ರಶ್ಮಿಕಾಗೆ ಕೈಕೊಟ್ಟು ಸಮಂತಾ ಜೊತೆ ಡ್ಯುಯೆಟ್ ಹಾಡ್ತಾರಾ ವಿಜಯ್ ದೇವರಕೊಂಡ? – ಸಮಂತಾ ಐ ಮಿಸ್ ಯೂ ಎಂದ ದೇವರಕೊಂಡ ವಿಡಿಯೋ ವೈರಲ್..!!

ರಶ್ಮಿಕಾಗೆ ಕೈಕೊಟ್ಟು ಸಮಂತಾ ಜೊತೆ ಡ್ಯುಯೆಟ್ ಹಾಡ್ತಾರಾ ವಿಜಯ್ ದೇವರಕೊಂಡ? – ಸಮಂತಾ ಐ ಮಿಸ್ ಯೂ ಎಂದ ದೇವರಕೊಂಡ ವಿಡಿಯೋ ವೈರಲ್..!!

ನ್ಯೂಸ್‌ ಆ್ಯರೋ : ಇದೇ 1ರಂದು ತೆರೆಗೆ ಬರಲು ರೆಡಿಯಾಗಿರುವ ‘ಖುಷಿ’ ಸಿನಿಮಾದ ಜೋಡಿಯಾಗಿರುವ ವಿಜಯ್ ದೇವರಕೊಂಡ ಹಾಗೂ ಸಮಂತಾ ಅವರನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ವಿಜಯ್ ದೇವರಕೊಂಡ ಅವರು ಸಮಂತಾಗೆ ವಿಡಿಯೋ ಕರೆ ಮಾಡಿ ಮಿಸ್‌ ಯೂ ಎಂದಿದ್ದಾರೆ. ಅದಲ್ಲದೆ ಜೋಕ್ ಹೇಳುವುದಾಗಿ ಕೊನೆಗೆ ಹಾಡನ್ನು ಹೇಳಿ ಕರೆಯನ್ನು ಕಟ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಡಿಯೋ ಕರೆಯನ್ನು ರೆಕಾರ್ಡ್ ಮಾಡಿದ ವಿಜಯ್ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅವರಿಬ್ಬರ ಸಂಭಾಷನೆ ಹೀಗಿತ್ತು.

ಕಾಲ್​ ರಿಸೀವ್ ಮಾಡಿದ ಸಮಂತಾ ವಾಟ್ಸ್​ ಅಪ್​, ಎಲ್ಲವೂ ಓಕೆ ನಾ ಎಂದು ಕೇಳಿದ್ದಾರೆ. ಇದಕ್ಕೆ ವಿಜಯ್ ಐ ಮಿಸ್​ ಯೂ ಎಂದಿದ್ದಾರೆ. ವಿಜಯ್ ಮಾತು ಕೇಳಿ ಸಮಂತಾ ನಾಚಿಕೊಂಡ್ರು. ವಿಡಿಯೋ ಕಾಲ್ ಮಾಡಿ ನನ್ನ ಬಳಿ ಒಂದು ‘ನಾಕ್ ನಾಕ್’ ಜೋಕ್ ಇದೆ ಎಂದಿದ್ದಾರೆ ವಿಜಯ್, ಅಮೆರಿಕದಲ್ಲಿ ಈಗ ಎಷ್ಟು ಸಮಯ ಗೊತ್ತೆ? ನಿನ್ನದು ಜೋಕ್ ಆ, ಬೇಗ ಹೇಳು ಎಂದಿದ್ದಾರೆ. ವಿಜಯ್ ದೇವರಕೊಂಡ ನಾಕ್ ನಾಕ್ ಎಂದಾಗ ನಿಯಮದಂತೆ ಸಮಂತಾ, ಯಾರದು? ಅಥವಾ ಹೂ? ಎನ್ನುತ್ತಾರೆ. ಆಗ ವಿಜಯ್ ದೇವರಕೊಂಡ ನಾ ರೋಜಾ ನುವ್ವೆ ಎಂದು ಹಾಡು ಹಾಡಿದ್ದಾರೆ.

ಸಮಂತಾ – ವಿಜಯ್ ದೇವರಕೊಂಡ ನಟನೆಯ ಖುಷಿ ಸಿನಿಮಾದ ಐದನೇ ಹಾಡು ರಿಲೀಸ್ ಆಗಿದೆ. ಸಮಂತಾಗೆ ಹೇ ಹೆಂಡತಿ ಎನ್ನುತ್ತಾ ವಿಜಯ್ ಹೆಜ್ಜೆ ಹಾಕಿದ್ದಾರೆ. ಕನ್ನಡದಲ್ಲಿಯೂ ರಿಲೀಸ್ ಆಗಿರುವ ಈ ಹಾಡಿಗೆ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ.

ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಬಿಡುಗಡೆಯಾಗಲಿದೆ. ಮೈತ್ರಿ ಮೂವಿ ಬ್ಯಾನರ್ ಈ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸಿದ್ದು, ಸಮಂತಾ- ನಾಗಚೈತನ್ಯ ನಟಿಸಿದ್ದ ‘ಮಜಿಲಿ’ ಸಿನಿಮಾದ ನಿರ್ದೇಶಕ ಶಿವ ಖುಷಿ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಇದೇ 1ರಂದು ತೆರೆಗೆ ಬರಲು ರೆಡಿಯಾಗಿದೆ.

ಮೊದಲ ಬಾರಿಗೆ ತೆರೆಯ ಮೇಲೆ ಒಂದಾಗಿರೋ ಸಮಂತಾ- ವಿಜಯ್‌ ದೇವರಕೊಂಡ ನಟನೆಯ ಈ ಸಿನಿಮಾ ಪ್ರೇಕ್ಷಕರಿಗೆ ಅದೆಷ್ಟರ ಮಟ್ಟಿಗೆ ಮೋಡಿ ಮಾಡುತ್ತೆ ಎಂದು ಕಾದು ನೋಡಬೇಕಿದೆ.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *