ಮತ್ತೊಬ್ಬ ಖ್ಯಾತ ನಟನ ಮಗಳು ಚಂದವನಕ್ಕೆ ಎಂಟ್ರಿ – ಹೆಸರಾಂತ ನಿರ್ದೇಶಕನ ಚಿತ್ರದಲ್ಲಿ ರಿಯಲ್ ಸ್ಟಾರ್ ಪುತ್ರಿ…!!

ಮತ್ತೊಬ್ಬ ಖ್ಯಾತ ನಟನ ಮಗಳು ಚಂದವನಕ್ಕೆ ಎಂಟ್ರಿ – ಹೆಸರಾಂತ ನಿರ್ದೇಶಕನ ಚಿತ್ರದಲ್ಲಿ ರಿಯಲ್ ಸ್ಟಾರ್ ಪುತ್ರಿ…!!

ನ್ಯೂಸ್ ಆ್ಯರೋ : ನೆನಪಿರಲಿ ಪ್ರೇಮ್‌ ಪುತ್ರಿ ಅಮೃತಾ ಅವರು ಧನಂಜಯ್‌ ನಿರ್ಮಾಣದ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಇದೀಗ ಇನ್ನೋರ್ವ ಖ್ಯಾತ ನಾಯಕ ನಟನ ಮಗಳು ಚಂದನವನಕ್ಕೆ ಎಂಟ್ರಿಯಾಗಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.. ‌

ರಿಯಲ್‌ ಸ್ಟಾರ್‌ ಉಪೇಂದ್ರ ಪುತ್ರಿ ಐಶ್ವರ್ಯಾ ಇದೀಗ ಸಿನಿಮಾರಂಗಕ್ಕೆ ಬಹು ವರ್ಷಗಳ ಬಳಿಕ ಮತ್ತೆ ನಾಯಕಿಯಾಗಿ ಎಂಟ್ರಿಕೊಡಲು ಸಿದ್ಧತೆಯಲ್ಲಿದ್ದಾರೆ. ಈ ಹಿಂದೆ ದೇವಕಿ ಸಿನಿಮಾದಲ್ಲಿ ಐಶ್ವರ್ಯಾ ಅವರು ನಟಿಸಿದ್ದರು.

ಇದೀಗ ಡಾ. ರಾಜ್‌ ಕುಟುಂಬದ ಕುಡಿ ಯುವ ರಾಜ್‌ಕುಮಾರ್‌ ನಾಯಕನಾಗಿ ನಟಿಸಲಿರುವ ಮತ್ತು ಸಂತೋಷ್‌ ಆನಂದ್‌ ರಾಮ್‌ ನಿರ್ದೇಶನ ಮಾಡುತ್ತಿರುವ ಸಿನಿಮಾದಲ್ಲಿ ಐಶ್ವರ್ಯಾ ನಟಿಸಲಿದ್ದಾರೆ ಎಂದು ತಿಳಿದುಬಂದಿದೆ.ಈ ವಿಚಾರವನ್ನು ಶೀಘ್ರದಲ್ಲೇ ಅಧಿಕೃತವಾಗಿ ನಿರ್ದೇಶಕರು ಘೋಷಣೆ ಮಾಡಲಿದ್ದಾರೆ.

ಶರಣ್‌ ಅಭಿನಯದ ಗುರು ಶಿಷ್ಯರು ಸಿನಿಮಾ ಇತ್ತೀಚೆಗಷ್ಟೇ ತೆರೆಗೆ ಬಂದಿತ್ತು. ಈ ಸಿನಿಮಾದಲ್ಲಿ ಸ್ಯಾಂಡಲ್‌ವುಡ್‌ನ ನಟರ ಮಕ್ಕಳೇ ಪ್ರಮುಖ ಪಾತ್ರದಲ್ಲಿ ಬಣ್ಣ ಹಚ್ಚಿ, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಹೊಂಬಾಳೆ ಫಿಲಂಸ್‌ ನಿರ್ಮಾಣ ಮಾಡಲಿರುವ ದೊಡ್ಡ ಬಜೆಟ್‌ನ ಸಿನಿಮಾಕ್ಕೂ ಸ್ಟಾರ್‌ ನಟನ ಮಗಳು ಬಣ್ಣ ಹಚ್ಚಲಿದ್ದಾರೆ ಎಂಬ ಸುದ್ದಿಯಿದೆ.

ಸಂತೋಷ್‌ ಆನಂದ್‌ರಾಮ್‌ ಮತ್ತು ಪುನೀತ್‌ ಕಾಂಬಿನೇಷನ್‌ ಸಿನಿಮಾ ಇಷ್ಟೊತ್ತಿಗಾಗಲೇ ಸಿದ್ಧವಾಗಿರುತ್ತಿತ್ತು. ಅಪ್ಪು ಅಕಾಲಿಕ ಸಾವಿನಿಂದ ಪ್ರಾಜೆಕ್ಟ್‌ಗಳಿಗೆಲ್ಲ ಸಂತೋಷ್ ಅವರು ಬ್ರೇಕ್ ನೀಡಿದ್ದರು. ಇದೀಗ ಪುನೀತ್‌ ಮಾಡಬೇಕಿದ್ದ ಕಥೆಯನ್ನೇ ಸಂತೋಷ್‌ ಆನಂದ್‌ ರಾಮ್‌ ಯುವರಾಜ್‌ಕುಮಾರ್‌ಗೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಆನಂದ್ ರಾಮ್ ಅವರು ಯಾವುದೇ ವಿಷಯವನ್ನು ಬಿಟ್ಟುಕೊಟ್ಟಿಲ್ಲ.

Related post

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…
ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…

Leave a Reply

Your email address will not be published. Required fields are marked *