿಯಲ್ಲಿ ಇವರ ಬದುಕನ್ನು ತೋರಿಸಲಾಗಿದೆ. ಆಸ್ಕರ್ ಲಭಿಸಿದ ಖುಷಿಯಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಇವರಿಬ್ಬರನ್ನೂ ಸಿಎಂ ಕಚೇರಿಗೆ ಕರೆಸಿಕೊಂಡು ನೆನಪಿನ ಫಲಕ ಮತ್ತು ₹2 ಲಕ್ಷ ಬಹುಮಾನ ನೀಡಿದ್ದಾರೆ.

ಕೇವಲ ಈ ಇಬ್ಬರಿಗೆ ಮಾತ್ರ ಬಹುಮಾನ ನೀಡಿಲ್ಲ. ಆನೆ ಶಿಬಿರದಲ್ಲಿ ಕೆಲಸ ಮಾಡುತ್ತಿರುವ 91 ಮಾವುತರಿಗೂ ತಲಾ ಒಂದೊಂದು ಲಕ್ಷ ರೂಪಾಯಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಾವುತರಿಗೆ ಮನೆ ಕಟ್ಟಿಕೊಡಲು 9.1 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸ್ಟಾಲಿನ್ ಅವರು ದಂಪತಿಯನ್ನು ಸನ್ಮಾನಿಸಿ, ಚೆಕ್ ವಿತರಣೆ ಮಾಡಿರುವ ಫೋಟೋವನ್ನು ಶೇರ್ ಮಾಡಿ, ಶುಭಕೋರಿದ್ದಾರೆ.

Related post

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…
ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷತುಂಬಾ ಚಿಂತೆ ಮಾನಸಿಕ ಶಾಂತಿಗೆ ಭಂಗ ತರಬಹುದು. ಆತಂಕ, ಉದ್ವೇಗದ ಪ್ರತೀ ತುಣುಕೂ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇದನ್ನು ತಡೆಯಿರಿ. ಬಯಸದೆ ಇರುವ ಯಾವುದೇ ಅತಿಥಿ…
Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…

Leave a Reply

Your email address will not be published. Required fields are marked *